ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ganesh Chaturthi : ಗಣೇಶ ಹಬ್ಬಕ್ಕೆ ಸಿದ್ಧತೆ: ಎಲ್ಲೆಡೆ ಪರಿಸರ ಪೂರಕ ಮೂರ್ತಿ ಪ್ರತಿಷ್ಠಾಪನೆ

ಬುಧವಾರ ಗಣೇಶ ಹಬ್ಬ ಇರುವುದರಿಂದ ಪುರಸಭೆ ವ್ಯಾಪ್ತಿ ಸೇರಿದಂತೆ ತಾಲ್ಲೂಕು ವ್ಯಾಪ್ತಿ ಯಲ್ಲಿರುವ ಗ್ರಾಮಗಳಲ್ಲಿ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲು ಯುವಕರ ಸಂಘಗಳು, ಸಂಘ-ಸAಸ್ಥೆಯವರು ನಿಗದಿತ ಸ್ಥಳಗಳಲ್ಲಿ ಚಪ್ಪರ ಹಾಕುವುದು, ಗಣಪತಿ ಮೂರ್ತಿ ಖರೀದಿ ಹಾಗೂ ಇನ್ನಿತರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಮಂಗಳವಾರ ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಬಾಗೇಪಲ್ಲಿ: ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಮಂಗಳವಾರ ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಬುಧವಾರ ಗಣೇಶ ಹಬ್ಬ ಇರುವುದರಿಂದ ಪುರಸಭೆ ವ್ಯಾಪ್ತಿ ಸೇರಿದಂತೆ ತಾಲ್ಲೂಕು ವ್ಯಾಪ್ತಿ ಯಲ್ಲಿರುವ ಗ್ರಾಮಗಳಲ್ಲಿ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲು ಯುವಕರ ಸಂಘಗಳು, ಸಂಘ-ಸAಸ್ಥೆಯವರು ನಿಗದಿತ ಸ್ಥಳಗಳಲ್ಲಿ ಚಪ್ಪರ ಹಾಕುವುದು, ಗಣಪತಿ ಮೂರ್ತಿ ಖರೀದಿ ಹಾಗೂ ಇನ್ನಿತರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: Ganesh Chaturthi: ಗಣೇಶ ಚತುರ್ಥಿ 2025: ಪೂಜಾ ಸಮಯ, ಹಬ್ಬದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

ಹೂವು, ಹಣ್ಣು, ಕಾಯಿ ಹಾಗೂ ಇನ್ನಿತರ ಪದಾರ್ಥಗಳ ಬೆಲೆ ಹಬ್ಬದ ಪ್ರಯುಕ್ತ ಹೆಚ್ಚಾಗಿದ್ದರೂ ಜನರು ಲೆಕ್ಕಿಸದೆ ಹಬ್ಬವನ್ನು ಸಡಗರದಿಂದ ಆಚರಿಸಲು ಕುಟುಂಬ ಸಮೇತರಾಗಿ ಖರೀದಿಯಲ್ಲಿ ಮಗ್ನರಾಗಿದ್ದಾರೆ. ಪ್ರತಿಯೊಂದು ಸಮುದಾಯದ ರಸ್ತೆಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಪೈಪೋಟಿ ಏರ್ಪಟ್ಟಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಎತ್ತರವಾದ ಗಣಪತಿ ಮೂರ್ತಿಯನ್ನು ಕೂರಿಸಬೇಕೆಂದು ವಿವಿಧೆಡೆಯಿಂದ ಮೂರ್ತಿಯನ್ನು ಖರೀದಿಸಿ ತರಲು ಮುಂದಾಗಿರುವುದು ಕಂಡು ಬಂದಿದೆ.

”ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಜನಸಾಮಾನ್ಯರು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮೂಲಕ ಸರ್ಕಾರದ ಮತ್ತು ಪುರಸಭೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸ ಬೇಕು. ಸ್ವಚ್ಛ ತೆ ಕಾಪಾಡಬೇಕು. ಗಣಪತಿ ಮೂರ್ತಿ ಕೂರಿಸುವ ಸಂಘ ಸಂಸ್ಥೆಯವರು ಪೊಲೀಸರು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ಪಟ್ಟಣದ ರಾಮಸ್ವಾಮಿ ಪಲ್ಲಿ ರೆಡ್ಡಿ ಕೆರೆಯಲ್ಲಿ ನೀರಿನ ಕೊಳವನ್ನು ಪುರಸಭೆ ವತಿಯಿಂದ ಸಜ್ಜುಗೊಳಿಸಲಾಗಿದೆ.” ಎಂದು ಪುರಸಭೆ ಮುಖ್ಯಾಧಿಕಾರಿಗಳಾದ ಶ್ರೀನಿವಾಸ್ ತಿಳಿಸಿದರು.

*
ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣಪತಿ ಮೂರ್ತಿಯನ್ನು ಕೂರಿಸುವವರು ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಲೇಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸ ಲಾಗುವುದು. ಡಿಜೆ, ಇನ್ನಿತರ ಅತಿ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕಗಳನ್ನು ಬಳಸಬಾರದು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸ ಬೇಕೆಂದು ಈಗಾಗಲೇ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.”
-ಪ್ರಶಾಂತ್ ವರ್ಣಿ ಸರ್ಕಲ್ ಇನ್‌ಸ್ಪೆಕ್ಟರ್