ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಸತ್ಯ ಸಾಯಿ ಗ್ರಾಮದಲ್ಲಿ ‘ಒಂದು ವಿಶ್ವ ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಉತ್ಸವ 2025

ಪವಿತ್ರ ಪರಂಪರೆಗಳಿಂದ ಆಧುನಿಕ ಅಭಿವ್ಯಕ್ತಿಗಳವರೆಗೆ, ವಿಭಿನ್ನ ಶ್ರದ್ಧೆಗಳ ಸಂವಾದದಿಂದ ಕಲಾತ್ಮಕ ಪ್ರದರ್ಶನಗಳವರೆಗೆ, ಉತ್ಸವವು ಸರಳವಾದ ಸತ್ಯವನ್ನು ಪುನರುಚ್ಚರಿಸಲು ಪ್ರಯತ್ನಿಸು ತ್ತದೆ. ಗಡಿಗಳು ಮತ್ತು ವಿಭಜನೆಗಳ ಹೊರತಾಗಿಯೂ, ಪ್ರಪಂಚವು ಒಂದು ಕುಟುಂಬವಾಗಿ ಒಟ್ಟಿಗೆ ನಿಲ್ಲಬಹುದು ಎಂದು ಸಾರಿಹೇಳುವ ಪ್ರಯತ್ನಕ್ಕೆ ಸಾಕ್ಷಿಯಾಯಿತು.

೧೦೦ ದಿನ, ೧೦೦ ದೇಶ, ಜಾಗತಿಕ ಸಾಮರಸ್ಯದ ಮುನ್ನುಡಿ ಬರೆದ ಕಾರ್ಯಕ್ರಮ ಸಂಪನ್ನ

Ashok Nayak Ashok Nayak Aug 17, 2025 11:37 PM

ಚಿಕ್ಕಬಳ್ಳಾಪುರ : ತಾಲ್ಲೂಕು ಮುದ್ದೇನಹಳ್ಳಿಯಲ್ಲಿ ಒಂದು ವಿಶ್ವ ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ 2025 ಆರಂಭವಾಯಿತು. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಮತ್ತು ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಸಹಯೋಗದಲ್ಲಿ ಆರಂಭವಾದ ಈ ಸಾಂಸ್ಕೃತಿಕ ಸಂಭ್ರಮವು ಜಗತ್ತನ್ನು ಬೆಸೆಯುವ ಪ್ರಯತ್ನವಾಗಿತ್ತು.

ಒಟ್ಟು ೧೦೦ ದಿನಗಳ ಕಾಲ ನಡೆಯಲಿರುವ ಜಾಗತಿಕ ಮಟ್ಟದ ಸಾಂಸ್ಕೃತಿಕ ಉತ್ಸವವು ಸಂಸ್ಕೃತಿ, ಅಧ್ಯಾತ್ಮ, ಸೇವೆ ಮತ್ತು ಮಾನವೀಯತೆಯ ಸಹಯೋಗದ ಆಚರಣೆಗಳ ಮೂಲಕ ೧೦೦ ದೇಶಗಳನ್ನು ಬೆಸೆಯುವಲ್ಲಿ ಯಶಸ್ವಿಯಾಯಿತು.

ಪವಿತ್ರ ಪರಂಪರೆಗಳಿಂದ ಆಧುನಿಕ ಅಭಿವ್ಯಕ್ತಿಗಳವರೆಗೆ, ವಿಭಿನ್ನ ಶ್ರದ್ಧೆಗಳ ಸಂವಾದದಿAದ ಕಲಾತ್ಮಕ ಪ್ರದರ್ಶನಗಳವರೆಗೆ, ಉತ್ಸವವು ಸರಳವಾದ ಸತ್ಯವನ್ನು ಪುನರುಚ್ಚರಿಸಲು ಪ್ರಯತ್ನಿಸು ತ್ತದೆ. ಗಡಿಗಳು ಮತ್ತು ವಿಭಜನೆಗಳ ಹೊರತಾಗಿಯೂ, ಪ್ರಪಂಚವು ಒಂದು ಕುಟುಂಬವಾಗಿ ಒಟ್ಟಿಗೆ ನಿಲ್ಲಬಹುದು ಎಂದು ಸಾರಿ ಹೇಳುವ ಪ್ರಯತ್ನಕ್ಕೆ ಸಾಕ್ಷಿಯಾಯಿತು.

ಇದನ್ನೂ ಓದಿ: Vishweshwar Bhat Column: ನಿಜವಾದ ಗೆಳೆಯ ಯಾರು ? ಟೀಕಾಕಾರರು ಯಾರು ?

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರದ ಸಂಸ್ಕೃತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾತನಾಡಿ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಎಲ್ಲ ದೇಶಗಳಿಗೂ ಆತ್ಮೀಯ ಸ್ವಾಗತ ಕೋರಿದ ಅವರು ಭಾರತೀಯ ಪರಂಪರೆಯ ಶ್ರೀಮಂತಿಕೆಯನ್ನು ಸಶಕ್ತವಾಗಿ ಪ್ರದರ್ಶಿಸಲು ‘ಇಂದಿರಾಗಾAಧಿ ರಾಷ್ಟ್ರೀಯ ಕಲಾ ಕೇಂದ್ರ’ದ ಮೂಲಕ ವಿಶೇಷ ಪ್ರದರ್ಶನ ಆಯೋಜಿಸುವುದಾಗಿ ಇದೇ ವೇಳೆ ಘೋಷಿಸಿದರು.

ಬೆಂಗಳೂರಿನ ‘ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ’ದ ದಕ್ಷಿಣ ಪ್ರಾದೇಶಿಕ ನಿರ್ದೇಶಕ ಡಿ.ಮಹೇಂದ್ರ ಮಾತನಾಡಿ, ಉತ್ಸವದ ಮುಖ್ಯ ಉದ್ದೇಶವಾಗಿರುವ ಸಾಮರಸ್ಯ ಮತ್ತು ಏಕತೆಯ ದೃಷ್ಟಿಯನ್ನು ಬೆಂಬಲಿಸುವುದಾಗಿ ಸಾರಿದರು.

cbpm2mdhusudhan sai

‘ಕರ್ಮಯೋಗಿ ಭಾರತ್’ ಸೇವಾ ಅಭಿಯಾನದ ಅಧ್ಯಕ್ಷರು ಮತ್ತು ಕಲಾಕ್ಷೇತ್ರ ಪ್ರತಿಷ್ಠಾನದ ಮಾಜಿ ಅಧ್ಯಕ್ಷ ಪದ್ಮಭೂಷಣ ಸುಬ್ರಮಣಿಯನ್ ರಾಮದೊರೈ ಮಾತನಾಡಿ, ಉತ್ಸವದ ಮುಖ್ಯ ಸಂದೇಶ ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ‘ಕಾಳಜಿ, ಹಂಚಿಕೊಳ್ಳುವ ಮನೋಭಾವ, ಔದಾರ್ಯ, ಸದ್ಭಾ ವನೆ, ತಿಳಿವಳಿಕೆ ಮತ್ತು ಸಹಕಾರ’ದ ಸಂದೇಶಗಳು ವಿಶ್ವ ಸಾಂಸ್ಕೃತಿಕ ಉತ್ಸವದ ಮೂಲಕ ಜಗತ್ತಿನೆಲ್ಲೆಡೆ ಪಸರಿಸಲಿದೆ ಎಂದರು.

ಶಿರಾ ಕ್ಷೇತ್ರದ ಶಾಸಕ ಹಾಗೂ ದೆಹಲಿಯಲ್ಲಿ ರಾಜ್ಯದ ವಿಶೇಷ ಪ್ರತಿನಿಧಿಯಾಗಿರುವ ಡಾ ಟಿ.ಬಿ.ಜಯಚಂದ್ರ ಮಾತನಾಡಿ, ಈ ಉಪಕ್ರಮವು ಜಾಗತಿಕ ಸಂಸ್ಕೃತಿಯನ್ನು ಸಂಭ್ರಮಿಸುವ, ಪ್ರೀತಿ ಮತ್ತು ಸೇವೆಯನ್ನು ತಳಹದಿಯಾಗಿ ಹೊಂದಿರುವ ಪರಂಪರೆಯ ಮುಂದುವರಿಕೆಯಾಗಿದೆ’ ಎಂದು ಶ್ಲಾಘಿಸಿದರು.

‘ಒಂದು ವಿಶ್ವ ಒಂದು ಕುಟುಂಬ ಸೇವಾ ಅಭಿಯಾನ’ದ ಸಂಸ್ಥಾಪಕ ಸದ್ಗುರು ಮಧುಸೂದನ್ ಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿ ಸಂಪರ್ಕ, ಕಾಳಜಿ, ಸಹಯೋಗ, ಸಹಬಾಳ್ವೆ ಮತ್ತು ಸಹಕಾರವೇ ಸಂಸ್ಕೃತಿ’ ಎಂದರು.

‘ಶತಮಾನದಲ್ಲಿ ಒಮ್ಮೆ ನಡೆಯಬಹುದಾದ ಇಂಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಏಕತೆ, ಪ್ರೀತಿ ಮತ್ತು ಶಾಂತಿಯ ಅನುಭವ ಪಡೆದುಕೊಳ್ಳಬೇಕು’ ಎಂದು ಜಗತ್ತಿನ ಎಲ್ಲರಿಗೂ ಆಹ್ವಾನ ನೀಡಿದರು.

ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ನಡೆಸಿಕೊಟ್ಟ ‘ವಂದೇ ಮಾತರಂ’ ಸಾಂಸ್ಕೃತಿಕ ಪ್ರದರ್ಶನದೊಂದಿಗೆ ಕಾರ್ಯಕ್ರಮ ಸಂಪನ್ನ ವಾಯಿತು. ಮುಂದಿನ ದಿನಗಳಲ್ಲಿ ನಡೆಯಲಿರುವ ಹಲವು ಮಹತ್ವದ ಆಚರಣೆಗಳಿಗೆ ‘ವಂದೇ ಮಾತರಂ’ ಸಶಕ್ತ ಮುನ್ನುಡಿ ಬರೆಯುವಲ್ಲಿ ಯಶಸ್ವಿಯಾಯಿತು.