ಚಿಕ್ಕಬಳ್ಳಾಪುರ: ವಿವಿಧ ಧಾರ್ಮಿಕ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಆ.14ರಂದು ಮಧ್ಯಾಹ್ನ 12 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸ ಲಿದ್ದಾರೆ.
ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹಾಗೂ ರಾಜ್ಯ ಕಾರ್ಯದರ್ಶಿ ಗುಂಡೇಲ ನರಸಿಂಹ ರವರು, ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ಪದಾಧಿಕಾರಿಗಳು, ರಾಜ್ಯ ಧರ್ಮಾಲಯ ಸಂರಕ್ಷಣ ಸಮಿತಿಯ ಪ್ರಮುಖ ಶ್ರೀನಿವಾಸ ಗುರೂಜಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ: Chikkaballapur News: 154 ಗ್ರಾಮ ಪಂಚಾಯಿತಿಗಳಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಸಿದ್ಧತೆ: ಜಿಲ್ಲಾಧಿಕಾರಿ ಜಿ.ಪ್ರಭು
ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆಯ ಸಂಘಟಕರು, ವಿಶ್ವ ಮಾನವ ಹಕ್ಕುಗಳ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಕಿರಣ್ಗೌಡ ಹಾಗೂ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ಅಧ್ಯಕ್ಷ ರಾಜಗೋಪಾಲಾ ಚಾರ್ ಬಿ.ಎಲ್. ಸೇರಿದಂತೆ ಹಲವು ಮುಖಂಡರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿರುವರು.