Suspend: ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಅಮಾನತ್ತು

ಅಕ್ರಮವಾಗಿ ಹಣ ಪಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಇವರ ವಿರುಧ್ದ ಕರ್ನಾಟಕ ನಾಗರೀಕ ಸೇವಾ ವರ್ಗಿಕರಣ ಮತ್ತು ಮೇಲ್ಮನವಿ ನಿಯಮಾವಳಿ 1957 ರ ನಿಯಮ 10(1) (ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದ ನಿಯಮಗಳು 2011 ರ ಷೆಡ್ಯೂಲ್ 3 ರಂತೆ ಅಮಾನತ್ತು ಮಾಡಿ ಸರಕಾರ ಆದೇಶ ಹೊರಡಿಸಿದೆ

Suspend
Profile Ashok Nayak Jan 18, 2025 10:09 PM

Source : Chikkaballapur Reporter

ಚೇಳೂರು: ಚೇಳೂರು ತಾಲ್ಲೂಕಿನ ಗಡಿಗವಾರಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯ ಪ್ರಾಂಶುಪಾಲೆ ಎ.ಆರ್. ಖುಬ್ರಾ ಮುಬೀನ್ ಅವರನ್ನು ರಾಜ್ಯ ಸರಕಾರದ ಕಾರ್ಯ ನಿರ್ವಾಹಕ ನಿರ್ದೆಶಕರಾದ ಪಿ.ಎಸ್.ಕಾಂತರಾಜು ಅಮಾನತ್ತು ಮಾಡಿ ಆದೇಶ ಹೊರಡಿಸಿ ದ್ದಾರೆ.

ಸದರಿ ಪ್ರಾಂಶುಪಾಲರು ನಿಲಯ ಪಾಲಕರ ಸಹಿಯನ್ನು ತಾವೇ ಮಾಡಿ 1.56.406 ರೂ ಗಳನ್ನು ಚೆಕ್ ಮೂಲಕ ಅಕ್ರಮವಾಗಿ ಹಣ ಸೆಳೆದಿರುತ್ತಾರೆ. ಈ ವಸತಿ ಶಾಲೆಗೆ ವರ್ಗಾವಣೆ ಗೊಂಡ ನಂತರ ವಸತಿ ಶಾಲೆಯ ದಾಖಲೆಗಳನ್ನು ವರ್ಗಾವಣೆಯಾದ ನಂತರವೂ ಸಂಬಂ ಧಿಸಿದ ಪ್ರಾಂಶುಪಾಲರಿಗೆ ಹಸ್ತಾಂತರಿಸದೇ ಇರುವುದು ಹಾಗೂ ನಿಲಯಪಾಲಕರ ಸಹಿ ಯನ್ನು ತಾವೇ ಮಾಡಿ ಅಕ್ರಮವಾಗಿ ಹಣ ಪಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿ ರುವುದರಿಂದ ಇವರ ವಿರುಧ್ದ ಕರ್ನಾಟಕ ನಾಗರೀಕ ಸೇವಾ ವರ್ಗಿಕರಣ ಮತ್ತು ಮೇಲ್ಮನವಿ ನಿಯಮಾವಳಿ 1957 ರ ನಿಯಮ 10(1) (ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದ ನಿಯಮಗಳು 2011 ರ ಷೆಡ್ಯೂಲ್ 3 ರಂತೆ ಅಮಾನತ್ತು ಮಾಡಿ ಸರಕಾರ ಆದೇಶ ಹೊರಡಿಸಿದೆ.

*

ಎಂಬಿಎ ವಿದ್ಯಾರ್ಥಿ ನೇಣಿಗೆ ಶರಣು

ವಿಟಿಯು ಚಿಕ್ಕಬಳ್ಳಾಪುರ ಕ್ಯಾಂಪಸ್ ವಿದ್ಯಾರ್ಥಿನಿಲಯದಲ್ಲಿ ಎರಡನೇ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯವರು ನೇಣಿಗೆ ಶರಣಾದ ಘಟನೆ ಶನಿವಾರ ನಡೆದಿದೆ.

ತಾಲೂಕಿನ ಮುದ್ದೇನಹಳ್ಳಿ ಹೊವಲಯದಲ್ಲಿರುವ ವಿಶ್ವೇಶ್ವರಯ್ಯ ಟೆಕ್ನಾಲಜಿ ಆಫ್ ಯೂನಿವರ್ಸಿಟಿಯಲ್ಲಿ ಶನಿವಾರ ಬೆಳಗ್ಗೆ ಈ ದುರ್ಘಟನೆ ನಡೆದಿದ್ದು ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬುನಾಯಕ್ ಎಂಬ ೨ನೇ ವರ್ಷದ ಎಂಬಿಎ ವಿದ್ಯಾರ್ಥಿಯೇ ಮೃತ ದುರ್ದೈವಿ ಆಗಿದ್ದಾನೆ.

ಬಾಬು ನಾಯಕ್ ಕಳೆದ ಒಂದೂವರೆ ವರ್ಷದಿಂದ ವಿಟಿಯುನಲ್ಲಿ ವ್ಯಾಸಂಗ ಮಾಡು ತ್ತಿದ್ದು, ಶನಿವಾರ ಬೆಳಗ್ಗೆ ತಿಂಡಿಯನ್ನು ಮುಗಿಸಿ ತನ್ನ ಕೊಠಡಿಗೆ ತೆರಳಿ ನೇಣಿಗೆ ಶರಣಾಗಿ ದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಪ್ರಾಂಶುಪಾಲ ಜಿ.ಎಸ್.ವೆಂಕಟೇಶ್ ಮಾತನಾಡಿ ಶ್ರೀನಿವಾಸಪುರ ತಾಲೂಕಿನ ಕೊಂಡಮರಿ ಗ್ರಾಮದ ಬಾಬು ನಾಯಕ್ ವಾಸವಿದ್ದ ಕೊಠಡಿಯಲ್ಲಿ ೩ ಜನ ವಿದ್ಯಾರ್ಥಿ ಗಳಿದ್ದು, ಇಬ್ಬರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ನಮಗೆ ಮಾಹಿತಿ ನೀಡದೆ ಸ್ವಗ್ರಾಮಕ್ಕೆ ತೆರಳಿದ್ದು, ಶನಿವಾರ ಬೆಳಗ್ಗೆ ೧೦.೧೫ಕ್ಕೆ ಬಾಬು ನಾಯಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಪಕ್ಕದ ಕೊಠಡಿಯಲ್ಲಿನ ವಿದ್ಯಾರ್ಥಿಗಳು ನೋಡಿ ಮಾಹಿತಿ ನೀಡಿದ್ದು, ಬೆಳಗ್ಗೆ ೯ ರಿಂದ ೯.೩೦ ಸಮಯದಲ್ಲಿ ತಿಂಡಿಯನ್ನು ಮುಗಿಸಿ ರೂಮಿಗೆ ಹೋದ ಯುವಕ ಈ ರೀತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ ಎಂದು ನುಡಿದರು.

ಘಟನಾ ಸ್ಥಳಕ್ಕೆ ನಂದಿ ಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Crime News: 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ; ಬೆಳಗಾವಿಯಲ್ಲೊಂದು ಬೆಚ್ಚಿ ಬೀಳಿಸುವ ಘಟನೆ

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?