ಗೌರಿಬಿದನೂರು : ಮಾಡುವ ಕೆಲಸದಲ್ಲಿ ಶ್ರದ್ಧೆ, ನಿಷ್ಠೆ ಮತ್ತು ನೈತಿಕ ಮೌಲ್ಯಗಳಿರಬೇಕು. ಮರಳಿ ಯತ್ನವ ಮಾಡು ಎಂಬ ಮಾತಿನಂತೆ ನಿರಂತರ ಪ್ರಯತ್ನದಿಂದ ಮಾತ್ರ ಯಶಸ್ಸು ಸಿಗಲಿದೆ ಎಂದು ಚಿಕ್ಕಬಳ್ಳಾಪುರ ಮಹಿಳಾ ಸರ್ವೋದಯ ಮಂಡಲದ ವತಿಯಿಂದ ಸಂಘದ ಅಧ್ಯಕ್ಷೆ ಪದ್ಮ ಹೇಳಿದರು.
ತಾಲೂಕಿನ ಗುಂಡಾಪುರದ ತಮ್ಮ ಮನೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದನ್ನೂ ಓದಿ; Gauribidanur News: ರಕ್ತದಾನ ಜೀವದಾನಕ್ಕೆ ಸಮಾನ: ಬಿ.ಆರ್.ಶ್ರೀನಿವಾಸ್ ಮೂರ್ತಿ
ಕಾರ್ಯಕ್ರಮದಲ್ಲಿ 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95.4 ಅಂಕ ಪಡೆದಿರುವ ನಗರಸಭೆ ಸದಸ್ಯೆ ಸುಬ್ಬಮ್ಮ ಮೊಮ್ಮಗ ಹಾಗೂ ಶ್ರೀನಿವಾಸ ಹಾಗೂ ಭಾರತಿ ದಂಪತಿ ಪುತ್ರ ಪುನೀತ್ ಅವರನ್ನು ಸನ್ಮಾನಿಸಲಾಯಿತು. ಜೀವನದ ಸವಾಲನ್ನು ಎದುರಿಸುವ ಶಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಸಾಧನೆಯ ಮೆಟ್ಟಿಲನ್ನು ಏರುವ ತುಡಿತ ನಮ್ಮಲ್ಲಿರಬೇಕು. ನಮ್ಮ ಸಾಧನೆ ಮುಂದಿನ ಜನಾಂಗಕ್ಕೆ ಪ್ರೇರಣೆಯಾಗಬೇಕು ಎಂದರು.
ಸಂಘದ ಪದಾಧಿಕಾರಿಗಳದ ನರಸಮ್ಮ, ಆಶಾ ಜಗದೀಶ್, ಆಗ್ನೇಸ್ ಕಸಾಪ ನಿಕಟ ಪೂರ್ವ ಅಧ್ಯಕ್ಷ ನಂಜುAಡಪ್ಪ, ನೇತಾಜಿ ಸಂಘದ ಪದಾಧಿಕಾರಿಗಳಾದ ಪ್ರಕಾಶ್, ರವಿಕುಮಾರ್, ಅಶೋಕ್, ಗೌರೀಶ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಬಾಲಪ್ಪ, ಗಿರಿಧರ್, ರಾಮಕೃಷ್ಣ, ಚಂದ್ರಶೇಖರ್, ಗುಂಡಾ ಪುರದ ಕೃಷ್ಣೇ ಗೌಡ ಹಾಗೂ ಗ್ರಾಮಸ್ಥರು ಹಾಜರಿದ್ದರು.