ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್ಪಿ) ಪದ್ಮಿನಿ ಸಾಹೂ(Padmini Sahoo) ಅವರು ಭಾನುವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಆದೇಶದಂತೆ ಅವರನ್ನು ಚಿಕ್ಕಬಳ್ಳಾಪುರ ಎಸ್ಪಿಯಾಗಿ ನೇಮಕ ಮಾಡಲಾ ಗಿದ್ದು, ಈ ಹಿಂದೆ ಎಸ್ಪಿಯಾಗಿದ್ದ ಕುಶಾಲ್ ಚೌಕ್ಸೆ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಅಧಿಕಾರ ಸ್ವೀಕರಿಸಿದ ಬಳಿಕ ಪದ್ಮಿನಿ ಸಾಹೂ ಅವರು ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ, ಅಪರಾಧ ನಿಯಂತ್ರಣ, ಸೈಬರ್ ಅಪರಾಧ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಸೇರಿದಂತೆ ಪ್ರಮುಖ ವಿಷಯಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ.
ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಪೊಲೀಸ್ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ.