ಚಿಕ್ಕಬಳ್ಳಾಪುರ : ಅಂಬೇಡ್ಕರ್ ಸ್ಥಾಪಿತ ಸಮತಾ ಸೈನಿಕ ದಳದ ರಾಷ್ಟ್ರೀಯ ಅಧ್ಯಕ್ಷ ಕ್ಯಾಪ್ಟನ್ ಅಶೋಕ್ ಕಾರ್ಣಿಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿ.ಸಿ.ವೆಂಕಟ ರೋಣಪ್ಪ ಅವರನ್ನು ಎಸ್ಎಸ್ಡಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದು ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ವೆಂಕಟರೋಣಪ್ಪ ಅವರು ಬೆಂಗಳೂರಿನ ಗಾಂಧಿನಗರ ದಲ್ಲಿರುವ ಹೋಟೆಲ್ ಚೇತನ್ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಚುನಾವಣೆಯಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಕ್ಯಾಪ್ಟನ್ ಅಶೋಕ್ ಖಾನ್ನಡೆ ಅವರ ಅಧ್ಯಕ್ಷತೆಯಲ್ಲಿ ಜಿ.ಸಿ.ವೆಂಕಟರಮಣಪ್ಪ ಆದ ನನ್ನನ್ನು ರಾಜ್ಯ ಅಧ್ಯಕ್ಷ ರಾಗಿ ಆಯ್ಕೆ ಮಾಡಿರುತ್ತಾರೆ.
ಆಯ್ಕೆ ಮಾಡಿದ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರಿಗೆ ಮತ್ತು ರಾಷ್ಟ್ರೀಯ ನಾಯಕರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.