ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sadguru Sri Madhusudan Sai: ಒಟ್ಟಾಗಿ ಕೆಲಸ ಮಾಡಿದರೆ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ: ಶ್ರೀ ಮಧುಸೂದನ ಸಾಯಿ

Sathya Sai Grama: ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ' ದ 87ನೇ ದಿನವಾದ ಸೋಮವಾರ ಆಶೀರ್ವಚನ ನೀಡಿದ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು, ಸತ್ಯ ಸಾಯಿ ಸಂಸ್ಥೆಗೆ ಬೆಂಬಲ ನೀಡುತ್ತಿರುವ, ನಮ್ಮೊಂದಿಗೆ ಕೆಲಸ ಮಾಡುತ್ತಿರುವ ಕೆಲವು ಕಾರ್ಪೊರೇಟ್ ಕೇಂದ್ರಗಳಿಗೆ ಗೌರವ ನೀಡುವ ಸಲುವಾಗಿ ಸಿಎಸ್ಆರ್ ಪುರಸ್ಕಾರವನ್ನು ನೀಡಲಾಗುತ್ತಿದೆ. ನಾವು ಒಟ್ಟಾಗಿ ಹೋದಾಗ ಎಲ್ಲರೂ ಒಟ್ಟಾಗಿ ಬೆಳೆಯಬಹುದು. ಯಾರೋ ಒಬ್ಬರಿಂದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ರೋಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ಹೃದಯ ಸಂಬಂಧಿತ ಸಮಸ್ಯೆಯನ್ನು ಅತಿ ಕಡಿಮೆ ಸಮಯದಲ್ಲಿ ಬಗೆಹರಿಸಿಕೊಂಡ ಹಿಂದೂಪುರದ ಶಿಕ್ಷಕಿ ಸ್ನೇಹ ಎಂಬುವರಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು 'ಗಿಫ್ಟ್ ಆಫ್ ಲೈಫ್' ಪ್ರಮಾಣಪತ್ರ ವಿತರಿಸಿದರು.

ಚಿಕ್ಕಬಳ್ಳಾಪುರ, ನ.10: ಎಲ್ಲರೂ ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ (Sadguru Sri Madhusudan Sai) ಹೇಳಿದ್ದಾರೆ. ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ (Sathya Sai Grama) ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ' ದ 87ನೇ ದಿನವಾದ ಸೋಮವಾರ ಸದ್ಗುರು ಆಶೀರ್ವಚನ ನೀಡಿದರು.

ಸತ್ಯ ಸಾಯಿ ಸಂಸ್ಥೆಗೆ ಬೆಂಬಲ ನೀಡುತ್ತಿರುವ, ನಮ್ಮೊಂದಿಗೆ ಕೆಲಸ ಮಾಡುತ್ತಿರುವ ಕೆಲವು ಕಾರ್ಪೊರೇಟ್ ಕೇಂದ್ರಗಳಿಗೆ ಗೌರವ ನೀಡುವ ಸಲುವಾಗಿ ಸಿಎಸ್ಆರ್ ಪುರಸ್ಕಾರವನ್ನು ನೀಡಲಾಗುತ್ತಿದೆ. ನಾವು ಒಟ್ಟಾಗಿ ಹೋದಾಗ ಎಲ್ಲರೂ ಒಟ್ಟಾಗಿ ಬೆಳೆಯಬಹುದು. ಯಾರೋ ಒಬ್ಬರಿಂದ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದರು.

ಸಾರ್ವಜನಿಕ ಹಣ, ಆಸ್ತಿಯನ್ನು ಪಾರದರ್ಶಕವಾಗಿ ನಿಸ್ವಾರ್ಥ ಅಥವಾ ವಸ್ತುನಿಷ್ಠತೆಯ ತತ್ವಗಳ ಮೇಲೆ ನಿರ್ವಹಿಸಬೇಕು. ನಮ್ಮ ವೆಚ್ಚವನ್ನು ಕನಿಷ್ಠ ಮಟ್ಟದಲ್ಲಿರಿಸಿಕೊಳ್ಳುವುದು ಮತ್ತು ಸಾಧ್ಯವಾದಷ್ಟು ಕಾಳಜಿಯನ್ನು ವಹಿಸುತ್ತಿದ್ದೇವೆ. ದಕ್ಷತೆಯ ಜತೆಗೆ ವೆಚ್ಚಗಳನ್ನು ಕಡಿಮೆ ಮಾಡಿ ವೇಗವಾಗಿ ಕೆಲಸಗಳು ನಡೆಯುವಂತೆ ನೋಡಿಕೊಳ್ಳುತ್ತಿದ್ದೇವೆ. ಇದೇ ಕಾರಣಕ್ಕಾಗಿ ನಮ್ಮ ಈ ಸಂಸ್ಥೆಯನ್ನು ಇಷ್ಟೊಂದು ವೇಗವಾಗಿ ಮುಂದಕ್ಕೆ ತಂದಿದ್ದೇವೆ ಎಂದು ವಿವರಿಸಿದರು.

Sadguru Sri Madhusudan Sai 1

ಅತಿಥಿ ದೇಶ ಸಿಂಗಾಪುರ ಬಗ್ಗೆ ಮಾತನಾಡಿದ ಸದ್ಗುರು ಅವರು, ಮಲೇಷ್ಯಾದಿಂದ ಸಿಂಗಾಪುರ ಬೇರ್ಪಟ್ಟಾಗ ನೈಸರ್ಗಿಕ ಸಂಪನ್ಮೂಲ ಸೇರಿದಂತೆ ಏನೂ ಇಲ್ಲದ ಸ್ಥಿತಿಯಲ್ಲಿತ್ತು. ಆದರೆ ನಂತರ ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ದೇಶವನ್ನು ಕಟ್ಟಿದ್ದಾರೆ. ಇದೀಗ ಸಿಂಗಾಪುರದ 60ನೇ ಹುಟ್ಟುಹಬ್ಬ ಆಚರಿಸುತ್ತಿರುವ ಎಲ್ಲಾ ಸಿಂಗಾಪುರ ಸಹೋದರ, ಸಹೋದರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನಾನು 10 ವರ್ಷಗಳಿಂದ ಸಿಂಗಾಪುರಕ್ಕೆ ಹಲವಾರು ಬಾರಿ ಭೇಟಿ ನೀಡಿದ್ದು, ಎಲ್ಲಾ ರೀತಿಯ ರಾಜಕಾರಣಿಗಳು, ಆಡಳಿತಗಾರರು, ಸಮಾಜ ಸೇವಕರು, ಸಾಮಾನ್ಯ ಯುವಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿನ ಉತ್ತಮ ಆಡಳಿತವನ್ನು ನೋಡಿದ್ದೇವೆ. ಆ ನಗರ, ಪಾಕಪದ್ಧತಿಗಳು, ಸಂಸ್ಕೃತಿಯನ್ನು ಆನಂದಿಸಿದ್ದೇನೆ. ವಿವಿಧ ದೇಶಗಳಿಂದ ಬಂದಿರುವ ಜನರು ಅಲ್ಲಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಒಂದು ದೇಶ ಒಂದು ಕುಟುಂಬ ಮಿಷನ್‌ಗೆ ಸೇರಿದ ಮೊದಲ ದೇಶ ಸಿಂಗಾಪುರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Sadguru Sri Madhusudan Sai 2

ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಮಾತನಾಡಿ, ಮುದ್ದೇನಹಳ್ಳಿಯ ಸತ್ಯ ಸಾಯಿ ಸಂಸ್ಥೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ, ಉಚಿತ ವೈದ್ಯಕೀಯ ಶಿಕ್ಷಣ ನೀಡಲಾಗುತ್ತಿದೆ. ಇದು ಅಸಾಧ್ಯವಾದದ್ದು, ಆದರೆ ಇದನ್ನು ಶ್ರೀ ಮಧುಸೂದನ ಸಾಯಿ ಅವರು ಸಾಧ್ಯವಾಗಿಸಿದ್ದಾರೆ. ಮುದ್ದೇನಹಳ್ಳಿಯನ್ನು 3ಎಂ ಎಂದು ಕರೆಯುತ್ತೇನೆ. ಮಧುಸೂದನ ಮುದ್ದೇನಹಳ್ಳಿ ಮಿರಾಕಲ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಜೀವಿನಿ ಆಸ್ಪತ್ರೆ ಮತ್ತು 'ಈಚ್ ಒನ್ ಎಜುಕೇಟ್ ಒನ್ ಸ್ಕಾಲರ್ ಶಿಪ್ ಕಾರ್ಯಕ್ರಮ' ಕ್ಕೆ ಬೆಂಬಲ ನೀಡುತ್ತಿರುವ 'ಸೂರ್ಯ ಫೈನಾನ್ಷಿಯಲ್ ಟೆಕ್ನಾಲಜೀಸ್' ಕಂಪನಿಗೆ 'ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ' ನೀಡಿ ಗೌರವಿಸಲಾಯಿತು. ಕಂಪನಿಯ ಸಂಸ್ಥಾಪಕರು ಮತ್ತು ಅಧ್ಯಕ್ಷ ಡಿ.ಎನ್. ಪ್ರಸಾದ್ ಅವರು ಪ್ರಶಸ್ತಿ ಸ್ವೀಕರಿಸಿದರು.

ಸಾಯಿ ವ್ಹೀಲ್ಸ್ ಮೊಬೈಲ್ ಮೆಡಿಕಲ್ ಯೂನಿಟ್‌ಗೆ ಬೆಂಬಲ ನೀಡುತ್ತಿರುವ 'ಶ್ರೀ ಸಾಯಿ ಹೀಲಿಂಗ್ ಟ್ರಸ್ಟ್' ಗೆ 'ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ' ನೀಡಿ ಗೌರವಿಸಲಾಯಿತು. ಟ್ರಸ್ಟ್‌ನ ಸಂಸ್ಥಾಪಕರು ಹಾಗೂ ಟ್ರಸ್ಟಿ ಎಸ್. ಹೇಮಂತ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಅನ್ನಪೂರ್ಣ ಟ್ರಸ್ಟ್‌ಗೆ ಬೆಂಬಲ ನೀಡುತ್ತಿರುವ 'ಟ್ರೆಲ್ಲೆಬೋರ್ಗ್ ಸೀಲಿಂಗ್ ಸಲ್ಯೂಷನ್' ಕಂಪನಿಗೆ 'ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ' ನೀಡಿ ಗೌರವಿಸಲಾಯಿತು. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ನಾಗರಗದ್ದೆ ಅವರು ಪ್ರಶಸ್ತಿ ಸ್ವೀಕರಿಸಿದರು.

ಸಿಂಗಾಪುರ ದೇಶದಲ್ಲಿ ಶಿಕ್ಷಣಕ್ಕೆ ಕೊಡುಗೆ ನೀಡುತ್ತಿರುವ ಆನ್ಸನ್ ಎನ್.ಜಿ. (Anson NG) ಅವರಿಗೆ 'ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ' ನೀಡಿ ಗೌರವಿಸಲಾಯಿತು. ಸಿಂಗಾಪುರದ ಪ್ರತಿನಿಧಿ ಸೆರೆನಾ ಟಾನ್ ಗೆಕ್ ವೀ (Serena Tan Gek Hwee) ಅವರು ತಮ್ಮ ದೇಶದಲ್ಲಿನ ಕಲೆ, ಸಂಸ್ಕೃತಿ, ಸಂಗೀತ, ಭಾಷೆ, ಪ್ರಸಿದ್ಧ ತಾಣಗಳು, ಖಾದ್ಯಗಳು, ಸಾಂಪ್ರದಾಯಿಕ ಉಡುಪು, ಆಧ್ಯಾತ್ಮಿಕ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಮತ್ತೊಬ್ಬ ಪ್ರತಿನಿಧಿ ಗೀತಿಕಾ ದಾಸ್ ತಮ್ಮ ಜೀವನದಲ್ಲಿನ ಆಧ್ಯಾತ್ಮಿಕ ಬದಲಾವಣೆಯ ಅನುಭವ ಹಂಚಿಕೊಂಡರು.

ಈ ಸುದ್ದಿಯನ್ನೂ ಓದಿ | Sadguru Sri Madhusudan Sai: ಮುಂಬರುವ ದಿನಗಳಲ್ಲಿ ಭಾರತ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮುತ್ತದೆ: ಶ್ರೀ ಮಧುಸೂದನ ಸಾಯಿ

ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಮೂಲಕ ಹೃದಯ ಸಂಬಂಧಿತ ಸಮಸ್ಯೆಯನ್ನು ಅತಿ ಕಡಿಮೆ ಸಮಯದಲ್ಲಿ ಬಗೆಹರಿಸಿಕೊಂಡ ಹಿಂದೂಪುರದ ಶಿಕ್ಷಕಿ ಸ್ನೇಹ ಎಂಬುವರಿಗೆ 'ಗಿಫ್ಟ್ ಆಫ್ ಲೈಫ್' ಪ್ರಮಾಣಪತ್ರ ವಿತರಿಸಲಾಯಿತು. ಸ್ನೇಹಾ ಅವರಿಗೆ ಲಕ್ಷಾಂತರ ರೂಪಾಯಿ ವೆಚ್ಚದ ಅತ್ಯಾಧುನಿಕ ತಂತ್ರಜ್ಞಾನದ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗಿದೆ.