ಹುಣ್ಣಿಮೆ ಅಂಗವಾಗಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯ ಬ್ರಹ್ಮರಥೋತ್ಸವ
ನಗರದ ವಾಸವಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯ ಬ್ರಹ್ಮ ರಥೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ಶ್ರದ್ದಾಭಕ್ತಿಯಿಂದ ನೆರವೇರಿತು. ಮಾಘ ಶುದ್ದ ಹುಣ್ಣಿಮೆ ಪ್ರಯುಕ್ತ ಬುಧವಾರ ಮುಂಜಾನೆಯಿಂದಲೇ ಹೋಮ ಹವನ ಮುಂತಾದ ದೇವತಾ ಕಾರ್ಯಗಳನ್ನು ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಮುರಳೀಧರ ಅವರ ನೇತೃತ್ವ ದಲ್ಲಿ ಸಾಂಗವಾಗಿ ನೆರವೇರಿದವು. ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಮಧ್ಯಾಹ್ನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೆರವೇರಿಸ ಲಾಯಿತು.

ನಗರದ ವಾಸವಿ ರಸ್ತೆಯಲ್ಲಿರುವ ದೇವಾಲಯದ ಆವರಣದಲ್ಲಿ ಗುರುವಾರ ಶ್ರೀಲಕ್ಷ್ಮೀವೆಂಕಟರಮಣ ಸ್ವಾಮಿಯ ಬ್ರಹ್ಮರಥೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ಶ್ರದ್ದಾಭಕ್ತಿಯಿಂದ ನೆರವೇರಿತು.

ಗೌರಿಬಿದನೂರು: ನಗರದ ವಾಸವಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯ ಬ್ರಹ್ಮ ರಥೋತ್ಸವ ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ಶ್ರದ್ದಾಭಕ್ತಿಯಿಂದ ನೆರವೇರಿತು. ಮಾಘ ಶುದ್ದ ಹುಣ್ಣಿಮೆ ಪ್ರಯುಕ್ತ ಬುಧವಾರ ಮುಂಜಾನೆಯಿಂದಲೇ ಹೋಮ ಹವನ ಮುಂತಾದ ದೇವತಾ ಕಾರ್ಯಗಳನ್ನು ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಮುರಳೀಧರ ಅವರ ನೇತೃತ್ವ ದಲ್ಲಿ ಸಾಂಗವಾಗಿ ನೆರವೇರಿದವು. ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಮಧ್ಯಾಹ್ನ ಶ್ರೀ ಲಕ್ಷ್ಮೀ ವೆಂಕ ಟೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೆರವೇರಿಸಲಾಯಿತು.
ಇದನ್ನೂ ಓದಿ: Chikkaballapur (Chinthamani) News: ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜತೆಗಿರುತ್ತದೆ
ಈ ವೇಳೆ ದೇವಸ್ಥಾನದಲ್ಲಿ ನೆರವೇರಿದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಹಸೀಲ್ದಾರ್ ಮಹೇಶ್ ಎಸ್ ಪತ್ರಿ,ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ಪೌರಾಯುಕ್ತೆ ಗೀತಾ, ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಸದಸ್ಯರಾದ ರೂಪಾ ಅನಂತರಾಜು, ಮಾರ್ಕೆಟ್ ಮೋಹನ್, ವಿ,ರಮೇಶ್, ವೆಂಕಟರೆಡ್ಡಿ, ರಾಜುಕುಮಾರ, ಉದ್ಯಮಿಗಳಾದ ಬಿಆರ್.ಶ್ರೀನಿವಾಸಮೂರ್ತಿ, ಹೆಚ್ ಅರ್. ಗೋವಿಂದರಾಜು, ರಾಜಸ್ವ ನಿರೀಕ್ಷಕರಾದ ಅಬ್ದುಲ್ ಖಾದರ್, ರೈತ ಸಂಘದ ಅಧ್ಯಕ್ಷ ಲೋಕೇಶ ಗೌಡ, ರಾಜಣ್ಣ, ಪರಮೇಶ್, ವೇಣುಮಾದವ ಮುಂತಾದವರು ಹಾಜರಿದ್ದರು.