ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani News: ನಿವೃತ್ತ ನೌಕರರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಸಂಘದ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಸಾಧನೆಗೈದ ಎನ್.ಕಾರುಣ್ಯ,ಎನ್ ವೇದ,ಸ್ಕಂದ ಶ್ರೀ ವಾತ್ಸವ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅಧಿಕ ಅಂಕ ಗಳಿಸಿದ ಜಿ ಆರ್.ನಯನ ರವರನ್ನು ಸನ್ಮಾನಿಸಿ, ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು.

ನಿವೃತ್ತ ನೌಕರರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಎನ್. ಕಾರುಣ್ಯ,ಎನ್ ವೇದ,ಸ್ಕಂದ ಶ್ರೀ ವಾತ್ಸವ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅಧಿಕ ಅಂಕ ಗಳಿಸಿದ ಜಿ ಆರ್. ನಯನ ರವರನ್ನು ಸನ್ಮಾನಿಸಿ,ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. -

Profile
Ashok Nayak May 10, 2026 1:07 AM

ಚಿಂತಾಮಣಿ: ತಾಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ವತಿಯಿಂದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾದ ನಿವೃತ್ತ ಸರ್ಕಾರಿ ನೌಕರರ ಮೊಮ್ಮಕ್ಕಳನ್ನು ಸನ್ಮಾನಿಸಿ ಶುಭ ಹಾರೈಸಲಾಯಿತು.

ಸಂಘದ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಸಾಧನೆಗೈದ ಎನ್.ಕಾರುಣ್ಯ,ಎನ್ ವೇದ,ಸ್ಕಂದ ಶ್ರೀ ವಾತ್ಸವ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅಧಿಕ ಅಂಕ ಗಳಿಸಿದ ಜಿ ಆರ್. ನಯನ ರವರನ್ನು ಸನ್ಮಾನಿಸಿ,ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು.

ಇದನ್ನೂ ಓದಿ: Chinthamani News: ಚಿಂತಾಮಣಿಯಲ್ಲಿ ಜೆಸಿಬಿಗಳ ಅಬ್ಬರ: ಐಡಿಎಸ್‌ಎಂಟಿ ಮಾರುಕಟ್ಟೆ ಕಟ್ಟಡ ನೆಲಸಮ ಕಾರ್ಯಾರಂಭ

ಈ ಸಂದರ್ಭದಲ್ಲಿ ರಾಜ್ಯ ಸಂಘದ ಕಾರ್ಯದರ್ಶಿ ಡಾ.ಹೆಚ್ ಮುನಿಯಪ್ಪ, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ಕೆವಿ. ಚೌಡಪ್ಪ, ಜಿಲ್ಲಾ ಸಂಘದ ಪ್ರತಿನಿಧಿ ಅಂಜನಾಚಾರಿ, ತಾಲೂಕು ಅಧ್ಯಕ್ಷರಾದ ನಾರಾಯಣಸ್ವಾಮಿ,ಉಪಾಧ್ಯಕ್ಷರಾದ ಎ ಎಸ್.ರಾಮಚಂದ್ರ ಮೂರ್ತಿ, ಕಾರ್ಯದರ್ಶಿ ಎಸ್.ಆಂಜನಪ್ಪ, ದಾನಿಗಳಾದ ಡಿ ಜಿ ಎಂ ನರಸಿಂಹಮೂರ್ತಿ, ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಸನ್ಮಾನವನ್ನು ಸ್ವೀಕರಿಸಿದ ವಿದ್ಯಾರ್ಥಿಗಳು ಸಂಘದ ಪದಾಧಿಕಾರಿಗಳಿಗೆ ಹಾಗೂ ಗಣ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.