ಶಿಡ್ಲಘಟ್ಟ: ನಗರದ ಅಶೋಕ ರಸ್ತೆಯ ಹೂವಿನ ವೃತದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಲಕ್ಷ ದೀಪೋತ್ಸವ ನಡೆಯಿತು.
ಸಾವಿರಾರು ವರ್ಷಗಳ ಇತಿಹಾಸವಿರುವ ನಗರದ ಶ್ರೀ ನಗರೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಾರಂಭದಿAದಲೂ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಿತು.
ಇದನ್ನೂ ಓದಿ: Shidlaghatta News: ಮಕ್ಕಳ ಬೆಳವಣಿಗೆಯಲ್ಲಿ ಪಠ್ಯೇತರ ಚಟವಟಿಕೆಗಳ ಪ್ರಭಾವ ಅಧಿಕ : ಕಾಂಗ್ರೆಸ್ ಮುಖಂಡ ಬಿ.ವಿ ರಾಜೀವಗೌಡ
ಅಯೋಧ್ಯಾನಗರ ಶಿವಾಚಾರ ವೈಶ್ಯನಗರ್ಥ ಮಂಡಳಿ ವತಿಯಿಂದ ಸೋಮವಾರ ಕಡೆಯ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ನಡೆಯಿತು. ಇದರ ಅಂಗವಾಗಿ ದೇವಾ ಲಯ ಹಾಗೂ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಬೆಳಿಗ್ಗೆಯಿಂದ ಅಭಿಷೇಕ, ಹೋಮ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ ನಡೆ ಯಿತು. ಸಂಜೆ ದೇವಾಲಯದಲ್ಲಿ ಒಂದು ಲಕ್ಷ ಮಣ್ಣಿನ ಹಣತೆ ಹಾಗೂ ವಿದ್ಯುತ್ ದೀಪ ಗಳಿಂದ ಕೂಡಿತ್ತು.ಸುತ್ತಮುತ್ತಲಿನ ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಾ ಲಯದಲ್ಲಿ ಮಣ್ಣಿನ ದೀಪಗಳನ್ನು ಬೆಳಗಿಸಿ ತಮ್ಮ ಹರಕೆ ಹಾಗೂ ಕೋರಿಕೆ ಸಲ್ಲಿಸಿದರು.