ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Gudibande News: ಗುಡಿಬಂಡೆಯಲ್ಲಿ ಸಡಗರದ ರಂಜಾನ್ ಆಚರಣೆ, ಸಸಿ ನೆಟ್ಟು ರಂಜಾನ್ ಆಚರಿಸಿದ ಪರಿಸರ ಪ್ರೇಮಿಗಳು

ತಿಂಗಳ ಕಾಲ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು, ಇಂದು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಸಂಭ್ರಮದಿಂದ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ನಮಾಜ್ ಬಂಡೆಯ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಬೃಹತ್ ಮೆರವಣಿಗೆಯ ಮೂಲಕ ತೆರಳಿದರು. ನಂತರ ಜಾಮಿಯಾ ಮಸೀದಿಯ ಮೌಲ್ವಿಗಳು ಹಬ್ಬದ ಮಹತ್ವದ ಬಗ್ಗೆ ಧಾರ್ಮಿಕ ಉಪದೇಶ ನೀಡಿದರು.

ಗುಡಿಬಂಡೆಯಲ್ಲಿ ರಂಜಾನ್ ಹಬ್ಬದ ಅಂಗವಾಗಿ ಪರಿಸರ ವೇದಿಕೆಯ ವತಿಯಿಂದ ಸಸಿ ನೆಟ್ಟು ರಂಜಾನ್ ಶುಭಾಶಯ ಕೋರಲಾಯಿತು

ಗುಡಿಬಂಡೆ: ಮುಸ್ಲೀಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ರಂಜಾನ್ ಹಬ್ಬ ವನ್ನು ಗುಡಿಬಂಡೆಯಲ್ಲಿ ಶ್ರದ್ದಾಭಕ್ತಿಯಿಂದ ಹಾಗೂ ಸಂಭ್ರಮ ಸಡಗರದಿಂದ ಆಚರಿಸಿ ದರು.

ಪಟ್ಟಣದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಣೆ ಮಾಡಿ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ತಿಂಗಳ ಕಾಲ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು, ಇಂದು ಬೆಳಿಗ್ಗೆ ಹೊಸ ಬಟ್ಟೆ ಧರಿಸಿ ಸಂಭ್ರಮದಿಂದ ಹಬ್ಬದಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ನಮಾಜ್ ಬಂಡೆಯ ಬಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಬೃಹತ್ ಮೆರವಣಿಗೆಯ ಮೂಲಕ ತೆರಳಿದರು. ನಂತರ ಜಾಮಿಯಾ ಮಸೀದಿಯ ಮೌಲ್ವಿಗಳು ಹಬ್ಬದ ಮಹತ್ವದ ಬಗ್ಗೆ ಧಾರ್ಮಿಕ ಉಪದೇಶ ನೀಡಿದರು. ಪ್ರಾರ್ಥನೆಯ ನಂತರ ಮುಸ್ಲಿಂ ಬಾಂಧವರು ತಮ್ಮ ಹಿರಿಯರ ಸಮಾಧಿಗಳ ಬಳಿ ತೆರಳಿ ಗೌರವ ಸಲ್ಲಿಸಿದರು.

ಇದನ್ನೂ ಓದಿ: Gudibande News: ಗುಡಿಬಂಡೆಯಲ್ಲಿ ಸಂಜೀವಿನಿ ಯುಗಾದಿ ಮಾಸಿಕ ಸಂತೆ, ಸಾವಯವ ಉತ್ಪನ್ನಗಳ ಮಾರಾಟ

ಈ ಸಂಭ್ರಮದ ಅಂಗವಾಗಿ ಜಿಲ್ಲಾ ಪರಿಸರ ವೇದಿಕೆಯ ವತಿಯಿಂದ ಪಟ್ಟಣದ ರಾಜ ಬೀದಿಯಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಹಾಗೂ ಕೋಮು ಸೌಹಾರ್ದತೆ ಮೆರೆಯಲಾಯಿತು. ಈ ಸಮಯದಲ್ಲಿ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ರಿಯಾಜ್ ಪಾಶ ಅವರು ಮಾತನಾಡಿ, ರಂಜಾನ್ ಮುಸ್ಲಿಮರ ಪವಿತ್ರ ಹಬ್ಬವಾಗಿದ್ದು, ಒಂದು ತಿಂಗಳ ಕಾಲ ಉಪವಾಸವಿದ್ದು ಶಿಸ್ತು ಹಾಗೂ ಭಕ್ತಿಯಿಂದ ಆಚರಿಸಲಾಗುತ್ತದೆ. ಇಂದು ಹಿಂದೂ-ಮುಸ್ಲಿಂ ಬಾಂಧವರೆಲ್ಲರೂ ಒಟ್ಟಾಗಿ ಗಿಡ ನೆಟ್ಟು ಹಬ್ಬ ಆಚರಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದರು.

ಬಳಿಕ ಜಿಲ್ಲಾ ಪರಿಸರ ವೇದಿಕೆಯ ಅಧ್ಯಕ್ಷ ಡಾ. ಗುಂಪುಮರದ ಆನಂದ್ ಮಾತನಾಡಿ, ಪರಿಸರ ವೇದಿಕೆಯು ಪ್ರತಿ ಹಬ್ಬದ ಸಂದರ್ಭದಲ್ಲೂ ಗಿಡ ನೆಡುವ ಮೂಲಕ ಅರ್ಥ ಪೂರ್ಣವಾಗಿ ಆಚರಿಸುತ್ತಾ ಬಂದಿದೆ. ಇಂದು ಎಲ್ಲರೂ ಅಣ್ಣ-ತಮ್ಮಂದಿರಂತೆ ಸಸಿ ನೆಟ್ಟಿರುವುದು ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ದ್ವಾರಕಾನಾಥ ನಾಯ್ಡು, ಮಾಜಿ ಉಪಾಧ್ಯಕ್ಷ ಎಂ.ಎನ್. ರಾಜಣ್ಣ, ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಕಾರ್ಯದರ್ಶಿ ಜಿ.ವಿ. ಶ್ರೀನಾಥ್, ಜಿಲ್ಲಾ ಸಮಿತಿ ಸದಸ್ಯ ಜಿ.ರಾಜೇಶ್, ಮುಖಂಡರಾದ ಕರವೇ ಶ್ರೀನಿವಾಸ್ ಯಾದವ್, ಅಬ್ಜಲ್, ಇರ್ಫಾನ್, ಯಾಸೀನ್, ಬಾಬು, ಗುಲ್ಸೇರ್, ಮಜ್ಜು, ಅಮ್ಜದ್ ಸೇರಿದಂತೆ ಹಲವು ಭಾಗವಹಿಸಿದ್ದರು.