ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮ ಪಡಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ

ಯಾವುದೇ ವಿದ್ಯಾರ್ಥಿ ಮೂಲತಃ ದಡ್ಡನಾಗಿರುವುದಿಲ್ಲ ಅಥವಾ ಕಲಿಯಲು ಸಾಧ್ಯವೆ ಇಲ್ಲ ಎನ್ನುವ ವಿದ್ಯಾರ್ಥಿಗಳು ಇರುವುದಿಲ್ಲ. ಅವರ ಸುತ್ತಮುತ್ತಲಿನ ಪರಿಸರ, ಕೌಟುಂಬಿಕ ಪರಿಸ್ಥಿತಿಗಳಿಂದ ವಿದ್ಯಾರ್ಥಿ ಗಳ ಗಮನ ಬೇರೆ ಕಡೆ ಇರುತ್ತದೆ. ಆದ್ದರಿಂದ ಮೊದಲಿಗೆ ವಿದ್ಯಾರ್ಥಿಯು ಶಾಲೆಗೆ ಕಡ್ಡಾಯವಾಗಿ ಹಾಜರಾಗುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಅವರ ಗಮನವನ್ನು ಪೂರ್ಣವಾಗಿ ಅಭ್ಯಾಸದ ಕಡೆಗೆ ತೊಡಗಿಸಲು ಗಮನ ಹರಿಸಬೇಕು.

ಜಿಲ್ಲೆಯಲ್ಲಿನ ೧೧೧ ಪ್ರೌಢಶಾಲೆಗಳಲ್ಲಿ ಈ ಬಾರಿ 14449 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಎದುರಿಸುತ್ತಿದ್ದಾರೆ. ಫಲಿತಾಂಶ ಸುಧಾರಣೆ ಕಾರಣವಾಗಿ ೧೧೧ ಸರ್ಕಾರಿ ಶಾಲೆಗಳ ಪೈಕಿ ೫೬ ಶಾಲೆ ಅಧಿಕಾರಿಗಳಿಗೆ ದತ್ತು ನೀಡಲಾಗಿದೆ ಎಂದು ಪಿ.ಎನ್.ರವೀಂದ್ರ ತಿಳಿಸಿದರು.

14449 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಎದುರಿಸುತ್ತಿದ್ದಾರೆ. 111 ಸರ್ಕಾರಿ ಶಾಲೆಗಳ ಪೈಕಿ ೫೬ ಶಾಲೆ ಅಧಿಕಾರಿಗಳಿಗೆ ದತ್ತು

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ ೧೧೧ ಪ್ರೌಢಶಾಲೆಗಳಲ್ಲಿ ಈ ಬಾರಿ ೧೪,೪೪೯ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಎದುರಿಸುತ್ತಿದ್ದಾರೆ. ಫಲಿತಾಂಶ ಸುಧಾರಣೆ ಕಾರಣವಾಗಿ ೧೧೧ ಸರ್ಕಾರಿ ಶಾಲೆಗಳ ಪೈಕಿ ೫೬ ಶಾಲೆ ಅಧಿಕಾರಿಗಳಿಗೆ ದತ್ತು ನೀಡಲಾಗಿದೆ ಎಂದು ಪಿ.ಎನ್.ರವೀಂದ್ರ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಎಸ್.ಎಸ್.ಎಲ್.ಸಿ ಫಲಿತಾಂಶ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ೧೦ನೇ ತರಗತಿ ವಿದ್ಯಾರ್ಥಿಗಳ ಪೈಕಿ ಕಲಿಕೆಯಲ್ಲಿ ಹಿಂದುಳಿದವರ ಪಟ್ಟಿ ಮಾಡಿ ಅವರಿಗೆ ವಿಶೇಷ ಕೌಶಲ್ಯಗಳ ಮೂಲಕ ಹಾಗೂ ವಿಶೇಷ ತರಗತಿಗಳನ್ನು ತೆಗೆದುಕೊಂಡು ಫಲಿತಾಂಶವನ್ನು ವೃದ್ಧಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕಾರಿಗಳಿಗೆ ಹಾಗೂ ಶಿಕ್ಷಕರಿಗೆ ಸಲಹೆ ನೀಡಿದರು.

ಇದನ್ನೂ ಓದಿ: Chikkaballapur News: ಪುಟ್ಟತಿಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಂಚನಬಲೆ ಸದಾಶಿವ ನೆರವು

ಮಾರ್ಚ್ ೧೮ ರಿಂದ ರಾಜ್ಯ ಪಠ್ಯಕ್ರಮದ ಎಸ್.ಎಸ್.ಎಲ್.ಸಿಯ ಅಂತಿಮ ಪರೀಕ್ಷೆಯು ನಡೆಯ ಲಿದೆ. ಜಿಲ್ಲೆಯ ೧೪,೪೪೯ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಎದುರಿಸುತ್ತಿದ್ದಾರೆ. ಈವರೆಗೆ ಎಲ್ಲ ಶಾಲೆಗಳಲ್ಲಿ ೧೦ನೇ ತರಗತಿಯ ಪಠ್ಯಗಳ ಬೋಧನೆಯನ್ನು ಪೂರ್ಣಗೊಳಿಸಿ ಪುನರಾವರ್ತನೆಯ ತರಗತಿಗಳು ನಡೆಯುತ್ತಿವೆ. ಈ ವರ್ಷದಲ್ಲಿ ೧೦ನೇ ತರಗತಿ ಸಂಬಂಧಿಸಿದಂತೆ ನಡೆದ ಪರೀಕ್ಷೆಗಳ ಆಧಾರದ ಮೇಲೆ ಜಿಲ್ಲೆಯ ಸರ್ಕಾರಿ ಶಾಲೆಗಳ ಫಲಿತಾಂಶ ಶೇ. ೫೬, ಅನುದಾನಿತ ಶಾಲೆಗಳಲ್ಲಿ ಶೇ. ೫೯, ವಸತಿ ಶಾಲೆಗಳಲ್ಲಿ ಶೇ. ೮೪ ರಷ್ಟು ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಶೇ.86ರಷ್ಟು ಫಲಿತಾಂಶವಿದೆ. ಇದೇ ರೀತಿಯ ಫಲಿತಾಂಶವು ಅಂತಿಮ ಪರೀಕ್ಷೆಯಲ್ಲಿ ಮರುಕಳಿಸಿದರೆ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಲಿದೆ ಎಂದು ಎಚ್ಚರಿಸಿದರು.

ಆದ್ದರಿಂದ ಜಿಲ್ಲೆಯ 111 ಸರ್ಕಾರಿ ಶಾಲೆಗಳ ಪೈಕಿ ೫೬ ಶಾಲೆಗಳನ್ನು ಜಿಲ್ಲಾಮಟ್ಟದ ಅಧಿಕಾರಿ ಗಳಿಗೆ ದತ್ತು ನೀಡಿ ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿಗೆ ಯುಕ್ತ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳ ಲಾಗಿದೆ. ಅಲ್ಲದೆ ತೊಂಡೇಬಾವಿಯ ಅದಾನಿ ಗ್ರೂಪ್ ನ ಸೀಮೆಂಟ್ ಕಂಪನಿಯ ಸಹ ಯೋಗದಲ್ಲಿ ಮೌಲ್ಯಮಾಪನ ಆಧಾರಿತ ಪಠ್ಯ (ಎಲ್.ಬಿ.ಎ)ದ ಕಿರು ಪುಸ್ತಕಗಳನ್ನು ಮುದ್ರಣ ಮಾಡಿಸಿ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಈ ಪುಸ್ತಕಗಳಲ್ಲಿನ ಮಾಹಿತಿಯು ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಹಾಗೂ ಪಠ್ಯವು ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ಪುಸ್ತಕಗಳನ್ನು ತಜ್ಞರ ಸಲಹೆಯಂತೆ ರಚಿಸಲಾಗಿರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾಗಿವೆ ಎಂದು ತಿಳಿಸಿದರು.

ಯಾವುದೇ ವಿದ್ಯಾರ್ಥಿ ಮೂಲತಃ ದಡ್ಡನಾಗಿರುವುದಿಲ್ಲ ಅಥವಾ ಕಲಿಯಲು ಸಾಧ್ಯವೆ ಇಲ್ಲ ಎನ್ನುವ ವಿದ್ಯಾರ್ಥಿಗಳು ಇರುವುದಿಲ್ಲ. ಅವರ ಸುತ್ತಮುತ್ತಲಿನ ಪರಿಸರ, ಕೌಟುಂಬಿಕ ಪರಿಸ್ಥಿತಿ ಗಳಿಂದ ವಿದ್ಯಾರ್ಥಿಗಳ ಗಮನ ಬೇರೆ ಕಡೆ ಇರುತ್ತದೆ. ಆದ್ದರಿಂದ ಮೊದಲಿಗೆ ವಿದ್ಯಾರ್ಥಿಯು ಶಾಲೆಗೆ ಕಡ್ಡಾಯವಾಗಿ ಹಾಜರಾಗುವ ಬಗ್ಗೆ ಖಾತ್ರಿ ಮಾಡಿಕೊಳ್ಳಬೇಕು. ಅವರ ಗಮನವನ್ನು ಪೂರ್ಣವಾಗಿ ಅಭ್ಯಾಸದ ಕಡೆಗೆ ತೊಡಗಿಸಲು ಗಮನ ಹರಿಸಬೇಕು. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಸುಲಭವಾಗಿ ಪರಿಹರಿಸಿ ಮಕ್ಕಳು ಉತ್ತೀರ್ಣರಾಗುವ ರೀತಿಯಲ್ಲಿ ಬೋಧನೆ ಮಾಡಬೇಕು. ಒಟ್ಟಾರೆ ಜಿಲ್ಲೆಯ ಫಲಿತಾಂಶದ ಗುಣಮಟ್ಟವನ್ನು ಈ ಬಾರಿ ವೃದ್ಧಿಸಲು ಎಲ್ಲ ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಕೈ ಜೋಡಿಸಿ ಕೆಲಸ ಮಾಡುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಾತನಾಡಿ, ಶಾಲೆಗಳನ್ನು ದತ್ತು ಪಡೆದಿರುವ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಶಾಲೆಗಳಿಗೆ ಕನಿಷ್ಠ ವಾರಕ್ಕೊಮ್ಮೆ ಭೇಟಿ ಕೊಟ್ಟು ಅಲ್ಲಿನ ಕಲಿಕೆಯ ವಾತಾವರಣವನ್ನು ಹಾಗೂ ಶಿಕ್ಷಕರ ಬೋಧನಾ ಕ್ರಮವನ್ನು ನಿರಂತರ ವಾಗಿ ಪರಿಶೀಲಿಸಬೇಕು. ಅನುತೀರ್ಣವಾಗುವ ಮಕ್ಕಳ ಕಡೆ ಹೆಚ್ಚು ಗಮನ ನೀಡಿ ಬರೆದು ಬರೆದು ಅಭ್ಯಾಸ ಮಾಡಿಸುವಂತಹ ಬೋಧನಾ ಕ್ರಮಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಶಿಕ್ಷಕರು ಒತ್ತು ನೀಡಿ ಜಿಲ್ಲೆಯ ಎಸ್.ಎಸ್.ಎಲ್.ಸಿ. ಫಲಿತಾಂಶವನ್ನು ಉತ್ತಮಗೊಳಿಸಲು ಕಂಕಣ ಬದ್ದವಾಗಿ ಕೆಲಸ ಮಾಡುವಂತೆ ತಿಳಿಸಿದರು.

ಈ ವೇಳೆ  ತೊಂಡೇಬಾವಿಯ ಅದಾನಿ ಗ್ರೂಪ್ ನ ಸೀಮೆಂಟ್ ಕಂಪನಿಯ ಸಹಯೋಗದಲ್ಲಿ ಮುದ್ರಿಸಿರುವ ೧೦ನೇ ತರಗತಿಯ ರಾಜ್ಯ ಪಠ್ಯಕ್ರಮದ ಮೌಲ್ಯಮಾಪನ ಆಧಾರಿತ ಪಠ್ಯ (ಎಲ್.ಬಿ.ಎ) ದ ಕಿರು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ತೊಂಡೇಬಾವಿಯ ಅದಾನಿ ಗ್ರೂಪ್ ನ ಸೀಮೆಂಟ್ ಕಂಪನಿಯ ಪ್ಲಾಂಟ್ ಮೇನೆಜರ್ ಪ್ರಶಾಂತ್ ದೇಶ್ ಮುಖ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿ.ರಮೇಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.