ಚಿಂತಾಮಣಿ: ಆ.22ರಂದು ಚಿಂತಾಮಣಿ ತಾಲ್ಲೂಕು ಕೇಂದ್ರದಲ್ಲಿ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮಗಳಿಗೆ ಸಾರಿಗೆ ಸಚಿವರು ಹಾಗೂ ಚಿಕ್ಕಬಳ್ಳಾ ಪುರ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಲಾಯಿತು.
ಡಾ.ಬಿ.ಆರ್.ಅಂಬೇಡ್ಕರ್ ಭವನ ಹಾಗೂ ಅನುಭವ ಕೇಂದ್ರ, ಚಿಂತಾಮಣಿ ತಾಲ್ಲೂಕು ಪಂಚಾ ಯಿತಿ ಭವನದ ಸಾಮರ್ಥ್ಯ ಸೌಧ ಸಭಾಂಗಣ, ಸಭಾ ಭವನ, ಸ್ವಾಗತ ಕಮಾನು ಹಾಗೂ ನಗರದ ಅಜಾದ್ ಚೌಕ್ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿವೆ.
ಇದನ್ನೂ ಓದಿ: Chikkaballapur News: ಶಿಕ್ಷಕರ ಸಮಸ್ಯೆಗಳಿಗೆ ಸಂಘಟಿತವಾಗಿ ಧ್ವನಿಯಾಗುತ್ತೇವೆ: ಕೆ.ಜಿ.ಶ್ರೀನಿವಾಸ್
ಈ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿದ ಅಧಿಕಾರಿಗಳು, ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳನ್ನು ನೀಡಿ, ಉದ್ಘಾಟನಾ ಸಮಾರಂಭಗಳಿಗೆ ಸಚಿವರನ್ನು ಅಧಿಕೃತವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಉಪಸ್ಥಿತರಿದ್ದರು.