ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

MLA KH. Puttaswamy Gowda: ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲು ಪ್ರತಿ ತಿಂಗಳು ಇ ಖಾತಾ ವಿತರಣೆಗೆ ಕ್ರಮ : ಶಾಸಕ ಪುಟ್ಟಸ್ವಾಮಿಗೌಡ

ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ- ಖಾತಾವನ್ನು ಪ್ರಕಟಿಸಲಾಗಿದ್ದು, ಸಾರ್ವ ಜನಿಕರು ಈ ಮಾಹಿತಿಗಳನ್ನು ನೇರವಾಗಿ ವೀಕ್ಷಿಸಬಹುದು.ಸದರಿ ಮಾಹಿತಿಗಳ ಆಧಾರದ ಬಗ್ಗೆ ತಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು,ನಮೂದಿಸಿದ ಮಾಹಿತಿ ನಿಖರತೆಯನ್ನು ಪರಿಶೀಲಿಸಿ ಅನುಮೋದಿಸಲಾಗು ವುದು.

ಗೌರಿಬಿದನೂರು: ಜನರು ಇ-ಖಾತೆಗಾಗಿ ನಗರಸಭೆ ಕಚೇರಿಗೆ ಅಲೆಯುವುದು ಮತ್ತು ಮಧ್ಯವರ್ತಿ( mediator) ಗಳ ಹಾವಳಿಯನ್ನು ತಪ್ಪಿಸುವ ಉದ್ದೇಶದಿಂದ ನಗರಸಭೆ ಕಚೇರಿಯಲ್ಲಿ ಪ್ರತಿ ತಿಂಗಳೂ ಇ-ಖಾತಾ ಅದಾಲತ್ ( E-Khata Adalat)ಮೂಲಕ ಜನರಿಗೆ ನೇರವಾಗಿ ಇ-ಖಾತೆಯನ್ನು ವಿತರಿಸುತ್ತಿದ್ದೇವೆ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು(MLA KH. Puttaswamy Gowda) ತಿಳಿಸಿದರು.

ಅವರು ನಗರಸಭೆಯ ಸಭಾಂಗಣದಲ್ಲಿ ನಡೆದ ಇ- ಖಾತಾ ಅದಾಲತ್ ಕಾರ್ಯಕ್ರಮದಲ್ಲಿ ಫಲಾನು ಭವಿಗಳಿಗೆ ಇ-ಖಾತೆ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಮಾಡಿ ಮಾತನಾಡಿದರು.

ಇ-ಖಾತೆಗಾಗಿ ಸಾರ್ವಜನಿಕರು ನಗರಸಭೆ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವುದು ಮತ್ತು ಮಧ್ಯವರ್ತಿಗಳ ಹಾವಳಿಯನ್ನು ತಡೆಗಟ್ಟುವುದೇ ನನ್ನ ಮೂಲ ಉದ್ದೇಶ ಎಂದ ಅವರು ಇದುವ ರೆಗೂ ಸುಮಾರು 6500 ಇ- ಖಾತೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ , ಇನ್ನು ಮುಂದೆ ಇ ಸ್ವತ್ತು ಕರ್ನಾಟಕದ ಆಫ್ ಮೂಲಕ ಸಾರ್ವಜನಿಕರು ಮನೆಯಲ್ಲೇ ಇ-ಖಾತೆಗಾಗಿ ಸ್ವತ್ತು ಪಡೆಯಬಹುದು ಎಂದರು.

ಇದನ್ನೂ ಓದಿ: e-khata: ಬೆಂಗಳೂರಿನಲ್ಲಿ ಹಳೇ ಪದ್ಧತಿಯಲ್ಲೇ ಇ-ಖಾತಾ ನೀಡುತ್ತೇವೆ: ಡಿ.ಕೆ.ಶಿವಕುಮಾರ್‌

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಗರಸಭೆ ಪೌರಾಯುಕ್ತ ರಮೇಶ್ ಮಾತನಾಡಿ, ಆಸ್ತಿ ಕಣಜ ದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ- ಖಾತಾವನ್ನು ಪ್ರಕಟಿಸಲಾಗಿದ್ದು, ಸಾರ್ವ ಜನಿಕರು ಈ ಮಾಹಿತಿಗಳನ್ನು ನೇರವಾಗಿ ವೀಕ್ಷಿಸಬಹುದು.ಸದರಿ ಮಾಹಿತಿಗಳ ಆಧಾರದ ಬಗ್ಗೆ ತಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸ ಬಹುದು, ನಮೂದಿಸಿದ ಮಾಹಿತಿ ನಿಖರತೆಯನ್ನು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮವಾಗಿ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಯಲ್ಲೇ ಕುಳಿತು ಪಡೆದು ಕೊಳ್ಳಬಹುದು ಎಂದರು.

ಇಖಾತಾ ಪಡೆಯಲು ಬೇಕಾದ ದಾಖಲಾತಿಗಳು ಮಾಲೀಕರ ಭಾವಚಿತ್ರ ಮತ್ತು ಆಧಾರ,ಆಸ್ತಿ ತೆರಿಗೆ ಎಸ್ ಎ ಎಸ್ ಚಲನ ಸಂಖ್ಯೆ,ಸ್ವತ್ತಿನ ಕ್ರಯ/ ನೋಂದಾಯಿತ ಪತ್ರ ಸಂಖ್ಯೆ,ವಿದ್ಯುತ್ ಆರ್ ಆರ್ ಸಂಖ್ಯೆ ( ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ), ಸ್ವತ್ತಿನ ಛಾಯಾಚಿತ್ರ,ಇ ಸಿ ನಮೂನೆ 15/16,ಸ್ವತ್ತಿಗೆ ಸಂಭಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳ ಸಮೇತ ಆನ್ ಲೈನನಲ್ಲಿ ಅರ್ಜಿ ಸಲ್ಲಿಸಿ ನಿಗದಿತ ಕಲಾವಧಿಯೊಳಗಾಗಿ ಇ ಖಾತಾ ಪಡೆಯಬಹುದು.ಹೆಚ್ಚಿನ ಮಾಹಿತಿಗಾಗಿ ಗೌರಿಬಿದನೂರು ನಗರಸಭೆ ಕಂದಾಯ ಶಾಖೆಗೆ ಸಂಪರ್ಕಿಸಲು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಲಕ್ಷ್ಮೀ ನಾರಾಯಣ್, ನಗರಸಭೆ ಮಾಜಿ ಸದಸ್ಯ ರಾಜ್ ಕುಮಾರ್, ನಾಮನಿರ್ದೇಶನ ಸದಸ್ಯ ಜಯರಾಮ್ ,ಕೆ ಎಚ್ ಪಿ ಫೌಂಡೇಶನ್ ನಿರ್ದೇಶಕ ಶ್ರೀನಿವಾಸ ಗೌಡ ಹಾಗೂ ನಗರಸಭೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.