ಮಂಚೇನಹಳ್ಳಿ: ಶ್ರೀ ಕೃಷ್ಣ ಜನ್ಮಾಷ್ಟಮಿ(Sri Krishna Janmashtami)ಯ ಅಂಗವಾಗಿ ಮಂಚೇನ ಹಳ್ಳಿ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಜೈ ಫೌಂಡೇಶನ್ ವತಿಯಿಂದ ಆಸ್ಪತ್ರೆಯ ಕರ್ತವ್ಯನಿರತ ಸಿಬ್ಬಂದಿ, ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಹಣ್ಣು–ಹಂಪಲು ಮತ್ತು ಬ್ರೆಡ್ ವಿತರಿಸುವ ಮೂಲಕ ಅರ್ಥಪೂರ್ಣ ವಾಗಿ ಹಬ್ಬ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜೈ ಫೌಂಡೇಶನ್ನ ಪದಾಧಿಕಾರಿಗಳು, ಪರರ ಸೇವೆಯಲ್ಲಿ ತೊಡಗಿಸಿಕೊಳ್ಳುವುದೇ ಶ್ರೀ ಕೃಷ್ಣ ಪರಮಾತ್ಮನಿಗೆ ಸಲ್ಲಿಸುವ ಶ್ರೇಷ್ಠ ಪೂಜೆ. ಜನರ ಆರೋಗ್ಯ ಹಾಗೂ ಅವರ ಮುಖದಲ್ಲಿನ ಮಂದಹಾಸವೇ ಸೇವಾ ಕಾರ್ಯಕ್ಕೆ ದೊರೆಯುವ ನಿಜವಾದ ಪ್ರತಿಫಲ ಎಂದರು.
ಇದನ್ನೂ ಓದಿ: Sri Krishna Janmashtami in Gudibande: ಶ್ರೀ ಕೃಷ್ಣನ ಜೀವನಾದರ್ಶಗಳನ್ನು ಯುವಜನತೆ ಅಳವಡಿಸಿಕೊಳ್ಳಲಿ
ಆಸ್ಪತ್ರೆಗೆ ಆಗಮಿಸಿದ್ದ ಗರ್ಭಿಣಿಯರು, ಸಾರ್ವಜನಿಕರು ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಕೀಯ ಸಿಬ್ಬಂದಿಗೆ ಹಣ್ಣು–ಹಂಪಲು ಮತ್ತು ಬ್ರೆಡ್ ವಿತರಿಸಲಾಯಿತು. ಜನ್ಮಾಷ್ಟಮಿಯ ಪವಿತ್ರ ದಿನದಂದು ಕೈಗೊಂಡ ಈ ಸೇವಾ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಜೈ ಫೌಂಡೇಶನ್ನ ಸದಸ್ಯರು ಹಾಗೂ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಪಾಲ್ಗೊಂಡಿದ್ದರು.