ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dr.M.C.Sudhakar: ಸಾಮಾನ್ಯರಂತೆ ಹೋಟೆಲ್‌ನಲ್ಲಿ ಕುಳಿತು ಮಸಾಲಾ ದೋಸೆ ಸವಿದ ಸಚಿವ ಡಾ.ಎಂ.ಸಿ.ಸುಧಾಕರ್!

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್(Dr M C Suadhakar) ಅವರು ನಗರದ ಆಜಾದ್ ಚೌಕದಲ್ಲಿರುವ ಸ್ಥಳೀಯ ಹೋಟೆಲ್ ಒಂದಕ್ಕೆ ಭೇಟಿ ನೀಡಿ ಸಾಮಾನ್ಯರಂತೆ ಬೆಂಚಿನ ಮೇಲೆ ಕುಳಿತು ಮಸಾಲಾ ದೋಸೆ ಸವಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್(Dr M C Suadhakar) ಅವರು ನಗರದ ಆಜಾದ್ ಚೌಕದಲ್ಲಿರುವ ಸ್ಥಳೀಯ ಹೋಟೆಲ್ ಒಂದಕ್ಕೆ ಭೇಟಿ ನೀಡಿ ಸಾಮಾನ್ಯರಂತೆ ಬೆಂಚಿನ ಮೇಲೆ ಕುಳಿತು ಮಸಾಲಾ ದೋಸೆ ಸವಿಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕ್ಷೇತ್ರದ ಪ್ರವಾಸದಲ್ಲಿದ್ದ ಸಚಿವರು ಯಾವುದೇ ಹಮ್ಮು-ಬಿಮ್ಮು ಇಲ್ಲದೆ ಆಜಾದ್ ಚೌಕದ ಸಣ್ಣ ಹೋಟೆಲ್‌ಗೆ ಭೇಟಿ ನೀಡಿದರು. ಹೋಟೆಲ್‌ನಲ್ಲಿದ್ದ ಸಾಮಾನ್ಯ ಗ್ರಾಹಕರೊಂದಿಗೇ ಬೆಂಚಿನ ಮೇಲೆ ಕುಳಿತು ಮುದ್ದಾದ ಬಾಳೆ ಎಲೆಯ ತಟ್ಟೆಯಲ್ಲಿ ಬಿಸಿಬಿಸಿ ಮಸಾಲಾ ದೋಸೆ ಸವಿದರು.

ಇದನ್ನೂ ಓದಿ: Dr. M.C. Sudhakar: ಬಿಸಿಗಾಳಿ ತಡೆಗೆ ಮುನ್ನೆಚ್ಚರಿಕೆ ಅಗತ್ಯ : ಕುಡಿಯುವ ನೀರಿನ ಸಮಸ್ಯೆಗೆ ಸಮರೋಪಾದಿ ಕ್ರಮ ವಹಿಸಿ: ಸಚಿವ ಡಾ.ಎಂ.ಸಿ. ಸುಧಾಕರ್ ಮನವಿ

ಸಚಿವರನ್ನು ಇಷ್ಟು ಹತ್ತಿರದಿಂದ ಕಂಡ ಹೋಟೆಲ್‌ನಲ್ಲಿದ್ದ ಸಾರ್ವಜನಿಕರು ಹಾಗೂ ಅಭಿಮಾನಿಗಳು ಅವರ ಸರಳತೆಯನ್ನು ಕಂಡು ಆಶ್ಚರ್ಯಚಕಿತರಾದರು. ಈ ಸಂದರ್ಭ ದಲ್ಲಿ ಸಚಿವರು ಸ್ಥಳೀಯರೊಂದಿಗೆ ನಗುನಗುತ್ತಾ ಮಾತನಾಡುತ್ತಾ, ಅತ್ಯಂತ ಆತ್ಮೀಯ ವಾಗಿ ಸಮಯ ಕಳೆದರು.

ಸಚಿವರ ಈ ಸಾಂಪ್ರದಾಯಿಕ ಹಾಗೂ ಸರಳ ಶೈಲಿಯ ದೋಸೆ ಸವಿಯುವ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯ ದಲ್ಲಿ ಅವರ ಸರಳತೆಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಅಕ್ಷಯ್, ಆರ್ ಎಂ ಜೆ ಶ್ರೀನಿವಾಸ್ ಹಾಗೂ ಸಚಿವರ ಅಭಿಮಾನಿಗಳು ಉಪಸ್ಥಿತರಿದ್ದರು.