#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Chikkaballapur News: ಬಡವರ ಆಹಾರವಾಗಿದ್ದ ಸಿರಿಧಾನ್ಯಗಳು ಇಂದು ಶ್ರೀಮಂತರ ಆಹಾರವಾಗಿವೆ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಮತ

ಬಡವರ ಆಹಾರವಾಗಿರುವಂತಹ ಸಿರಿಧಾನ್ಯಗಳು ಇಂದು ಶ್ರೀಮಂತರ ಆಹಾರ ಆಗಿರುವುದು ಕಂಡು ಬರುತ್ತಿದೆ. ಸಿರಿಧಾನ್ಯಗಳಿಗೆ ಹಿಂದಿನಿಂದ ನಮ್ಮ ಪೂರ್ವಿಕರು ಹೆಚ್ಚು ಒತ್ತು ನೀಡುತ್ತಿದ್ದರು. ಇಂದು ಅದನ್ನು ನಾವು ಕೈಬಿಟ್ಟಿದ್ದೇವೆ. ಇಂದು ಸೂಪರ್ ಫುಡ್‌ಗಳ ಪಟ್ಟಿಯಲ್ಲಿ ಸಿರಿಧಾನ್ಯಗಳು ಸೇರುತ್ತಿವೆ

ಸಿರಿಧಾನ್ಯಗಳ ಬಳಸುತ್ತಿದ್ದ ನಮ್ಮ ಪೂರ್ವಜರು ಆರೋಗ್ಯವಂತರಾಗಿದ್ದರು

ಸಿರಿಧಾನ್ಯಗಳಲ್ಲಿ ವಿಟಮಿನ್ ಗಳು,ಪ್ರೋಟೀನ್ ಗಳು ಸೇರಿದಂತೆ ಹೇರಳವಾದ ಪೌಷ್ಠಿಕಾಂಶಗಳಿರುವುದರಿAದ,ಉತ್ತಮ ಸಮತೋಲನ ಆರೋಗ್ಯಕ್ಕಾಗಿ ಸಿರಿಧಾನ್ಯಗಳನ್ನು ಬಳಕೆ ಮಾಡುವುದು ಉತ್ತಮ, ಸಿರಿಧಾನ್ಯಗಳ ಬಳಸುತ್ತಿದ್ದ ನಮ್ಮ ಪೂರ್ವಜರು ಆರೋಗ್ಯವಂತರಾಗಿದ್ದರು ಎಂದು ಡಾ.ಎಂ.ಸಿ ಸುಧಾಕರ್ ತಿಳಿಸಿದರು.

Profile Ashok Nayak Feb 10, 2025 10:51 PM

ಬಾಗೇಪಲ್ಲಿ : ಸಿರಿಧಾನ್ಯಗಳಲ್ಲಿ ವಿಟಮಿನ್ ಗಳು,ಪ್ರೋಟೀನ್ ಗಳು ಸೇರಿದಂತೆ ಹೇರಳವಾದ ಪೌಷ್ಠಿ ಕಾಂಶಗಳಿರುವುದರಿಂದ, ಉತ್ತಮ ಸಮತೋಲನ ಆರೋಗ್ಯಕ್ಕಾಗಿ ಸಿರಿಧಾನ್ಯಗಳನ್ನು ಬಳಕೆ ಮಾಡುವುದು ಉತ್ತಮ, ಸಿರಿಧಾನ್ಯಗಳ ಬಳಸುತ್ತಿದ್ದ ನಮ್ಮ ಪೂರ್ವಜರು ಆರೋಗ್ಯವಂತರಾಗಿದ್ದರು ಎಂದು ಡಾ.ಎಂ.ಸಿ ಸುಧಾಕರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಬಾಗೇಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ, ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಡವರ ಆಹಾರವಾಗಿರುವಂತಹ ಸಿರಿಧಾನ್ಯಗಳು ಇಂದು ಶ್ರೀಮಂತರ ಆಹಾರ ಆಗಿರುವುದು ಕಂಡುಬರುತ್ತಿದೆ. ಸಿರಿಧಾನ್ಯಗಳಿಗೆ ಹಿಂದಿನಿಂದ ನಮ್ಮ ಪೂರ್ವಿಕರು ಹೆಚ್ಚು ಒತ್ತು ನೀಡುತ್ತಿದ್ದರು. ಇಂದು ಅದನ್ನು ನಾವು ಕೈಬಿಟ್ಟಿದ್ದೇವೆ. ಇಂದು ಸೂಪರ್ ಫುಡ್‌ಗಳ ಪಟ್ಟಿಯಲ್ಲಿ ಸಿರಿಧಾನ್ಯಗಳು ಸೇರುತ್ತಿವೆ. ಸಿರಿಧಾನ್ಯಗಳನ್ನು ಬೆಳೆದ ನಂತರ ಅದಕ್ಕೆ ತಕ್ಕಂತೆ ಸೂಕ್ತವಾದ ಮಾರುಕಟ್ಟೆಯ ಬೆಲೆ ಸಿಗುವುದಿಲ್ಲವೆಂದು ಭಾವಿಸಿ ಬೇರೆ ಬೆಳೆಗಳನ್ನು ಬೆಳೆಯುವ ಕಡೆಗೆ ಸಾಗುತ್ತಿದ್ದೇವೆ. ಕಾಲ ಬದಲಾ ದಂತೆ ಆಹಾರ ಪದಾರ್ಥಗಳ ಕಾರಣದಿಂದ ನಮ್ಮೆಲ್ಲರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರು ತ್ತಿದೆ. ಸರ್ಕಾರ ಇದನ್ನು ಮನಗಂಡು ಸಿರಿಧಾನ್ಯಗಳ ಕೃಷಿಗೆ ಉತ್ತೇಜನ ನೀಡಿ ಪ್ರೋತ್ಸಾಹ ಧನ ನೀಡುತ್ತಿದೆ ಎಂದರು.

ಇದನ್ನೂ ಓದಿ: Chikkabalalpur News: ದುರಸ್ತಿಯಾಗದ ಕುಡಿಯುವ ನೀರಿನ ಶುದ್ಧೀಕರಣ ಘಟಕ

ಸಿರಿಧಾನ್ಯಗಳು ಸಂಪೂರ್ಣವಾಗಿ ಮಳೆ ಆಧಾರಿತ ಬೆಳೆಯಾಗಿವೆ. ಮಳೆ ಪ್ರಮಾಣ ಕಡಿಮೆಯಾದರೂ ಸಹ ಅದನ್ನು ತಡೆದುಕೊಳ್ಳುವ ಶಕ್ತಿ ಸಾಮರ್ಥ್ಯ ಹೊಂದಿರುವುದನ್ನು ಸಿರಿಧಾನ್ಯಗಳ ಬೆಳೆಗಳಲ್ಲಿ ನಾವು ನೋಡಬಹುದು. ಸಿರಿಧಾನ್ಯಗಳ ಬೆಳೆ ನಮ್ಮ ದೇಶೀಯ ವ್ಯವಸಾಯ ಪದ್ಧತಿಯಾಗಿದೆ. ಈ ಪದ್ಧತಿಗೆ ಸುಮಾರು ೫ ಸಾವಿರ ವರ್ಷಗಳ ಇತಿಹಾಸವಿದೆ. ಆದ್ದರಿಂದ ರೈತರು ಸಿರಿಧಾನ್ಯಗಳ ಕೃಷಿಗೆ ಒಲವು ತೋರಬೇಕು ಎಂದು ಮನವಿ ಮಾಡಿದರು.

ಮನುಷ್ಯನ ಸುಸ್ಥಿರ ಆರೋಗ್ಯ ಕಾಪಾಡಲು ರಾಗಿ, ನವಣೆ, ಹಾರಕ, ಸಾಮೆ, ನೆಲ್ಲಕ್ಕಿ, ಬರುಗು, ಕೊರಲೆ, ಊದಲು, ಸಜ್ಜೆ ಮತ್ತು ಜೋಳ ಹೀಗೆ ಹಲವಾರು ಬಗೆಯ ಸಿರಿಧಾನ್ಯಗಳಲ್ಲಿನ ಪೌಷ್ಠಿ ಕಾಂಶಗಳು ಸಹಕಾರಿಯಾಗಿವೆ. ಫೈಬರ್ ಯುಕ್ತ ಅಂಶಗಳು, ಹೆಚ್ಚಿನ ಕ್ಯಾಲ್ಸಿಯಂ ಮತ್ತು ಆರೋಗ್ಯ ಯುಕ್ತ ಇತರ ಖನಿಜಾಂಶಗಳಿವೆ.ಇತ್ತೀಚಿನ ಕೆಲವು ಸಂಶೋಧನೆಗಳು ಕೂಡಾ ಸಿರಿಧಾನ್ಯಗಳಿಂದ ಮಾಡಿದ ಆಹಾರ ಆರೋಗ್ಯಕ್ಕೆ ಉತ್ತಮ ಎಂದು ಖಾತ್ರಿಪಡಿಸಿವೆ.ಎಲ್ಲಕ್ಕಿಂತ ಮುಖ್ಯವಾಗಿ ಸಿರಿಧಾನ್ಯ ಗಳನ್ನು ಕಡಿಮೆ ನೀರಿನಲ್ಲಿ,ಕಡಿಮೆ ಫಲವತ್ತತೆ ಇರುವ ಪ್ರದೇಶಗಳಲ್ಲಿಯೂ  ಬೆಳೆಯಬಹು ದಾಗಿರುವುದರಿಂದ ಗುಡ್ಡಗಾಡು ಹಾಗೂ ಬುಡಕಟ್ಟು ಜನಾಂಗದವರಲ್ಲಿ ಈ ಕೃಷಿ ಹೆಚ್ಚು ಜನಪ್ರಿಯ ವಾಗಿದೆ ಎಂದು ತಿಳಿಸಿದರು.

ಬಾಗೇಪಲ್ಲಿ ಸುತ್ತ ಮುತ್ತಲಿನ ಬರಡು ಭೂಮಿಯನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಯ ಉದ್ದೇಶಕ್ಕೆ ೬೦೦ ಎಕರೆ ಮೀಸಲಿಡಲು ಅಂತಿಮ ಅಧಿಸೂಚನೆಯಾಗಿದೆ. ರೈತರಿಗೆ ಒಳ್ಳೆಯ ಭೂ ಸ್ವಾಧೀನ ಪರಿಹಾರವನ್ನು ಕೊಡಿಸಲು ಬಾಗೇಪಲ್ಲಿ ಶಾಸಕರಾದ ಎಸ್.ಎನ್ ಸುಬ್ಬಾರೆಡ್ಡಿ ಅವರು ಪ್ರಯತ್ನ ಮಾಡುತ್ತಿದ್ದಾರೆ. ವ್ಯವಸಾಯ ಪದ್ಧತಿಯು ಬೆಳೆಯಬೇಕು ರೈತರು ಬದುಕಬೇಕು ಅದರ ಜೊತೆಗೆ ಆ ರೈತರ ಮಕ್ಕಳು ಹಾಗೂ ವಿದ್ಯಾವಂತರಿಗೆ ಉದ್ಯೋಗಗಳು ಸಿಗಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಯೋಜನೆ ಮಾಡುತ್ತಿದೆ ಎಂದರು.

ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮಾತನಾಡಿ, ಬಾಗೇಪಲ್ಲಿ ತಾಲ್ಲೂಕಿಗೆ ವಿಶೇಷವಾಗಿ ಎಚ್.ಎನ್ ವ್ಯಾಲಿಯ ಮುಖಾಂತರ ಮಾರ್ಚ್ ಏಪ್ರಿಲ್ ವೇಳೆಗೆ ನೀರು ತರುವ ಪ್ರಯತ್ನ ಮಾಡಲಾ ಗುತ್ತಿದೆ. 2028 ಅವಧಿಯೊಳಗೆ ಎತ್ತಿನಹೊಳೆ ನೀರು ತಂದು ಬಾಗೇಪಲ್ಲಿ ತಾಲ್ಲೂಕನ್ನು ಸಸ್ಯ ಶಾಮಲ ಮಾಡಬೇಕೆಂಬುದು ನನ್ನ ಆಶಯವಾಗಿದೆ. ಸಿರಿಧಾನ್ಯಗಳ ಬಳಕೆಯಿಂದ ಮಧುಮೇಹ, ಹೃದಯರೋಗ,ಕರುಳುಬೇನೆ ಹಾಗೂ ಕ್ಯಾನ್ಸರ್ ನಂತಹ ಇತ್ಯಾದಿ ಕಾಯಿಲೆಗಳನ್ನು ತಡೆಯ ಬಹುದಾಗಿದೆ. ಹಲವಾರು ಸತ್ವಗಳು ಹೇರಳವಾಗಿರುವ ಈ ಸಿರಿಧಾನ್ಯಗಳನ್ನು ಎಲ್ಲಾ ವಯಸ್ಸಿ ವನರು ಸೇವಿಸಿ ಇದರ ಉಪಯೋಗವನ್ನು ಪಡೆಯಬಹುದು ಎಂಬ ಅರಿವು ಮೂಡಿದ್ದರಿಂದ, ಇತ್ತೀಚಿನ ದಿನಗಳಲ್ಲಿ ಮತ್ತೆ ನಮ್ಮ ಆಹಾರದಲ್ಲಿ ಸೇರ್ಪಡೆಯಾಗುತ್ತಿರುವುದು ಸಂತಸದ ವಿಷಯ ವಾಗಿದೆ. ಈ ಅರಿವನ್ನು ಹೆಚ್ಚು ವ್ಯಾಪಕಗೊಳಿಸಲು ಈ ಕಾರ್ಯಕ್ರಮ ಜಿಲ್ಲೆಗೆ ಸಹಕಾರಿ ಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ವಿವಿಧ ಮಳಿಗೆಗಳನ್ನು ತೆರೆದು ಜನರಲ್ಲಿ ಅರಿವು ಮೂಡಿಸಲಾಯಿತು. ಕರಪತ್ರಗಳು ಹಾಗೂ ಬಿತ್ತಿಚಿತ್ರಗಳನ್ನು ಹಂಚುವ ಮೂಲಕ ಸಿರಿಧಾನಗಳ ಉಪಯೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಸಿರಿಧಾನ್ಯಗಳ ರಾಶಿ ಗಳನ್ನು ಪ್ರದರ್ಶನ ಮಾಡಲಾಯಿತು. ವಿವಿಧ ಕೃಷಿ ಮತ್ತು ತೋಟಗಾರಿಕೆ ಯಂತ್ರಗಳ ಪ್ರಾತ್ಯಕ್ಷಿಕೆ ಯನ್ನು ಏರ್ಪಡಿಸಲಾಗಿತ್ತು. ವಿವಿಧ ಫಲಪುಷ್ಪ ಪ್ರದರ್ಶನಗಳ ಆಯೋಜನೆಯು ಸಾರ್ವಜನಿಕರ ಗಮನ ಸೆಳೆಯಿತು.

ಈ ಸಂಧರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎನ್. ರಮೇಶ್, ಪುರಸಭೆ ಅಧ್ಯಕ್ಷ ಎ.ಶ್ರೀನಿವಾಸ್, ಉಪಾಧ್ಯಕ್ಷೆ ಸುಜಾತಮ್ಮ ನರಸಿಂಹ ನಾಯ್ಡು, ಜಿಲ್ಲಾಧಿ ಕಾರಿ ಪಿ ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಕೃಷಿ ಇಲಾಖೆಯ ಕೃಷಿ ಜಂಟಿ ನಿರ್ದೇಶಕಿ ಜಾವೀದಾ ನಾಸಿಮ್ ಖಾನಂ, ತೋಟಗಾರಿಕೆ ಉಪ ನಿರ್ದೇಶಕಿ ಎಂ.ಗಾಯತ್ರಿ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ತಿಮ್ಮಂಪಲ್ಲಿ ಚೌಡರೆಡ್ಡಿ, ತಾಲೂಕು ಪಂಚಾಯತ್ ಕಾರ್ಯ ನಿರ್ವ ಹಣಾಧಿಕಾರಿ ಜಿ.ವಿ ರಮೇಶ್, ಕೆಡಿಪಿ ಸದಸ್ಯ ಮಂಜುನಾಥ್, ವಕೀಲ ಸಂಘದ ಅಧ್ಯಕ್ಷರು ಪುರಸಭಾ ಸದಸ್ಯ ಎ.ನಂಜುಂಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಸಾರ್ವಜನಿಕರು  ಹಾಜರಿದ್ದರು.