ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಂದ ಬೃಹತ್ ಜಾಥ

ಜೂ.26 ರಂದು ಅಂತರರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವಾಗಿದೆ. ಯುವಶಕ್ತಿ ಮುಂದಿನ ದೇಶ ಕಟ್ಟುವ ಶಕ್ತಿಯಾಗುತ್ತದೆ. ಹೀಗಾಗಿ ಯುವಜನತೆ ಮಾದಕವಸ್ತುಗಳ ಚಟಕ್ಕೆ ಜಾರಬಾರದು. ಇತ್ತೀಚೆಗೆ ನಗರ ಹಾಗೂ ತಾಲ್ಲೂಕಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಪ್ರಕರಣಗಳು ವರದಿಯಾಗಿವೆ.

ಮಾದಕವಸ್ತುಗಳ ಸೇವನೆ ಹಾಗೂ ಮಾರಾಟ ಶಿಕ್ಷಾರ್ಹ ಅಪರಾಧ:ಡಿ ವೈ ಎಸ್ ಪಿ

Profile Ashok Nayak Jun 26, 2025 10:11 PM

ಚಿಂತಾಮಣಿ : ಮಾದಕವಸ್ತುಗಳ ಸೇವನೆ ಹಾಗೂ ಮಾರಾಟ ಶಿಕ್ಷಾರ್ಹ ಅಪರಾಧವಾಗುತ್ತದೆ. ನಗರ ಹಾಗೂ ತಾಲ್ಲೂಕು ಮಾದಕ ವಸ್ತುಗಳ ಮುಕ್ತವಾಗಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿ ವೈ ಎಸ್ ಪಿ  ಮುರಳಿಧರ್ ಪಿ ಮನವಿ ಮಾಡಿದರು.

ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನಾಚರಣೆಯ ಅಂಗವಾಗಿ ನಗರ ಕೆಎಂಡಿ ಕಲ್ಯಾಣ ಮಂಟಪದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜೂ.26 ರಂದು ಅಂತರರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವಾಗಿದೆ. ಯುವಶಕ್ತಿ ಮುಂದಿನ ದೇಶ ಕಟ್ಟುವ ಶಕ್ತಿಯಾಗುತ್ತದೆ. ಹೀಗಾಗಿ ಯುವಜನತೆ ಮಾದಕವಸ್ತುಗಳ ಚಟಕ್ಕೆ ಜಾರಬಾರದು.ಇತ್ತೀಚೆಗೆ ನಗರ ಹಾಗೂ ತಾಲ್ಲೂಕಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಪ್ರಕರಣಗಳು ವರದಿಯಾಗಿವೆ. ಇದಕ್ಕೆ ಕಡಿವಾಣ ಹಾಕಬೇಕು. ಸಾರ್ವಜನಿಕರಿಗೆ ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಇದನ್ನೂ ಓದಿ: Chikkaballapur News: ಭೂ ಸ್ವಾಧೀನ ಕೈ ಬಿಡಬೇಕು ಎಂದು ಆಗ್ರಹಿಸಿ ದೇವನಹಳ್ಳಿ ಚಲೋ ಹೊರಟ ಕೆಪಿಆರ್‌ಎಸ್ ಸದಸ್ಯರು

ನಗರಠಾಣೆಯ ಇನ್ಸ್ ಸ್ಪೆಕ್ಟರ್ ವಿಜಿ ಕುಮಾರ್ ಮಾತನಾಡಿ, ಮಾದಕ ವಸ್ತುಗಳ ವಿರುದ್ಧ ಇಡೀ ಸಮಾಜ ಒಟ್ಟಾಗಿ ಸಮರ ಸಾರಬೇಕು. ಯುವಜನತೆ ಮಾದಕ ವಸ್ತುಗಳಿಗೆ ಬಲಿಯಾಗಿ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಅವರು ಹೊರ ಬಂದು ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು

ನಗರದ ಪ್ರವಾಸಿ ಮಂದಿರದಿಂದ ಸಾವಿರಾರು ವಿದ್ಯಾರ್ಥಿಗಳಿಂದ ಜನಜಾಗೃತಿ ಜಾಥಾ ಆರಂಭವಾಗಿ ಜೋಡಿ ರಸ್ತೆ, ಬೆಂಗಳೂರು ವೃತ್ತದಲ್ಲಿ ಸಂಚರಿಸಿತು. ಕೆ ಎಂ ಡಿ ಕಲ್ಯಾಣ ಮಂಟಪಕ್ಕೆ ತೆರಳಿ ಮಾದಕ ವಸ್ತುಗಳ ಸೇವನೆ ಮಾಡುವುದಿಲ್ಲ ಎಂಬ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್,ಸೇರಿದಂತೆ ನಗರ ಹಾಗೂ ಗ್ರಾಮಾಂತರ ಠಾಣೆಗಳ ಸಬ್ ಇನ್ಸ್ಪೆಕ್ಟರ್, ಪೊಲೀಸ್ ಸಿಬ್ಬಂದಿ, ಶಾಲಾ ಕಾಲೇಜುಗಳ ಶಿಕ್ಷಕರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು.