ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dr M C Sudhakar: ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಹಣ ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು : ಡಾ.ಎಂ.ಸಿ.ಸುಧಾಕರ್

ಕರಿಯಪ್ಪಲ್ಲಿ ನಗರಕ್ಕೆ ಹೊಂದಿಕೊಂಡಿದ್ದರೂ ಕಾಗತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ. ಆದರೂ ಭವಿಷ್ಯದಲ್ಲಿ ನಗರಕ್ಕೆ ಸೇರುತ್ತದೆ ಎಂಬುದನ್ನು ಗಮನಿಸಿ ಒಳಚರಂಡಿ ಯೋಜನೆ ಯನ್ನು ಅನುಷ್ಠಾನಗೊಳಿಸಿದ್ದೆ. ಆದರೆ ಕಳೆದ 10 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ನಿರಂತರವಾಗಿ ದೂರುಗಳು ಬರುತ್ತಿವೆ

13 ಲಕ್ಷ ರೂ ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟನೆ

ಚಿಂತಾಮಣಿ ತಾಲೂಕು ಕರಿಯಪ್ಪಲ್ಲಿಯಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ೧೩ ಲಕ್ಷ ರೂ ವೆಚ್ಚದ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು.

Profile Ashok Nayak Feb 18, 2025 9:15 PM

ಚಿಂತಾಮಣಿ: ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಹಣವನ್ನು ಶೀಘ್ರವಾಗಿ ಬಿಡುಗಡೆ ಮಾಡ ಲಾಗುವುದು. ತಾಂತ್ರಿಕ ಕಾರಣದಿಂದ ಒಂದು ತಿಂಗಳು ತಡವಾಗಿರಬಹುದು. ಯಾವುದೇ ಕಾರಣದಿಂದ ನಿಲ್ಲಿಸಲಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ನಗರದ ಹೊರವಲಯದ ಕರಿಯಪ್ಪಲ್ಲಿಯಲ್ಲಿ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ 13 ಲಕ್ಷ ರೂ ವೆಚ್ಚದ ಅಂಗನವಾಡಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರ್ಕಾರ ಅನುಷ್ಠಾನ ಗೊಳಿಸಿ ರುವ 5 ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸು ವುದಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿ ದ್ದಾರೆ.

ಜನರು ವಿರೋಧ ಪಕ್ಷಗಳ ಸುಳ್ಳು ಅಪಪ್ರಚಾರಗಳಿಗೆ ಕಿವಿಗೊಡಬಾರದು. ಬಾಕಿ ಹಣವನ್ನು ಶೀಘ್ರವಾಗಿ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಕರಿಯಪ್ಪಲ್ಲಿ ನಗರಕ್ಕೆ ಹೊಂದಿಕೊಂಡಿದ್ದರೂ ಕಾಗತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದೆ. ಆದರೂ ಭವಿಷ್ಯದಲ್ಲಿ ನಗರಕ್ಕೆ ಸೇರುತ್ತದೆ ಎಂಬುದನ್ನು ಗಮನಿಸಿ ಒಳಚರಂಡಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದೆ. ಆದರೆ ಕಳೆದ 10 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ನಿರಂತರವಾಗಿ ದೂರುಗಳು ಬರುತ್ತಿವೆ. ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು 40 ಲಕ್ಷ ರೂಗಳ ವೆಚ್ಚದಲ್ಲಿ ಸೆಪ್ಟಿಕ್ ಟ್ಯಾಂಕ್ ನಿರ್ಮಾಣಕ್ಕೆ ಕ್ರಮಕೈಗೊಳ್ಳ ಲಾಗಿದೆ. ರಸ್ತೆಗೆ 30 ಲಕ್ಷ ರೂ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರಿ ವ್ಯವಸ್ಥೆಯಲ್ಲಿ ಯೋಜನೆಗಳ ಮಂಜೂರಾತಿ, ಅನುಮೋದನೆ, ಟೆಂಡರ್ ಪ್ರಕ್ರಿಯೆ ಹಂತ ಗಳನ್ನು ದಾಟಿ ಬರಬೇಕಾದರೆ ಸಮಯ ಬೇಕಾಗುತ್ತದೆ ಎಂದರು.
ಕರಿಯಪ್ಪಲ್ಲಿ ಖಂಡಿತ ನಗರ ಭಾಗಕ್ಕೆ ಸೇರುತ್ತದೆ. ಜೋಡಿ ರಸ್ತೆಯೂ ಆಗುತ್ತದೆ. ಅಕ್ಕಪಕ್ಕದ ಕೆಲವರ 3-4 ಅಡಿ ಜಮೀನು ರಸ್ತೆಗೆ ಹೋಗಬಹುದು. ಸಾರ್ವಜನಿಕ ಹಿತದೃಷ್ಠಿಯಿಂದ ಸಹಕಾರ ನೀಡಬೇಕು. 3-4 ಅಡಿ ಹೋದರೂ ತಮ್ಮ ಜಮೀನುಗಳ ಬೆಲೆ 5-6 ಪಟ್ಟು ಹೆಚ್ಚಾಗುತ್ತದೆ ಎಂದು ತಿಳಿಸಿದರು.
ತಾಲ್ಲೂಕಿನ ಜನರಿಗೆ ಉದ್ಯೋಗ ಒದಗಿಸಲು 10 ವರ್ಷಗಳ ಹಿಂದೆ 792 ಎಕರೆ ಜಾಗವನ್ನು ಗುರುತಿಸಿದ್ದೆ. ನಾನು ಸೋತ ನಂತರ ಯಾರು ಅದರ ಕಡೆ ಗಮನಹರಿಸಲಿಲ್ಲ. ಕೈಗಾರಿಕಾ ಪ್ರಾಂಗಣಕ್ಕಾಗಿ ಗುರುತಿಸಿದ್ದ ಸೋಮಯಾಜಲಹಳ್ಳಿ ಸರ್ವೆ ನಂ 88 ರಲ್ಲಿ 288 ಎಕರೆ ಡೀಮ್ಡ್ ಗೆ ಸೇರಿಸಿದ್ದಾರೆ. ಎಷ್ಠೆ ಪ್ರಯತ್ನ ಪಟ್ಟರೂ ಅದನ್ನು ತೆಗೆಸಲು ಸಾಧ್ಯವಾಗಲಿಲ್ಲ. ಮತ್ತೆ ಮ್ಯಾಕಲಸೊಣ್ಣೇನಹಳ್ಳಿ ಮತ್ತು ಕೊಂಗತಿಮ್ಮನಹಳ್ಳಿ 400 ಎಕರೆ ಸರ್ಕಾತರಿ ಜಾಗ ಸೇರಿ 550 ಎಕರೆಯನ್ನು ಗುತಿಸಿದ್ದೇವೆ. ರೈತರ 150 ಎಕರೆಗೆ ಉತ್ತಮ ಬೆಲೆಯನ್ನು ಕೊಡಿ ಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಕೈಗಾರಿಕಾ ಪ್ರಾಂಗಣ ಸ್ಥಾಪನೆಗೊಂಡರೆ ಕರಯಪ್ಪಲ್ಲಿ ಚಿತ್ರಣವೇ ಬದಲಾಗುತ್ತದೆ. ಇಲ್ಲಿಂ ದಲೇ ರಸ್ತೆ ಆರಂಭವಾಗಿ ಉತ್ತಮ ಜೋಡಿ ರಸ್ತೆಗಳು ಅಭಿವೃದ್ಧಿಯಾಗುತ್ತವೆ. ಜನರಿಗೆ ಉದ್ಯೋಗ ಒದಗಿಸಲು ಸಿದ್ದೇಪಲ್ಲಿ ಕ್ರಾಸ್ ಮತ್ತು ಮಸ್ತೇನಹಳ್ಳಿಯಲ್ಲಿ ಕೈಗಾರಿಕಾ ಪ್ರಾಂಗಣ ಗಳು ಆರಂಭಗೊಳ್ಳುತ್ತವೆ ಎಂದು ತಿಳಿಸಿದರು.

ಇದೇ ವೇಳೆ ಸಚಿವರು ಕಾಗತಿ ಗ್ರಾಮದಲ್ಲಿ ಗ್ರಂಥಾಲಯ ಕಟ್ಟಡಕ್ಕೆ ಭೂಮಿಪೂಜೆ, ದೊಡ್ಡ ಗಂಜೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ತರಗತಿ ಕೊಠಡಿಗಳ ಉದ್ಘಾಟನೆ, ಸಿದ್ದಿಮಠ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ, ಗೊಲ್ಲಹಳ್ಳಿ ಗ್ರಾಮದಲ್ಲಿ ನೀರಿನ ಘಟಕ ಉದ್ಘಾಟನೆ ಮತ್ತಿತರ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಭೂಮಿಪೂಜೆಯನ್ನು ನೆರವೇರಿಸಿದರು.

ತಹಶೀಲ್ದಾರ್ ಸುದರ್ಶನಯಾದವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಸೇರಿದಂತೆ ಆ ಭಾಗದ ಮುಖಂಡರು ಭಾಗವಹಿಸಿದ್ದರು.