ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಹೊಸೂರು ಪಂಚಾಯಿತಿ: ಅವಿಶ್ವಾಸ ನಿರ್ಣಯಕ್ಕೆ ಸೋಲು ಗೀತಾ ಅಧ್ಯಕ್ಷೆಯಾಗಿ ಮುಂದುವರಿಕೆ

ಸಹಿ ಮಾಡಿದ್ದ ೧೨ ಸದಸ್ಯರ ಪೈಕಿ ೧೦ ಸದಸ್ಯರು ಮಾತ್ರ ಅವಿಶ್ವಾಸ ನಿರ್ಣಯದ ಗೊತ್ತುವಳಿ ಸಭೆಗೆ  ಹಾಜರಾಗಿದ್ದ ಹಿನ್ನೆಲೆಯಲ್ಲಿ,ಅವಿಶ್ವಾಸ ನಿರ್ಣಯ ಬಿದ್ದು ಹೋಗಿದೆ ಎಂದು ಉಪ ವಿಭಾಗಾ ಧಿಕಾರಿ ಅಶ್ವಿನ್ ಸ್ಪಷ್ಟಪಡಿಸಿದರು. ಇದರಿಂದಾಗಿ ಮುಂದಿನ ಆರು ತಿಂಗಳ ಕಾಲ ಯಾವುದೇ ರೀತಿಯ ಆವಿಶ್ವಾಸ ನಿರ್ಣಯಕ್ಕೆ ಅವಕಾಶವಿರುವುದಿಲ್ಲ,ಹಾಲಿ ಅಧ್ಯಕ್ಷೆ ಗೀತಾ ಅವರೇ ಅಧ್ಯಕ್ಷರಾಗಿ ಮುಂದುವರೆಯ ಲಿದ್ದಾರೆ

ಅವಿಶ್ವಾಸ ನಿರ್ಣಯಕ್ಕೆ ಸೋಲು ಗೀತಾ ಅಧ್ಯಕ್ಷೆಯಾಗಿ ಮುಂದುವರಿಕೆ

ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆ ಗೀತಾ ಅವರ ವಿರುದ್ಧ ಹನ್ನೆರಡು ಮಂದಿ ಗ್ರಾಮ ಪಂಚಾಯತಿ ಸದಸ್ಯರು  ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಗೊತ್ತುವಳಿಗೆ ಸೋಲಾಗಿದ್ದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರ ಬಣದ  ಅಧ್ಯಕ್ಷೆ ಕೆ.ಗೀತಾ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.

Profile Ashok Nayak Jun 20, 2025 11:40 PM

ಗೌರಿಬಿದನೂರು: ತಾಲೂಕಿನ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಕೆ.ಗೀತಾ ಅವರ ವಿರುದ್ಧ ಹನ್ನೆರಡು ಮಂದಿ ಗ್ರಾಮ ಪಂಚಾಯತಿ ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಗೊತ್ತು ವಳಿಗೆ ಸೋಲಾಗಿದ್ದು ಶಾಸಕ ಕೆಎಚ್ ಪುಟ್ಟಸ್ವಾಮಿಗೌಡರ ಬಣದ  ಅಧ್ಯಕ್ಷೆ ಕೆ.ಗೀತಾ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ.

ಹೊಸೂರು ಗ್ರಾಪಂ ಅಧ್ಯಕ್ಷೆ ಕೆ.ಗೀತಾ ವಿರುದ್ಧ ಇತ್ತೀಚಿಗೆ ಗ್ರಾಮ ಪಂಚಾಯತಿಯ ಒಟ್ಟು ಹದಿನೇಳು ಸದಸ್ಯರ ಪೈಕಿ ಹನ್ನೆರಡು ಮಂದಿ ಗ್ರಾ.ಪಂ ಸದಸ್ಯರು ಕಳೆದ ತಿಂಗಳು ಮೇ ೨೨ ರಂದು ಸಹಿ ಮಾಡಿ ಅವಿಶ್ವಾಸ ನಿರ್ಣಯ ಮಂಡಿಸಲು ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಅದರಂತೆ ಶುಕ್ರವಾರ  ಉಪವಿಭಾಗಾಧಿಕಾರಿ ಅಶ್ವಿನ್ ಅವರು ಆವಿಶ್ವಾಸ ನಿರ್ಣಯದ ಸಭೆಯನ್ನು ಕರೆದಿದ್ದರು.

ಇದನ್ನೂ ಓದಿ: Chikkaballapur News: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಕಾಧಿಕಾರಿಯಾಗಿ ಡಾ.ವೈ.ನವೀನ್ ಭಟ್ ಅಧಿಕಾರ ಸ್ವೀಕಾರ

ಆದರೆ ಸಹಿ ಮಾಡಿದ್ದ ೧೨ ಸದಸ್ಯರ ಪೈಕಿ ೧೦ ಸದಸ್ಯರು ಮಾತ್ರ ಅವಿಶ್ವಾಸ ನಿರ್ಣಯದ ಗೊತ್ತುವಳಿ ಸಭೆಗೆ  ಹಾಜರಾಗಿದ್ದ ಹಿನ್ನೆಲೆಯಲ್ಲಿ,ಅವಿಶ್ವಾಸ ನಿರ್ಣಯ ಬಿದ್ದು ಹೋಗಿದೆ ಎಂದು ಉಪ ವಿಭಾಗಾ ಧಿಕಾರಿ ಅಶ್ವಿನ್ ಸ್ಪಷ್ಟಪಡಿಸಿದರು. ಇದರಿಂದಾಗಿ ಮುಂದಿನ ಆರು ತಿಂಗಳ ಕಾಲ ಯಾವುದೇ ರೀತಿಯ ಆವಿಶ್ವಾಸ ನಿರ್ಣಯಕ್ಕೆ ಅವಕಾಶವಿರುವುದಿಲ್ಲ,ಹಾಲಿ ಅಧ್ಯಕ್ಷೆ ಗೀತಾ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಘೋಷಣೆ ಮಾಡಿದರು.

ಅವಿಶ್ವಾಸ ನಿರ್ಣಯಕ್ಕೆ ಸೋಲಾಗುತ್ತಿದ್ದಂತೆ,ಗ್ರಾಮ ಪಂಚಾಯತಿಯ ಕಚೇರಿ ಮುಂದೆ ಶಾಸಕರ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಕುತಂತ್ರಕ್ಕೆ ಸೋಲು ಅಭಿವೃದ್ಧಿಗೆ ಒತ್ತು !!

ನಂತರ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾ ಮಾತನಾಡಿ ಕೆಲ ಸದಸ್ಯರು ರಾಜಕೀಯ ಪ್ರೇರಿತವಾಗಿ  ನನ್ನನ್ನು ಅಧ್ಯಕ್ಷೆ ಗಾದೆಯಿಂದ ಕೆಳಗಿಳಿಸಬೇಕೆಂಬ ಕುತಂತ್ರ ಮಾಡಿದ್ದರು. ಆದರೆ ಅದು ಸಫಲವಾಗಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ನಾಯಕರು ಹಾಗೂ ಶಾಸಕರಾದ ಪುಟ್ಟಸ್ವಾಮಿ ಗೌಡರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯತಿ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮುಂದುವರೆಸುತ್ತೇನೆ ಎಂದರು.

ಮುಖಂಡ ಕುರೂಡಿ ಆರ್. ರಾಕೇಶ್  ಮಾತನಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು,ಅವರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದರು. ಆದರೆ ಕೆಲವರ ರಾಜಕೀಯ ಚಿತಾವಣೆಯಿಂದಾಗಿ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು.

ಕೊನೆ ಗಳಿಗೆಯಲ್ಲಿ ಇಬ್ಬರು ಸದಸ್ಯರು ತಮ್ಮ ಮನಸ್ಸು ಬದಲಿಸಿ, ಶಾಸಕರು ಹೊಸೂರು ಹೋಬಳಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುತ್ತಿರುವುದನ್ನು ಮನಗೊಂಡು,ಅವಿಶ್ವಾಸ ನಿರ್ಣಯದಿಂದ ಹಿಂದೆ ಸರಿದ ಕಾರಣ ಶಾಸಕರ ಬಣದ ಗೀತಾ ಅವರೆ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಇದರಿಂದಾಗಿ ಶಾಸಕರ ವಿರೋಧಿಗಳಿಗೆ ತೀವ್ರ ಮುಖ ಭಂಗವಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಜಿ. ಬೊಮ್ಮಣ್ಣ, ನಾಗಪ್ಪ, ಕಿಮ್ಲಾ ನಾಯಕ್, ಸೇರಿದಂತೆ ಇನ್ನಿತರ ಮುಖಂಡರು ಕಾರ್ಯಕರ್ತರು ಹಾಜರಿದ್ದರು.