ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gudibande News: ಹೆಚ್.ಐ.ವಿ ಏಡ್ಸ್ ಕುರಿತು ಎಲ್ಲರೂ ಜಾಗೃತರಾಗಿ, ತಡೆಗಟ್ಟಬೇಕು : ಸುದರ್ಮನ್

ಒಬ್ಬರಿಂದ ಒಬ್ಬರಿಗೆ ಹರಡುವಂತಹುದಾಗಿದೆ. ಈ ಕಾಯಿಲೆ ಬರುವುದಕ್ಕೂ ಮುನ್ನ ಎಚ್ಚೆತ್ತು ಕೊಳ್ಳಬೇಕು. ಹೆಚ್.ಐ.ವಿ ಬಾದಿತರನ್ನು ಗೌರವಯುತವಾಗಿ ಕಾಣಬೇಕಿದೆ, ಸಮಾಜದಲ್ಲಿ  ಬಾಳ್ವೇಯನ್ನು ಮಾಡಬೇಕು. ವರ್ಷ ಪೂರ್ತಿ ಕಾರ್ಯಕ್ರಮಗಳಲ್ಲಿ ತಿಳುವಳಿಕೆ ಮತ್ತು ಅರಿವು ಮೂಡಿಸಿ ಮುಂದಿನ ಪೀಳಿಗೆಗೆ ಏಡ್ಸ್ ಮುಕ್ತ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವಂತಹ ಜವಾಬ್ದಾರಿ ನಮ್ಮೆಲ್ಲರಾದಾಗಿದೆ

ಪಟ್ಟಣದ ಸೇರಿದಂತೆ ತಾಲೂಕಿನ ವರ್ಲಕೊಂಡ, ಸೋಮೇಶ್ವರ, ಸೋಮೇನಹಳ್ಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಹೆಚ್.ಐ.ವಿ ಏಡ್ಸ್ ಕುರಿತು ಬೀದಿ ನಾಟಕ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿದರು.

ಗುಡಿಬಂಡೆ: ಮಹಾಮಾರಿ ಹೆಚ್.ಐ.ವಿ ಏಡ್ಸ್ ಬಗ್ಗೆ ಅರಿವು ಪಡೆದುಕೊಂಡು, ಇತರರಿಗೂ ಅರಿವು ಮೂಡಿಸಿ, ಈ ಮಾರಕ ಕಾಯಿಲೆಯನ್ನು ತಡೆಗಟ್ಟಲು ಎಲ್ಲರೂ ಸಹಕರಿಸಬೇಕೆಂದು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯ ಐ.ಸಿ.ಟಿ.ಸಿ ಕೇಂದ್ರದ ಆಪ್ತ ಸಮಾಲೋಚಕ ಸುದರ್ಮನ್ ತಿಳಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವರ್ಲಕೊಂಡ, ಸೋಮೇಶ್ವರ, ಸೋಮೇನಹಳ್ಳಿ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಹಾಗೂ ನಿಯಂತ್ರಣ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಹೆಚ್.ಐ.ವಿ ಏಡ್ಸ್ ಕುರಿತು ಬೀದಿ ನಾಟಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ರೋಗ ಬರುವುದಕ್ಕೂ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದು ಕೊಂಡರೇ ರೋಗಗಳಿಂದ ಪಾರಾಗಬಹುದು. ಅದೇ ಮಾದರಿಯಲ್ಲಿ ಹೆಚ್.ಐ.ವಿ ಏಡ್ಸ್ ಎಂಬ ಕಾಯಿಲೆ ಮಾರಕ ಕಾಯಿಲೆಯಾಗಿದೆ.

ಒಬ್ಬರಿಂದ ಒಬ್ಬರಿಗೆ ಹರಡುವಂತಹುದಾಗಿದೆ. ಈ ಕಾಯಿಲೆ ಬರುವುದಕ್ಕೂ ಮುನ್ನ ಎಚ್ಚೆತ್ತು ಕೊಳ್ಳಬೇಕು. ಹೆಚ್.ಐ.ವಿ ಬಾದಿತರನ್ನು ಗೌರವಯುತವಾಗಿ ಕಾಣಬೇಕಿದೆ, ಸಮಾಜದಲ್ಲಿ  ಬಾಳ್ವೇ ಯನ್ನು ಮಾಡಬೇಕು. ವರ್ಷ ಪೂರ್ತಿ ಕಾರ್ಯಕ್ರಮಗಳಲ್ಲಿ ತಿಳುವಳಿಕೆ ಮತ್ತು ಅರಿವು ಮೂಡಿಸಿ ಮುಂದಿನ ಪೀಳಿಗೆಗೆ ಏಡ್ಸ್ ಮುಕ್ತ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವಂತಹ ಜವಾಬ್ದಾರಿ ನಮ್ಮೆಲ್ಲರಾದಾಗಿದೆ ಎಂದರು.

ಇದನ್ನೂ ಓದಿ: Chikkaballapur News: ಸತ್ಯ ಸಾಯಿ ಗ್ರಾಮದಲ್ಲಿ ವೈಭವದಿಂದ ನಡೆದ ಉಮಾ-ಮಹೇಶ್ವರ ಕಲ್ಯಾಣ ಮಹೋತ್ಸವ

ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ದಪ್ಪರ್ತಿ ನಂಜುAಡ ಮಾತನಾಡಿ, ಎಚ್‌ಐವಿ ಸೋಂಕಿನ ಬಗ್ಗೆ ಯುವಜನತೆ ಎಚ್ಚರ ವಹಿಸಬೇಕು. ಹಾಗೆಯೇ ಏಡ್ಸ್ ನಂತಹ ಮಾರಕ ರೋಗಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜನರಲ್ಲಿ ಈ ಬಗ್ಗೆ ವ್ಯಾಪಕ ಅರಿವು ಮೂಡಿಸಲು ಆಂದೋಲನ ಹಮ್ಮಿಕೊಂಡಿರುವುದು ಉತ್ತಮವಾದ ಕೆಲಸವಾಗಿದೆ. ಗ್ರಾಮೀಣ ಭಾಗಗಳ ಜನತೆಯಲ್ಲಿ ಹೆಚ್ ಐ ವಿ ಏಡ್ಸ್ ಕುರಿತು ಮಾಹಿತಿಯ ಕೊರತೆ ಹೆಚ್ಚಾಗಿದ್ದು, ಅವರಿಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಈ ಕಾರ್ಯಕ್ರಮ ವನ್ನು ಗ್ರಾಮೀಣ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು. ಜನರು ತಾವು ಪಡೆದುಕೊಂಡ ಮಾಹಿತಿಯನ್ನು ಇತರರೊಂದಿಗೆ ಹಂಚಿಕೊAಡು ಏಡ್ಸ್ ತಡೆಗಟ್ಟಬೇಕು ಎಂದರು.

ಈ ವೇಳೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರದೀಪ್, ವೈದ್ಯರಾದ ಡಾ.ಗಿರೀಶ್, ಡಾ.ಅನುಷಾ, ಡಾ.ಆಶಾ, ಆರೋಗ್ಯ ರಕ್ಷಾ ಸಮಿತಿಯ ಕೆ.ಟಿ.ನಂಜುAಡಪ್ಪ, ಬುಲೆಟ್ ಶ್ರೀನಿವಾಸ್, ರಮೇಶ್, ರಹಮತ್, ಆರೋಗ್ಯ ಇಲಾಖೆಯ ನಾಗರಾಜ್, ಗಂಗಾಧರ್, ಮಮತಾ, ಮಂಜುಳಾ ಸೇರಿದಂತೆ ಮಂಡ್ಯ ಮೂಲದ ಶ್ರೀ ಅರುಣೋದಯಾ ಕಲಾತಂಡದವರು ಹಾಜರಿದ್ದರು.