ಗಂಗಾ ಕಲ್ಯಾಣ ಯೋಜನೆಯಲ್ಲಿ ರೈತರಿಗೆ ಪಂಪ್ ಮೋಟರುಗಳ ವಿತರಣೆ
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಸುಮಾರು ಎಂಟು ಜನ ಫಲಾನುಭವಿಗಳಿಗೆ 2021-22ನೇ ಸಾಲಿಗೆ ಕೊಳವೆ ಬಾವಿ ಕೊರೆದಿರುವವರಿಗೆ ಪಂಪು ಮೋಟಾರ್ ಹಾಗೂ ಕೇಬಲ್ ಅನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ಅವರ ನಿರ್ದೇಶನದ ಮೇರೆಗೆ ವಿತರಣೆ ಮಾಡಲಾಗಿದ್ದು,ರೈತರು ಇದನ್ನು ಸದುಪಯೋಗ ಪಡೆದುಕೊಂಡು ರೈತರ ಜೀವನದಲ್ಲಿ ಬೆಳಕಾಗಲಿ
-
ಚಿಂತಾಮಣಿ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣಿ ಯೋಜನೆಯಡಿ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಮತ್ತು ಇತರೆ ಸಾಮಗ್ರಿಗಳನ್ನು ೮ ಜನ ರೈತ ಫಲಾನುಭವಿಗಳಿಗೆ ಚಿಂತಾಮಣಿ ನಗರದ ಪಾಲಿಟೆಕ್ನಿಕ್ ಹಿಂಭಾಗ ಇರುವ ಮೈದಾನದಲ್ಲಿ ತಾಲ್ಲೂಕ್ ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಆನಂದ್ ವಿತರಣೆ ಮಾಡಿದರು.
ಇದನ್ನೂ ಓದಿ: Chikkaballapur News: ಚದುರಂಗ ಆಡುವುದರಿಂದ ಆಲೋಚನಾ ಶಕ್ತಿ, ಏಕಾಗ್ರತೆ ಹೆಚ್ಚುತ್ತದೆ : ಸಿ.ಇ.ಒ ಡಾ. ವೈ.ನವೀನ್ ಭಟ್ ಚಾಲನೆ
ಈ ವೇಳೆ ಮಾತನಾಡಿದ ಆನಂದ್ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಸುಮಾರು ಎಂಟು ಜನ ಫಲಾನುಭವಿಗಳಿಗೆ 2021-22ನೇ ಸಾಲಿಗೆ ಕೊಳವೆ ಬಾವಿ ಕೊರೆದಿರುವವರಿಗೆ ಪಂಪು ಮೋಟಾರ್ ಹಾಗೂ ಕೇಬಲ್ ಅನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ಅವರ ನಿರ್ದೇಶನದ ಮೇರೆಗೆ ವಿತರಣೆ ಮಾಡಲಾಗಿದ್ದು,ರೈತರು ಇದನ್ನು ಸದುಪಯೋಗ ಪಡೆದುಕೊಂಡು ರೈತರ ಜೀವನದಲ್ಲಿ ಬೆಳಕಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಾಶ್,ಫಲಾನುಭವಿಗಳಾದ ಕದಿರಪ್ಪ, ಶಿವಶಂಕರಪ್ಪ,ತಿರುಮಲಮ್ಮ, ನಾರಾಯಣಸ್ವಾಮಿ,ಆಂಜಪ್ಪ,ಮುನಿ ನರಸಿಂಹಪ್ಪ, ಪಾಪಮ್ಮ, ನಾರಾಯಣಪ್ಪ ಇದ್ದರು.