ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ! ಸಂತೋಷ್ ಕುಮಾರ್ ರವರ ಉತ್ತಮ ಸೇವೆಯನ್ನು ಗುರುತಿಸಿದ ಬೋವಿ ಸಮಾಜದ ಜಿಲ್ಲಾಧ್ಯಕ್ಷ ಎಂ ಗುರ್ರಪ್ಪ ರವರ ತಂಡ ಅವರಿಗೆ ಹೃದಯಸ್ಪರ್ಶಯಾಗಿ ಸನ್ಮಾನಿಸಿ ಗೌರವಿಸಿದರು.
ಇದನ್ನೂ ಓದಿ: Chikkaballapur News: ಒಂದು ವಿಶ್ವ ಒಂದು ಕುಟುಂಬ ಮಿಷನ್ ವತಿಯಿಂದ ಭಾರತದಲ್ಲಿ 100-ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವ ಆಯೋಜನೆ
ನಂತರ ಮಾತನಾಡಿದ ಎಂ ಗುರ್ರಪ್ಪ ಸರ್ಕಾರಿ ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ವ್ಯಕ್ತಿಯ ಜೊತೆಗೆ ಉತ್ತಮವಾದ ಸಂಪರ್ಕ ಇಟ್ಟುಕೊಂಡು ಅವರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬರುತ್ತಿರುವ ಡಾ! ಸಂತೋಷ್ ಕುಮಾರ್ ರವರ ಸೇವೆ ಶ್ಲಾಘನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭೋವಿ ಸಮಾಜದ ಮುಖಂಡರಾದ ಕೃಷ್ಣಪ್ಪ,ಶ್ರೀನಿವಾಸ್, ಮುನಿಶಾಮಪ್ಪ, ಶ್ರೀನಾಥ್,ವೇಣು ಬೋವಿ ಸಮಾಜದ ಮುಖಂಡರುಗಳು ಇದ್ದರು