ಚಿಂತಾಮಣಿ : ನಗರದ ಶಾಂತಿ ನಗರದ ವಾಸಿ ಕೆ.ಎಸ್.ಆರ್.ಟಿ.ಸಿ ಸಂಚಾರ ನಿಯಂತ್ರಕ ಮೆಹಬೂಬ್ ಸಾಬ್ ಅವರ ಪುತ್ರಿ ರುಫಿಯಾ.ಕೆ.ಎಂ ಎಂಬುವರು ಬೆಂಗಳೂರು ವಿಶ್ವವಿದ್ಯಾ ಲಯದಲ್ಲಿ ಎಂ.ಎಸ್.ಸಿ ಪಿಸಿಕ್ಸ್ ವಿಭಾಗದಲ್ಲಿ ಏಳು ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಚಿಂತಾಮಣಿ ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: Chikkaballapur News: ದೇವೇಗೌಡರ ಆರೋಗ್ಯ ಸುಧಾರಿಸಲೆಂದು ಜೆಡಿಎಸ್ನಿಂದ 101 ಈಡುಗಾಯಿ ಹೊಡೆದು ದೇವರ ಮೊರೆ
೬೦ ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ಚಿನ್ನದ ಪದಕಗಳನ್ನು ನೀಡಿ ಶುಭ ಕೋರಿದ್ದಾರೆ.