ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

MLA SN Subbareddy: ಗಂಟ್ಲಮಲ್ಲಮ್ಮ ಕಣವೆಯಲ್ಲಿ ಡ್ಯಾಂ ನಿರ್ಮಾಣ ತಡೆಗೆ ಯಾರಿಂದಲೂ ಸಾಧ್ಯವಿಲ್ಲ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಕೆಲವರು ರಾಜಕೀಯ ದೃಷ್ಟಿ ಇಟ್ಟು ಕೊಂಡು ಇಂತಹ ಪ್ರಚಾರಗಳು ಮಾಡುತ್ತಿದ್ದಾರೆ ಇದಕ್ಕೆ ಜನರು ಆಸ್ಪದ ನೀಡಬಾರದು ಎಂದ ಅವರು ಯಾರೇ ಈ ಬೃಹತ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರೂ ಎದುರಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಿದ್ದೇನೆ

ಡ್ಯಾಂ ನಿರ್ಮಾಣಕ್ಕೆ ಭೂಮಿ ನೀಡಲ್ಲ ಎಂಬ ಹೇಳಿಕೆಗೆ ಶಾಸಕರ ಕಿಡಿ

-

Ashok Nayak
Ashok Nayak Jan 27, 2026 12:11 AM

ಬಾಗೇಪಲ್ಲಿ: ತಾಲೂಕಿನ ಗಂಟ್ಲಮಲ್ಲಮ್ಮ ಕಣವೆಯಲ್ಲಿ 200 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂಗೆ ಕೆಲವರು ಅಡ್ಡಿಪಡಿಸಲು ಯತ್ನಿಸುತ್ತಿರು ವುದು ಸಹಿಸಲು ಸಾಧ್ಯವಿಲ್ಲ ಅವರ ತಾತಂದಿರೂ ಬಂದರೂ ಅದನ್ನು ತಡೆಯಲು
ಸಾದ್ಯವಿಲ್ಲ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ(MLA SN Subbareddy) ಆಕ್ರೋಶ
ವ್ಯಕ್ತಪಡಿಸಿದ್ದಾರೆ.

ಅವರು ಪಟ್ಟಣದ ಶಾಲಾ ಬಾಲಕಿಯರ ಶಾಲಾ ಸಂಕೀರಣದ ಆವರಣದಲ್ಲಿ ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಏರ್ಪಡಿಸಿದ್ದ 77ನೇ ಣರಾಜ್ಯೋತ್ಸವ ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿ ನಮ್ಮ ವಿರೋಧಿಗಳು ಯಾರೋ ಕೆಲವು 10 ಜನರಗುಂಪುಕಟ್ಟಿಕೊಂಡು ಗಂಟ್ಲಮಲ್ಲಮ್ಮ ಕಣವೆಯಲ್ಲಿ ಡ್ಯಾಂ ನಿರ್ಮಾಣ
ಮಾಡಲು ನಮ್ಮ ಕೃಷಿ ಭೂಮಿ ನೀಡುವುದಿಲ್ಲ ಎಂದು ಹೇಳಿರುವುದು ಖಂಡನೀಯ.

ಇದನ್ನೂ ಓದಿ: Chikkaballapur News: ಆರ್.ಬಿ.ತಿಮ್ಮಾಪುರ ಸೇರಿ ದಲಿತ ಸಚಿವರ ಮೇಲಿನ ಅಪಪ್ರಚಾರ ನಿಲ್ಲಿಸಿ: ಇಲ್ಲವೇ ಹೋರಾಟ ಎದುರಿಸಿ

ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಕೆಲವರು ರಾಜಕೀಯ ದೃಷ್ಟಿ ಇಟ್ಟುಕೊಂಡು ಇಂತಹ ಪ್ರಚಾರಗಳು ಮಾಡುತ್ತಿದ್ದಾರೆ ಇದಕ್ಕೆ ಜನರು ಆಸ್ಪದ
ನೀಡಬಾರದು ಎಂದ ಅವರು ಯಾರೇ ಈ ಬೃಹತ್ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರೂ ಎದುರಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಿದ್ದೇನೆ ಮಹಾತ್ಮಗಾಂಧಿ, ನೆಹರು ಸರ್ದಾರ್ ವಲ್ಲಭಾಯ್ ಪಟೇಲ್ ಅಂತಹ ಮಹನೀಯರು ಬ್ರಿಟಿಷರ ವಿರುದ್ದ ಹೋರಾಟ ಮಾಡಿ ಸ್ವಾತಂತ್ರ್ಯ ಪಡೆದರು. ನಂತರ ದಿನಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್
ಅಧ್ಯಕ್ಷತೆಯಲ್ಲಿ ಕರಡು ಸಮಿತಿ ರಚನೆ ಮಾಡಿ ಸತತ 2ವರ್ಷಗಳ ಕಾಲ ವಿವಿಧ ದೇಶಗಳ ಸಂವಿಧಾನವನ್ನು ಅದ್ಯಯನ ಮಾಡಿ ವಿಶ್ವ ಮೆಚ್ಚುವಂತಹ ಜಾತಿ,ಧರ್ಮ ಬೇದವಿಲ್ಲದೆ
ಸಂವಿಧಾನವನ್ನು ನೀಡಿದ್ದಾರೆ.

ಇದರಿಂದ ಭಾರತ ದೇಶದ ಪ್ರತಿಯೊಬ್ಬ ಪ್ರಜೆಗೂ ತಮ್ಮ ಹಕ್ಕು ಪ್ರತಿಪಾದನೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ನಾನು ಸತತ ಮೂರು ಭಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಈಗ 13 ವರ್ಷ ಕಳೆದಿದೆ.ಬಾಗೇಪಲ್ಲಿ,ಗುಡಿಬಂಡೆ ಹಾಗೂ ಚೇಳೂರು ತಾಲೂಕುಗಳಲ್ಲಿ ಸಾಕಷ್ಟು ಅಭಿವೃದ್ದಿ ಮಾಡಿಸಿದ್ದೇನೆ.

ಮುಂದಿನ ದಿನಗಳಲ್ಲಿ ಒಂದು ಸಾವಿರ ಕೋಟಿರೂಗಳ ಅಭಿವೃದ್ದಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಖುದ್ದು ಹಾಜರಾಗಿ ಚಾಲನೆ ನೀಡಲಿದ್ದಾರೆ.ಇಂತಹ ದೊಡ್ಡ ಕಾರ್ಯ ಕ್ರಮಗಳನ್ನು ಮಾಡಲು ಜನರ ಆಶೀರ್ವಾದವೇ ಪ್ರಮುಖ ಕಾರಣ ಎಂದರು.

ತಹಸೀಲ್ದಾರ್ ಮನೀಷ್ ಎನ್.ಪತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎಸ್‌ಎಸ್‌ಎಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ಮಕ್ಕಳಿಂದ ದೇಶ ಭಕ್ತಿ ಗೀತೆಗಳ ನೃತ್ಯ ಪ್ರದರ್ಶನ, ಗೀತೆ ಗಾಯನ ಕಾರ್ಯಕ್ರಮಗಳು ನಡೆದವು.

ತಾಪಂ ಇಒ ಜಿ.ವಿ.ರಮೇಶ್,ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ಪೊಲೀಸ್ ನಿರೀಕ್ಷಕ ಅಜಯ್ ಸಾರಥಿ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಆರ್.ಶಿವಪ್ಪ, ಪಶು ವೈದ್ಯಾಧಿಕಾರಿ ಕೃಷ್ಣಮೂರ್ತಿ,ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಹನುಮಂತ ರೆಡ್ಡಿ, ತಾಲೂಕು ವೈದ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ,ಶಿಕ್ಷಣ ಇಲಾಖೆ ತಾಲೂಕು ಸಮನ್ವಯ ಅಧಿಕಾರಿ ಆರ್.ವೆಂಕಟರಾಮಪ್ಪ, ಮುಖ್ಯ ಶಿಕ್ಷ ಕರಾದ ಕೆ.ವಿ.ಆದಿನಾರಾಯಣ, ಈಶ್ವರಪ್ಪ, ಪುರಸಭೆ ಸದಸ್ಯ ಪೋತು ಶ್ರೀನಿವಾಸರೆಡ್ಡಿ ಡಾ.ಕೃಷ್ಣ ಮೂರ್ತಿ, ಟಿಪಿಇಒ ರಂಗನಾಥ್ ಬಿ.ವಿ.ವೆಂಕಟರವಣ ಮತ್ತಿತರರು ಇದ್ದರು.