Chikkaballapur News: ಮುಷ್ಕರದ ಅವಧಿಯಲ್ಲಿ ಶಕ್ತಿ ಯೋಜನೆ ಜಾರಿಯಿಲ್ಲ : ವಿದ್ಯಾರ್ಥಿಗಳಿಗೆ ಖಾಸಗಿ ಬಸ್ಸುಗಳಲ್ಲಿ ಶೇ.50 ರಿಯಾಯಿತಿ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ರವರು ವಿವಿಧ ಬೇಡಿಕೆಗಳನ್ನಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಮಂತ್ರಿಗಳು ನಿಗಮಗಳ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಆಗಸ್ಟ್ ೪ ರಂದು ಬೆಂಗಳೂರಿನಲ್ಲಿ ಮಾತುಕತೆ ನಡೆಸಲಿದ್ದು, ಮಾತುಕತೆ ಯಶಸ್ವಿಯಾಗಿ ಮುಷ್ಕರವನ್ನು ಸಂಘಟನೆಗಳು ಕೈ ಬಿಟ್ಟರೆ ನಿಗಮಗಳ ಸಾರಿಗೆ ವ್ಯವಸ್ಥೆಯು ಎಂದಿನಂತೆ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ ಇಲ್ಲವಾದಲ್ಲಿ ಸಾರಿಗೆ ನಿಗಮಗಳ ಮಜಲು ವಾಹನಗಳ ಸಾರಿಗೆ ಸೌಕರ್ಯವು ಸ್ಥಗಿತಗೊಳ್ಳುವ ಸಂಭವವಿರುತ್ತದೆ

ಚಿಕ್ಕಬಳ್ಳಾಪುರ ನಗರದ ಬಸ್ ನಿಲ್ದಾಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು.

ಚಿಕ್ಕಬಳ್ಳಾಪುರ: ಆ.೫ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾ ವಧಿಗೆ ಮುಷ್ಕರಕ್ಕೆ ಕರೆ ನೀಡಿದ್ದು, ಜಿಲ್ಲೆಯಲ್ಲಿನ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗದಂತೆ ಜಿಲ್ಲಾಡಳಿತ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ನಿಗಮದ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ರವರು ವಿವಿಧ ಬೇಡಿಕೆಗಳನ್ನಿಟ್ಟು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಮಂತ್ರಿಗಳು ನಿಗಮಗಳ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಆಗಸ್ಟ್ ೪ ರಂದು ಬೆಂಗಳೂರಿನಲ್ಲಿ ಮಾತುಕತೆ ನಡೆಸಲಿದ್ದು, ಮಾತುಕತೆ ಯಶಸ್ವಿಯಾಗಿ ಮುಷ್ಕರವನ್ನು ಸಂಘಟನೆಗಳು ಕೈ ಬಿಟ್ಟರೆ ನಿಗಮಗಳ ಸಾರಿಗೆ ವ್ಯವಸ್ಥೆಯು ಎಂದಿನಂತೆ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ ಇಲ್ಲವಾದಲ್ಲಿ ಸಾರಿಗೆ ನಿಗಮಗಳ ಮಜಲು ವಾಹನಗಳ ಸಾರಿಗೆ ಸೌಕರ್ಯವು ಸ್ಥಗಿತಗೊಳ್ಳುವ ಸಂಭವವಿರುತ್ತದೆ ಆದ್ದರಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯವಾಗಿ ಸಾರಿಗೆ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ ಎಂದರು.
ಇದನ್ನೂ ಓದಿ: KChikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ
ಮುಷ್ಕರದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಾಯಿಸಲಾಗಿರುವ ೧೨೦ ಮಜಲು ವಾಹನಗಳು,೮೮ ಒಪ್ಪಂದದ ವಾಹನಗಳು, ೨೧೯ ಮ್ಯಾಕ್ಸಿಕ್ಯಾಬ್,೫೮೧ ಖಾಸಗಿ ಶಾಲಾ ವಾಹನಗಳು, ೫೧ ಖಾಸಗಿ ಸೇವಾ ವಾಹನಗಳು ಸೇರಿದಂತೆ ಒಟ್ಟು ೧೦೫೯ ವಾಹನಗಳನ್ನು ಪ್ರಯಾಣಿ ಕರ ಅನುಕೂಲಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವ್ಯವಸ್ಥೆ ಮಾಡಲಾಗಿರುತ್ತದೆ.
ಈ ವಾಹನಗಳು ನಿಗಮದ ಬಸ್ಸು ನಿಲ್ದಾಣಗಳಿಂದಲೇ ಕಾರ್ಯಾಚರಣೆ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ. ಒಪ್ಪಂದದ ವಾಹನಗಳನ್ನು ಬೆಂಗಳೂರು, ಕೋಲಾರ, ಚಿಂತಾಮಣಿ, ಬಾಗೇಪಲ್ಲಿ ಮತ್ತು ಗೌರಿಬಿದನೂರು ಪಟ್ಟಣಗಳಿಗೆ ಕಾರ್ಯಚರಣೆ ಮಾಡಲು ಕ್ರಮವಹಿಸಲಾಗುವುದು. ಮ್ಯಾಕ್ಸಿ ಕ್ಯಾಬ್ ಮತ್ತು ಆಟೋಗಳನ್ನು ಉಪಯೋಗಿಸಿಕೊಂಡು ಜಿಲ್ಲೆಯ ಸ್ಥಳೀಯ ಗ್ರಾಮಗಳಿಂದ ಕಾರ್ಯಾಚರಣೆಯನ್ನು ಮಾಡಲಾಗುವುದು. ಈ ಎಲ್ಲ ಖಾಸಗಿ ವಾಹನಗಳಲ್ಲಿ ಕೆಎಸ್ಆರ್ಟಿಸಿ ವಾಹನಗಳ ದರಗಳನ್ನೇ ಪಾವತಿಸಿ ಪ್ರಯಾಣಿಕರು ಪ್ರಯಾಣ ಮಾಡಬಹುದಾಗಿದೆ. ಜಿಲ್ಲೆಯಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಎಸ್ಪಿ.ಕುಶಾಲ್ ಚೌಕ್ಸೆ ಮಾತನಾಡಿ, ಆ.5ರಂದು ನಡೆಯುವ ಸಾರಿಗೆ ನೌಕರರ ಮುಷ್ಕರದ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಆಗದಂತೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ. ಕೇಂದ್ರ ಬಸ್ ನಿಲ್ದಾಣ,ಸಂಪರ್ಕ ನಿಲ್ದಾಣಗಳ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾನೂನು ಮೀರಿ ನಡೆದುಕೊಳ್ಳುವವರಿಗೆ ತಕ್ಕಶಾಸ್ತಿ ಮಾಡಲಾಗು ವುದು ಎಂದರು.
*
ಸಾರಿಗೆ ನೌಕರರ ಮುಷ್ಕರದ ಅವಧಿಯಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಸಾರಿಗೆ ಸಮಸ್ಯೆ ಯನ್ನು ನಿವಾರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಈ ವೇಳೆ ಶೇ ೫೦ ರಷ್ಟು ರಿಯಾಯಿತಿ ನೀಡಲು ಸೂಚನೆ ನೀಡಲಾಗಿದೆ. ಶಕ್ತಿಯೋಜನೆ ಫಲಾನುಭವಿಗಳು ಹಣಕೊಟ್ಟೇ ಪ್ರಯಾಣ ಮಾಡಬೇಕು. ಉಚಿತ ಪ್ರಯಾಣಕ್ಕೆ ಅವಕಾಶ ಇರುವುದಿಲ್ಲ.ಸಾರ್ವಜನಿಕರು ತಾಳ್ಮೆಯನ್ನು ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮನವಿ ಮಾಡಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರು ಮಾತನಾಡಿ ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ನಡೆದರೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚ ರಿಕೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಸ್ಆರ್ಟಿಸಿಯ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣ ಅಧಿಕಾರಿ ವಿ.ಬಸವರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಾಚಾರ್ಯ, ಚಿಂತಾಮಣಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಬೈರಾರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.