ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ
ಪ್ರಪಂಚದಲ್ಲಿ ಶುದ್ಧ ಕುಡಿಯುವ ನೀರಲ್ಲಿ ಇಂತಿಷ್ಟು ಪ್ರಮಾಣದಲ್ಲಿ ಆರೋಗ್ಯಕರ ಅಂಶಗಳಿರ ಬೇಕೆಂದು ಡಬ್ಲ್ಯೂಎಚ್ಒ ನಿಗದಿಗೊಳಿಸಿದೆ. ಆದರೆ, ನಮ್ಮ ದುರಾದೃಷ್ಟ ನಮಗೆ ನೈಟ್ರೇಟ್ ಯುಕ್ತ ನೀರನ್ನು ಕೊಡಲಾಗಿದೆ. ಇದರಿಂದ ಕೆಲವೇ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆ ಬರುವುದು ಖಚಿತ ಎಂದು ಆತಂಕಗೊಂಡರು


ಚಿಕ್ಕಬಳ್ಳಾಪುರ : ನಗರದ ತಾಲೂಕು ಕಚೇರಿ ಮುಂಭಾಗ ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟ ದಸಂಸ ಹಾಗೂ ಗಡಿನಾಡು ರೈತ ಸಂಘದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ನೀಡಿ ಮಾತನಾಡಿದ ಅವರು, ದಲಿತ ಹೋರಾಟಗಾರರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಆದ್ದರಿಂದ, ದಲಿತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರಕಾರ ಕೂಡಲೇ ಎಚ್ಚೆತ್ತುಕೊಳ್ಳ ಬೇಕು. ಇಲ್ಲವಾದರೆ ನಿಮ್ಮ ಅಧಿಕಾರ ಕಸಿದುಕೊಳ್ಳುತ್ತಾರೆ ಎಂದು ಹೇಳಿದರು.
ಪ್ರಪಂಚದಲ್ಲಿ ಶುದ್ಧ ಕುಡಿಯುವ ನೀರಲ್ಲಿ ಇಂತಿಷ್ಟು ಪ್ರಮಾಣದಲ್ಲಿ ಆರೋಗ್ಯಕರ ಅಂಶಗಳಿರ ಬೇಕೆಂದು ಡಬ್ಲ್ಯೂಎಚ್ಒ ನಿಗದಿಗೊಳಿಸಿದೆ. ಆದರೆ, ನಮ್ಮ ದುರಾದೃಷ್ಟ ನಮಗೆ ನೈಟ್ರೇಟ್ ಯುಕ್ತ ನೀರನ್ನು ಕೊಡಲಾಗಿದೆ. ಇದರಿಂದ ಕೆಲವೇ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆ ಬರುವುದು ಖಚಿತ ಎಂದು ಆತಂಕಗೊಂಡರು.
ದಲಿತ ಮುಖಂಡ, ಜಿಪಂ ಮಾಜಿ ಸದಸ್ಯ ರಾಜಾಕಾಂತ್ ಮಾತನಾಡಿ, ಜಿಲ್ಲಾದ್ಯಂತ ಎಲ್ಲಾ ತಾಲೂ ಕು ಕೇಂದ್ರಗಳಲ್ಲೂ ಏಕಕಾಲಕ್ಕೆ ದಲಿತರು ಹಾಗೂ ರೈತ ಮುಖಂಡರು ಭೂಮಿ, ವಸತಿ ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಪ್ರತಿಭಟನೆ ಯಲ್ಲಿ ಭಾಗವಹಿಸಿದ್ದ ಗುಡಿಬಂಡೆಯ 92 ವರ್ಷದ ದಲಿತರೊಬ್ಬರು ಸಾವನ್ನಪಿದ್ದಾರೆ. ಮಹಿಳೆ ಯರು, ಮಕ್ಕಳು, ವಯಸ್ಕರು ಚಳಿಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದರು.
ಒಂದು ಬಡಾವಣೆ ನಿರ್ಮಾಣ ಮಾಡಲು 18 ವರ್ಷ ಸಮಯ ತೆಗೆದುಕೊಂಡಿದ್ದಾರೆ. ಡಿಸಿಯವರ ಮಾತನ್ನ ತಹಶೀಲ್ದಾರ್ ಕೇಳದಿದ್ದರೆ, ಈ ಜಿಲ್ಲೆಗೆ ಜಿಲ್ಲಾಧಿಕಾರಿ ಬೇಕಾ ಎಂಬ ಪ್ರಶ್ನೆ ಮೂಡುತ್ತದೆ. ಕೆಲಸ ಮಾಡದ, ಮಾತನ್ನು ಕೇಳದ ತಹಶೀಲ್ದಾರ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.
ಎಲ್ಲೆಲ್ಲಿ ಆಶ್ರಯ ಯೋಜನೆ ಸಮಿತಿಗಳು, ಬಗರ್ ಹುಕುಂ ಸಮಿತಿಗಳು ಇಲ್ಲವೋ ಅಲ್ಲಿ ಡಿಸಿಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಬೇಕೆಂಬ ನಿಯಮವಿದೆ. ಆದರೂ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಬಗರ್ ಹುಕುಂ ಸಮಿತಿ ಇದ್ದೂ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವ ರೆಡ್ಡಿ ಮಾತನಾಡಿ, ದಲಿತರು, ಲಿಂಗತ್ವ ಅಲ್ಪಸಂಖ್ಯಾತರು, ವಿಕಲಚೇತನರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಎಲ್ಲಾ ಮುಖಂಡರೊಂದಿಗೆ ಚರ್ಚಿಸ ಲಾಗುವುದು. ಭೂಮಿ, ವಸತಿ ನಿರ್ಮಾಣದ ಕುರಿತು ಎಲ್ಲಾ ಶಾಸಕರ ಗಮನಕ್ಕೆ ತಂದು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಜಿಪಂ ಸಿಇಒ ಪ್ರಕಾಶ್ ಜೆ ನಿಟ್ಟಾಲಿ ಮಾತನಾಡಿ, ಪ್ರಸ್ತುತ 13 ಬೇಡಿಕೆಗಳನ್ನು ಇಟ್ಟಿದ್ದಾರೆ. ಯಾವು ದೇ ಅಧಿಕಾರಿಗಳು ದಲಿತರ ಪರವಾಗಿಲ್ಲ ಎಂದು ಹೇಳಲಾಗುವುದಿಲ್ಲ. ನಮ್ಮಿಂದ ತಪ್ಪಾಗಿದ್ದರೆ ಕೂಡಲೇ ಸರಿಪಡಿಸುವ ಕೆಲಸ ಮಾಡುತ್ತೇವೆ. ಜಿಲ್ಲಾಧಿಕಾರಿಗಳ ಸಭೆ ಕರೆದು ಸಮಸ್ಯೆಗಳ ಕುರಿತು ಕ್ರಮವಹಿಸಲಾಗುವುದು. ದಯವಿಟ್ಟು ಧರಣಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
ಗಡಿನಾಡು ರೈತ ಸಂಘದ ಜಿಲ್ಲಾಧ್ಯಕ್ಷ ಮಂಚನಬೆಲೆ ವೆಂಕಟೇಶ್ ಮಾತನಾಡಿದರು.
ಪ್ರತಿಭಟನೆ ವೇಳೆ ಎಸಿ ಅತೀಕ್ ಪಾಶ, ನಗರಸಭೆ ಆಯುಕ್ತರು, ತಾಪಂ ಇಒ ಮಂಜುನಾಥ್ ಸೇರಿದಂತೆ ನೂರಾರು ಮಂದಿ ಪ್ರತಿಭಟನಾಕಾರರು ಹಾಜರಿದ್ದರು.