#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Chikkaballapur News: ಜೀತ ಪದ್ಧತಿ ಶಿಕ್ಷಾರ್ಹ ಅಪರಾಧವಾಗಿದ್ದರೂ ಜೀವಂತವಿರುವುದು ಬೇಸರದ ಸಂಗತಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜೀತಪದ್ದತಿಯು ಇಂದಿಗೂ ಜೀವಂತವಿರುವ ಒಂದು ಅನಿಷ್ಟ ಪದ್ದತಿಯಾಗಿದೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ ಮೈಸೂರು, ಚಿಕ್ಕಮಗಳೂರು, ಬೆಳಗಾವಿ. ಬಾಗಲಕೋಟೆ, ರಾಮ ನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಜೀತ ಪದ್ಧತಿಯ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಬಾಲ ಕಾರ್ಮಿಕನಾಗಿ ಕೆಲಸ ಮಾಡುವವರು ಮುಂದೆ ಜೀತಗಾರರಾಗಿ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ

ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಗಾರಕ್ಕೆ ಚಾಲನೆ

"ಜೀತ ಪದ್ಧತಿ ಶಿಕ್ಷಾರ್ಹ ಅಪರಾಧ" ಎಂಬುದನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಇಂದಿಗೂ ಸಹ ಅಗತ್ಯವಿದೆ. ಏಕೆಂದರೆ ಈ ಅನಿಷ್ಟ ಪದ್ಧತಿ ಇನ್ನೂ ಜೀವಂತವಿರುವುದು ಬೇಸರದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅಭಿಪ್ರಾಯಪಟ್ಟರು.

Profile Ashok Nayak Feb 11, 2025 8:35 PM

ಚಿಕ್ಕಬಳ್ಳಾಪುರ: “ಜೀತ ಪದ್ಧತಿ ಶಿಕ್ಷಾರ್ಹ ಅಪರಾಧ”  ಎಂಬುದನ್ನು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಇಂದಿಗೂ ಸಹ ಅಗತ್ಯವಿದೆ. ಏಕೆಂದರೆ ಈ ಅನಿಷ್ಟ ಪದ್ಧತಿ ಇನ್ನೂ ಜೀವಂತ ವಿರುವುದು ಬೇಸರದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಅವರು ಅಭಿಪ್ರಾ ಯಪಟ್ಟರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ರವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀತಪದ್ದತಿಯು ಇಂದಿಗೂ ಜೀವಂತವಿರುವ ಒಂದು ಅನಿಷ್ಟ ಪದ್ದತಿಯಾಗಿದೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ ಮೈಸೂರು, ಚಿಕ್ಕಮಗಳೂರು, ಬೆಳಗಾವಿ. ಬಾಗಲಕೋಟೆ, ರಾಮ ನಗರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಜೀತ ಪದ್ಧತಿಯ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಬಾಲ ಕಾರ್ಮಿಕನಾಗಿ ಕೆಲಸ ಮಾಡುವವರು ಮುಂದೆ ಜೀತಗಾರರಾಗಿ ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಕರ್ನಾಟಕ ರಾಜ್ಯದಲ್ಲಿ ಜೀತಪದ್ಧತಿಯನ್ನು ನಿರ್ಮೂಲನೆ ಗೊಳಿ ಸಲು ಸರ್ಕಾರ ಹಲವಾರು ಯುಕ್ತ ಕ್ರಮಗಳನ್ನು ಕೈಗೊಂಡು ಕಾನೂನುಗಳನ್ನು ಜಾರಿಗೆ ತಂದಿದೆ. ಈ ಪದ್ದತಿಯ ನಿವಾರಣೆಯು ಕೇವಲ ಒಂದು ಇಲಾಖೆಯ ಜವಾಬ್ದಾರಿಯಾಗಿರದೆ ಎಲ್ಲಾ ಇಲಾಖೆ ಗಳ ಹೊಣೆಯಾಗಿರುತ್ತದೆ.

ಇದನ್ನೂ ಓದಿ: Chikkaballapur News: ಟೆಂಟ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುವುದು ನಮ್ಮ ಮೊದಲ ಆದ್ಯತಾ ಗುರಿಯಾಗಿದೆ

ಜೀತ ಪದ್ಧತಿಗೆ ಸಿಲುಕಿದ ವ್ಯಕ್ತಿಯನ್ನು ಗುರುತಿಸಿ ಅಂತಹವರಿಗೆ ಸರ್ಕಾರದ ಪುನರ್ವಸತಿ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡ ಬೇಕು. ಈ ಕಾರ್ಯಕ್ಕೆ ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಹ ಜಿಲ್ಲಾಡಳಿತ ದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕೃಷಿ, ರೇಷ್ಮೆ, ತೋಟಗಾರಿಕೆ ತಾಕುಗಳಲ್ಲಿ, ಕಟ್ಟಡ ಕಾಮಗಾರಿ, ಬೋರ್ ವೆಲ್ ಕೊರೆಯುವ ಘಟಕಗಳಲ್ಲಿ, ನಗರ ಪ್ರದೇಶದ ಸಣ್ಣ ಕೈಗಾರಿಕೆಗಳು, ಜವಳಿ, ಸಾಮಿಲ್ ಗಳು, ಹೊಟೇಲ್, ಕಲ್ಲು ಕ್ವಾರಿ. ಮಾಂಸ ಸಂಸ್ಕರಣಾ ಘಟಕಗಳು, ಇಟ್ಟಿಗೆ ಕಾರ್ಖಾನೆ ಸೇರಿದಂತೆ ಹಲವು ವಲಯಗಳಲ್ಲಿ ಜೀತ ಕಾರ್ಮಿಕರು ಕಂಡುಬರುತ್ತಿದ್ದಾರೆ. ಅದರಲ್ಲೂ ವಲಸೆ ಜೀತ ಕಾರ್ಮಿಕರು ಪತ್ತೆಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕಾಣಸಿಗುತ್ತಿವೆ ಎಂದರು.

ಜೀತಪದ್ಧತಿಯಂತಹ ಘಟನೆಗಳು ಕಂಡು ಬಂದಾಗ ಕಾನೂನಿನ ಅಡಿಯಲ್ಲಿ ಅವರಿಗೆ ಸೂಕ್ತ ರಕ್ಷಣೆ ಯನ್ನು ಕೊಡುವುದು ಹಾಗೂ ಇಂತಹ ಪದ್ಧತಿಗೆ ಕಾರಣರಾದ ಮುಖ್ಯಸ್ಥರು, ಮಾಲೀಕರು ಹಾಗೂ ಸಂಬAಧ ಪಟ್ಟ ಎಲ್ಲರ ಮೇಲೆ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸಿದಾಗ ಈ ಪದ್ದತಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗಲಿದೆ. ಈ ಕಾರ್ಯವನ್ನು ಜಿಲ್ಲೆಯಲ್ಲಿ ಪರಿಣಾಮ ಕಾರಿಯಾಗಿ ಜರುಗಿಸುವಂತೆ ನಾನು ಈ ಮೂಲಕ ಅಧಿಕಾರಿಗಳಿಗೆ ಸೂಚಿಸುತ್ತೇನೆ.

ಜೀತ ಪದ್ಧತಿ ಯಿಂದ ವಿಮುಕ್ತರಾದವರಿಗೆ ಪುನರ್ವಸತಿ ಕ್ರಮದ ಭಾಗವಾಗಿ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವುದು, ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯಗಳನ್ನು ಕೊಡಿಸಿ ಆರ್ಥಿಕವಾಗಿ ಸಬಲೀಕರಣವಾಗುವುದಕ್ಕೆ ಸಹಾಯ ಮಾಡುವುದು, ವ್ಯಾಪಾರ ಮಾಡಲು ಉತ್ತೇಜನ ನೀಡಬೇಕಾಗಿ ರುತ್ತದೆ. ಜೊತೆಗೆ ಕೃಷಿ ಭೂಮಿ ಕೊಡಿಸಿ ಪುನರ್ವಸತಿ ಕಲ್ಪಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿ ದ್ದು, ಆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ವಿಜಿಲೆನ್ಸ್ ಕಮಿಟಿಗಳು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುವುದು ಬಹಳ ಮುಖ್ಯ. ಜಿಲ್ಲಾದ್ಯಾಂತ ಆಕಸ್ಮಿಕ ದಾಳಿಗಳನ್ನು ಕೈಗೊಂಡು ಪ್ರಕರಣಗಳನ್ನು ದಾಖಲಿಸಿ ಸಕ್ಷಮ ಪ್ರಾಧಿಕಾರ ಗಳಿಂದ ಸೂಕ್ತ ಪರಿಹಾರ ಕ್ರಮಗಳನ್ನು ಒದಗಿಸುವುದರಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೀತ ಪದ್ಧತಿ ಪ್ರಕರಣವನ್ನು ಶೂನ್ಯಕ್ಕೆ ತರುಬಹುದು ಆ ನಿಟ್ಟಿನ್ಲಲಿ ಕಂಕಣ ಬದ್ಧವಾಗಿ ಕಾರ್ಯನಿರ್ವ ಹಿಸೋಣ ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಈ ವೇಳೆ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಿರ್ಮಲ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿಲಾಷ್ ಜೀತ ಪದ್ಧತಿ ನಿರ್ಮೂಲನೆಯ ಯುಕ್ತ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪ ಜೀತ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾನವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್.ಭಾಸ್ಕರ್, ಪೊಲೀಸ್ ಉಪಾಧೀಕ್ಷಕ ಶಿವಕುಮಾರ್, ಚಿಂತಾಮಣಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಮುರಳಿ, ಉಪ ವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್, ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಿರ್ಮಲ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಭಿ ಲಾಷ್, ರಾಜ್ಯ ಮಹಿಳಾ ಘಟಕದ ಜೀವಿಕ ಸಂಚಾಲಕಿ ರತ್ನಮ್ಮ, ರೂಟ್ಸ್ ಫಾರ್ ಫ್ರೀಡಂ ಸಂಸ್ಥೆಯ ರವೀಂದ್ರ, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧಿಕಾರಗಳು, ಜೀತ ವಿಮುಕ್ತಿಗಾಗಿ ಶ್ರಮಿಸುತ್ತಿರುವ ವಿವಿಧ ಸರ್ಕಾರೇತರ ಸಂಸ್ಥೆಗಳ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.