ಬಿದನೂರು: ತಾಲ್ಲೂಕಿನ ಹೊಸೂರು ಹೋಬಳಿಯ ಸೊನಗಾನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಭಕ್ತರಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಶಾಸಕ ಕೆ.ಹೆಚ್. ಪುಟ್ಟಸ್ವಾಮಿಗೌಡ(MLA K.H. Puttaswamy Gowda)ರ ಬೆಂಬಲಿತ ಅಭ್ಯರ್ಥಿಗಳಾದ ನರಸಿಂಹ ಮೂರ್ತಿರವರು ಅಧ್ಯಕ್ಷರಾಗಿ, ಕೃಷ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ.
ಇದನ್ನೂ ಓದಿ: Chikkaballapur News: ಸಮಗ್ರ ಆರೋಗ್ಯ ಅಭಿಯಾನಕ್ಕೆ ಶೀಘ್ರ ಚಾಲನೆ: ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಕರೆ
ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳನ್ನು ಶಾಸಕ ಕೆ.ಎಚ್. ಪುಟ್ಟಸ್ವಾಮಿಗೌಡರು ಅಭಿನಂದಿಸಿ ಮಾತನಾಡಿ, ಹಳ್ಳಿಗಳಲ್ಲಿ ಹೈನುಗಾರಿಕೆಯನ್ನು ನಂಬಿಕೊಂಡು ನೂರಾರು ಜನರು ಜೀವನ ನಡೆಸುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಸಹಕಾರಿ ಯಾಗುವ ನಿಟ್ಟಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷರು, ಉಪಾಧ್ಯಕ್ಷರ, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಪ್ರಾಮಾಣಿಕವಾಗಿ ಕೆಲಸ ಮಾಡಿ ಪಾರದರ್ಶಕ ಆಡಳಿತ ನೀಡುವ ಮೂಲಕ ಸಂಘವನ್ನು ಆರ್ಥಿಕವಾಗಿ ಮುನ್ನಡೆಸಿ, ಹಾಲು ಉತ್ಪಾದಕರಿಗೆ ಕಾಲಕಾಲಕ್ಕೆ ಬಟವಾಡೆ ಮಾಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆ.ಹೆಚ್.ಪಿ.ಬಣದ ಮುಖಂಡರಾದ ಆರ್.ಅಶೋಕ್ ಕುಮಾರ್, ಭಕ್ತರಹಳ್ಳಿ ಚಂದ್ರಣ್ಣ ಗ್ರಾಮದ ಮುಖಂಡರು ಹಾಗೂ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.