Chikkaballapur News: ಹೋರಾಟಗಾರರ ಬಂಧನ: ಸಂಯುಕ್ತ ಹೋರಾಟ ಸಮಿತಿ ಖಂಡನೆ, ಪ್ರತಿಭಟನೆ
ಬಲವಂತದ ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು, ಹೋರಾಟ ಗಾರರ ಬಂಧನ ಖಂಡಿಸಿ ಜೊತೆಗೆ ರೈತರನ್ನು ಅಮಾನುಷವಾಗಿ ವರ್ತಿಸಿದ ಡಿಎಸ್ಪಿ ಸಜೀತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸ ಬೇಕು ಎಂದು ಸಂಯುಕ್ತ ಹೋರಾಟ ಆಗ್ರಹಿಸಿದೆ


ಬಾಗೇಪಲ್ಲಿ: ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಬಸ್ ನಿಲ್ದಾಣದ ಜಿ.ವಿ.ಶ್ರೀರಾಮ ರೆಡ್ಡಿ ಪುತಳಿ ಮುಂದೆ ವಿವಿಧ ಸಂಘಟನೆಗಳ ಒಕ್ಕೂಟ ಸಂಯುಕ್ತ ಹೋರಾಟ ಸಮಿತಿ ಗುರುವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕು ಹಾಗೂ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ 13 ಗ್ರಾಮಗಳ ಸುಮಾರು 1,777 ಎಕರೆ ಫಲವತ್ತಾದ ಭೂಮಿಯನ್ನು ಬಲವಂತವಾಗಿ ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು ಎಲ್ಲಾ ಸಂಯುಕ್ತ ಸಂಘಗಳ ಹೋರಾಟ ನೇತೃತ್ವದಲ್ಲಿ ದೇವನಹಳ್ಳಿ ಚಲೋಗೆ ಕರೆ ನೀಡಿ ರೈತರು, ದಲಿತ, ಕಾರ್ಮಿಕ, ಮಹಿಳಾ, ಯುವಜನ ವಿದ್ಯಾರ್ಥಿ ಚಳವಳಿಗಾರರು, ಅಲ್ಲದೇ ಪ್ರಗತಿ ಪರ ಹೋರಾಟಗಾರರು.
ಇದನ್ನೂ ಓದಿ: Chikkaballapur News: ಅಪರಾಧ ಕೃತ್ಯಗಳನ್ನು ತಡೆಯಲು ಪೊಲೀಸ್ ಇಲಾಖೆಯೊಂದಿಗೆ ಆಟೋ ಚಾಲಕರು ಕೈ ಜೋಡಿಸಿ : ಎಸ್ಪಿ.ಕುಶಾಲ್ ಚೌಕ್ಸೆ
ಸಾಹಿತಿ, ಕಲಾವಿದರು ರಾಜ್ಯದ ಮೂಲೆ ಮೂಲೆಗಳಿಂದಲೂ ದೇವನಹಳ್ಳಿಗೆ ಬಂದು ತಹಶೀಲ್ದಾರ್ ಕಚೇರಿಯ ಮುಂದೆ ಶಾಂತಿಯುತ ಪ್ರತಿಭಟಿಸುತ್ತಿದ್ದು ಸಂಜೆ 5 ಗಂಟೆ ನಂತರ ಪ್ರತಿಭಟನೆ ಅವಕಾಶ ನೀಡುವುದಿಲ್ಲ ಎಂದು ದೇವನಹಳ್ಳಿ ಡಿಸಿಪಿ ಸಜಿತ್ ನೇತೃತ್ವದಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲಾಯಿತು ಇದ್ದನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಸಿದ್ದೇವೆ ಎಂದು ಹೇಳಿದರು.
ಬಲವಂತದ ಭೂ ಸ್ವಾಧೀನ ವಿರೋಧಿಸಿ ‘ದೇವನಹಳ್ಳಿ ಚಲೋ’ ಹಮ್ಮಿಕೊಂಡಿದ್ದ ರೈತರು, ಹೋರಾಟಗಾರರ ಬಂಧನ ಖಂಡಿಸಿ ಜೊತೆಗೆ ರೈತರನ್ನು ಅಮಾನುಷವಾಗಿ ವರ್ತಿಸಿದ ಡಿಎಸ್ಪಿ ಸಜೀತ್ ವಿರುದ್ದ ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸ ಬೇಕು ಎಂದು ಸಂಯುಕ್ತ ಹೋರಾಟ ಆಗ್ರಹಿಸಿದೆ ಎಂದು ಹೇಳಿದರು.
ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣವಾಗಿ ಕೈ ಬಿಡಬೇಕು ಹಾಗೂ ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು, ಇನ್ನೂ ಇತರೆ ಸ್ಥಳಗಳಲ್ಲಿ ರಾಜ್ಯ ಸರ್ಕಾರ ಕೈ ಬಿಡಬೇಕು ರೈತರು ಫಲವತ್ತಾದ ಭೂಮಿ ಒಂದು ಇಂಚು ಕೊಡುವುದಲ್ಲ ಹಾಗೂ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ರಾಜ್ಯಾ ದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದರು.
ಹಸಿರು ಸೇನೆ ಮುಖಂಡ ಲಕ್ಷ್ಮಿ ನಾರಾಯಣ ರೆಡ್ಡಿ ಮಾತನಾಡಿ, 2022ರ ಸೆಪ್ಟೆಂಬರ್ನಲ್ಲಿ, ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಹೋರಾಟದ ಪೆಂಡಾಲಿಗೆ ಭೇಟಿ ನೀಡಿ, 'ಅಧಿಕಾರಕ್ಕೆ ಬಂದರೆ ಈ ಯೋಜನೆ ರದ್ದುಗೊಳಿಸುತ್ತೇನೆ' ಎಂದು ಭರವಸೆ ನೀಡಿದ್ದರು. ಆ ಭರವಸೆಯಿಂದಾಗಿ 2023ರ ಚುನಾವಣೆಯಲ್ಲಿ ರೈತರು ಕಾಂಗ್ರೆಸ್ಗೆ ಬೆಂಬಲ ನೀಡಿದ್ದರು. ಆದರೆ, ಅಧಿಕಾರಕ್ಕೆ ಬಂದ ನಂತರ ಸರ್ಕಾರ ಯಾವುದೇ ಗಟ್ಟಿ ತೀರ್ಮಾನ ಕೈಗೊಂಡಿಲ್ಲ. ಇದೀಗ ಕೆ.ಹೆಚ್. ಮುನಿಯಪ್ಪ ಮತ್ತು ಎಂ.ಬಿ.ಪಾಟೀಲ್ರಂತಹ ನಾಯಕರು ಭೂಸ್ವಾಧೀನಕ್ಕೆ ಸಮರ್ಥನೆ ನೀಡು ತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಜಿಲ್ಲಾ ಸಂಚಾಲಕ ಚನ್ನರಾಯಪ್ಪ ಮಾತನಾಡಿ, ರಾಜ್ಯ ಸರ್ಕಾರ ಕಾರ್ಪೊರೆಟ್ ಲಾಬಿಗೆ ಮಣಿದು ಬಲವಂತವಾಗಿ ರೈತರಿಂದ ಫಲವತ್ತಾದ ಕೃಷಿಭೂಮಿಯನ್ನು ಕಿತ್ತುಕೊಳ್ಳುತ್ತಿರುವುದು ಖಂಡ ನೀಯ. ಸರ್ಕಾರಕ್ಕೆ ಒಂದಿಂಚೂ ಕೃಷಿ ಭೂಮಿಯನ್ನು ಬಿಟ್ಟುಕೊಡುವುದಿಲ್ಲ. ರಾಜ್ಯದಾದ್ಯಂತ ರೈತರು ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಈಗಾಗಲೇ ಲಕ್ಷಾಂತರ ಎಕರೆ ಕೃಷಿಭೂಮಿಯನ್ನು ವಶಪಡಿಸಿಕೊಂಡು ಸಣ್ಣ ರೈತರ ಬದುಕಿಗೆ ಆಧಾರವಾಗಿದ್ದ ಕೃಷಿ ಭೂಮಿಯನ್ನು ಕಿತ್ತು ಕೈಗಾರಿಕೋದ್ಯಮಿಗಳಿಗೆ ಹಂಚಿಕೆ ಮಾಡು ತ್ತಿದೆ. ಕೈಗಾರಿಕಾ ಉದ್ದೇಶಕ್ಕೆ ನೀಡಲಾದ ಭೂಮಿಯನ್ನು ಉದ್ಯಮಿಗಳು ಅನ್ಯ ಉದ್ದೇಶಗಳಿಗೆ ಬಳಕೆ ಮಾಡುತ್ತಿದ್ದಾರೆ. ನೆಪ ಮಾತ್ರಕ್ಕೆ ಕೈಗಾರಿಕೆ ಆರಂಭಿಸಿ ನಷ್ಟದ ಲೆಕ್ಕ ನೀಡಿ ಭೂಮಿ ಕಬಳಿಸುತ್ತಿದ್ದಾರೆ ಎಂದು ದೂರಿದರು.
ರೈತ ಮುಖಂಡ ಈಶ್ವರ ರೆಡ್ಡಿ ಮಾತನಾಡಿ, ಸರ್ಕಾರ ಸರ್ವಾಧಿಕಾರಿಯಂತೆ ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಂಡು ಬೀದಿಗೆ ತಳ್ಳುತ್ತಿದೆ. ಅಧಿಕಾರ ಇಲ್ಲದಿದ್ದಾಗ ರೈತರ ಬಗ್ಗೆ ಕಾಳಜಿ ತೋರುವ ನಾಯಕರು ಅಧಿಕಾರ ಹಿಡಿದ ಕೂಡಲೇ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು
ಈ ಸಂದರ್ಭದಲ್ಲಿ ಸಂಯುಕ್ತ ಸಮಿತಿ ಮುಖಂಡರಾದ ಡಿ.ಟಿ.ಮುನಿಸ್ವಾಮು, ನಾಗರಾಜು, ಅಶ್ವಥಪ್ಪ, ಜಿ.ಕೃಷ್ಣಪ್ಪ, ಗೋವಿಂದ ರೆಡ್ಡಿ, ರಾಮಾಂಜಿ, ಶ್ರೀನಿವಾಸ ರೆಡ್ಡಿ, ಸೋಮಶೇಖರ್, ಇನ್ನೂ ಮುಂತಾದವರು ಪ್ರಮುಖರು ಹಾಜರಿದ್ದರು.