ಶಿಡ್ಲಘಟ್ಟ: ಸಹಕಾರ ಸಂಘಗಳ ಜವಾಬ್ದಾರಿ ಹೆಚ್ಚಾಗಿದ್ದು, ಎಲ್ಲರೂ ಕೈಜೋಡಿಸಿದರೆ ಉತ್ತಮ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಉತ್ತಮ ಕಟ್ಟಡ ನಿರ್ಮಿಸಲು ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಹಕಾರ ಸಂಘಗಳ ಜವಾಬ್ದಾರಿ ಹೆಚ್ಚಾಗಿದ್ದು, ಎಲ್ಲರೂ ಕೈಜೋಡಿಸಿದರೆ ಉತ್ತಮ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಉತ್ತಮ ಕಟ್ಟಡ ನಿರ್ಮಿಸಲು ಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳಿಗೆ ಅಭಿನಂದನೆಗಳು ಸಲ್ಲಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Shidlaghatta News: ಪ್ಲಾಸ್ಟಿಕ್ ಬಳಕೆ ಮಾಡಿದಲ್ಲಿ ಅಂತವರ ಮೇಲೆ ಕ್ರಮ : ನಗರಸಭೆ ಪರಿಸರ ಅಭಿಯಂತರ ಮೋಹನ್ ಕುಮಾರ್ ಎಚ್ಚರಿಕೆ
ರೈತರಿಗೆ ಹಾಲು ಉತ್ಪಾದನೆ ಮಾಡಲು ಸಹಕಾರ ಸಂಘದ ಅಧಿಕಾರಿಗಳಿಂದ ಉತ್ತಮ ಮಾರ್ಗದರ್ಶನ ಅವಶ್ಯಕತೆ ಇದೆ. ಗುಣಮಟ್ಟದ ಹಾಲು ಉತ್ಪಾದಿಸಬೇಕಾದರೆ ರೈತರಿಗೆ ತರಬೇತಿಯಾಗುವ ಮಾರ್ಗದರ್ಶನ ಅತ್ಯಗತ್ಯ ಎಂದು ತಿಳಿಸಿದರು.
ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಅನೇಕ ಯೋಜನೆಗಳಿದ್ದು ಇಂಥ ಯೋಜನೆ ಗಳನ್ನು ಕೆಲವರು ಮಾತ್ರ ಪಡೆದುಕೊಳ್ಳುತ್ತಿದ್ದಾರೆ. ತಳಮಟ್ಟದ ಬಡ ರೈತರಿಗೆ ಯೋಜನೆ ಗಳ ಅರಿವೇ ಇರುವುದಿಲ್ಲ. ಆದ್ದರಿಂದ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡಿ ರೈತರ ಪರ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಮುಖಂಡರಾದ ಅಪ್ಕಾಮ್ಸ್ ಮಾಜಿ ಅಧ್ಯಕ್ಷ ಮುನೇಗೌಡ, ಚಿದಾನಂದ್, ಭಕ್ತರ ಹಳ್ಳಿ ಚೆನ್ನೇಗೌಡ ಹೇಮಂತ್ ಕುಮಾರ್, ಲಕ್ಷ್ಮೀನಾರಾಯಣ, ದೇವರಾಜ್, ಅನಿತಾ, ಸುಬ್ರಮಣಿ, ಗಂಗರೆಡ್ಡಿ, ನಾಗರಾಜು, ನಂಜೇಗೌಡ ಮಂಜುನಾಥ್, ಮುನಿಕೃಷ್ಣಪ್ಪ, ಮುನಿ ಶಾಮಪ್ಪ, ಯುವ ಕಾಂಗ್ರೆಸ್ ಮುಖಂಡ ಮಧು,ಸೇರಿದಂತೆ ಕಾಂಗ್ರೆಸ್ ಮುಂಖಂಡರು ಹಾಜರಿದ್ದರು.