ಚಿಕ್ಕಬಳ್ಳಾಪುರ: ಹುನೆಗಲ್ ಸಮೀಪ ನೂತನವಾಗಿ ಆರಂಭಗೊಂಡಿರುವ ಪೆಟ್ರೋಲ್ ಬಂಕ್ಗೆ ಶ್ರೀ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮುಖಂಡ ಗೋದಾನಿ ಹರೀಶ್ ಕೆ.ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯ ಮಾಲೀಕರಾದ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾಗೇಶ್ ಹಾಗೂ ಅವರ ಸಹೋದರ ಎಸ್.ಎ.ಟಿ. ನಾರಾಯಣಸ್ವಾಮಿ ಅವರಿಗೆ ಶುಭ ಹಾರೈಸಿದರು.
ಇದನ್ನೂ ಓದಿ: Chikkaballapur News: ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಇಒ ಡಾ.ನವೀನ್ ಭಟ್
ನೂತನವಾಗಿ ಆರಂಭಗೊಂಡಿರುವ ಪೆಟ್ರೋಲ್ ಬಂಕ್ ಉತ್ತಮವಾಗಿ ಅಭಿವೃದ್ಧಿ ಹೊಂದಿ ಸಾರ್ವ ಜನಿಕರಿಗೆ ಗುಣಮಟ್ಟದ ಸೇವೆ ಒದಗಿಸುವಂತಾಗಲಿ ಎಂದು ಹಾರೈಸಿದ ಅವರು, ಮಾಲೀಕರಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಸ್ನೇಹಿತರು ಉಪಸ್ಥಿತರಿದ್ದರು.