ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ವೈಭವದಿಂದ ನಡೆದ ಶ್ರೀರಾಮ ಶೋಭಾಯಾತ್ರೆ

ಹಿಂದೂ ಧರ್ಮದ ಆಚಾರ ವಿಚಾರ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮ ಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ನಾವೆಲ್ಲರೂ ಸೇರಿ ಮಾಡಬೇಕಿದೆ ಎಂದರು. ವಿಶ್ವ ಹಿಂದೂ ಪರಿಷತ್, ಭಜರಂಗ ದಳವು ಏರ್ಪಡಿಸಿರುವ ಶ್ರೀರಾಮ ಶೋಭಾ ಯಾತ್ರೆಗೆ ಎಲ್ಲ ರೈತಪರ, ದಲಿತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಪಕ್ಷಾತೀತ ವಾಗಿ ಬೆಂಬಲ ನೀಡಿ ಭಾಗವಹಿಸಿರುವುದು ಸಂತಸದ ವಿಚಾರ

ವೈಭವದಿಂದ ನಡೆದ ಶ್ರೀರಾಮ ಶೋಭಾಯಾತ್ರೆ

Profile Ashok Nayak May 26, 2025 12:56 PM

ಶಿಡ್ಲಘಟ್ಟ : ರೇಷ್ಮೆನಗರ ಶಿಡ್ಲಘಟ್ಟದಲ್ಲಿ ಶ್ರೀರಾಮ ಶೋಭಾಯಾತ್ರೆಯು ಸಡಗರ ಸಂಭ್ರಮ ಹಾಗೂ ವಿಜೃಂಭಣೆಯಿಂದ ನೆರವೇರಿತು. ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದ ಹನುಮಂತಪುರ ಗೇಟ್‌ನ ಶ್ರೀಆಂಜನೇಯಸ್ವಾಮಿ ಗುಡಿಯಿಂದ ಸಾರಿಗೆ ಬಸ್ ನಿಲ್ದಾಣದ ಸಲ್ಲಾಪುರಮ್ಮ ದೇವಾಲಯ ದವರೆಗೂ ಸಾಗಿದ ಶ್ರೀರಾಮ ಶೋಭಾ ಯಾತ್ರೆಯ ವೈಭವವನ್ನು ನಾಗರೀಕರು ಕಣ್ತುಂಬಿಕೊಂಡರು.

ಆಂಜನೇಯಸ್ವಾಮಿ ಗುಡಿಯಲ್ಲಿ ಪೂಜೆ ಸಲ್ಲಿಸಿದ ವಿಧಾನ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಅವರು ಶ್ರೀರಾಮನ ಪ್ರತಿಮೆಯಿದ್ದ ಟ್ರಾಕ್ಟರ್‌ನ್ನು ಚಲಾಯಿಸುವ ಮೂಲಕ ಶ್ರೀರಾಮ ಶೋಭಾ ಯಾತ್ರೆಗೆ ಚಾಲನೆ ನೀಡಿದರು.

ಇದನ್ನೂ ಓದಿ: Chikkaballapur News: ರೈತರ ಸಮಸ್ಯೆ ಕೇಳುವವರೇ ಇಲ್ಲ: ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ

ಈ ವೇಳೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು ಎನ್ನುವ ಮಾತಿನೊಂದಿಗೆ ಮಾತು ಆರಂಭಿಸಿದ ಅವರು, ಹಿಂದೂ ಧರ್ಮದ ಅತಿದೊಡ್ಡದ ಅಸ್ಮಿತೆ ಶ್ರೀರಾಮ ಪ್ರಭು. ಶೋಭಾ ಯಾತ್ರೆಯು ನಮ್ಮೆಲ್ಲರ ಅಸ್ಮಿತೆಯಾಗಿದೆ ಎಂದರು. ಹಿಂದೂ ಧರ್ಮದ ಆಚಾರ ವಿಚಾರ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಕಾಯಕವನ್ನು ನಾವೆಲ್ಲರೂ ಮಾಡುವ ಜತೆಗೆ ನಮ್ಮ ಮಕ್ಕಳು ಕೂಡ ಧರ್ಮವನ್ನು ಪಾಲಿಸಿಕೊಂಡು ಹೋಗುವ ಕೆಲಸ ನಾವೆಲ್ಲರೂ ಸೇರಿ ಮಾಡಬೇಕಿದೆ ಎಂದರು. ವಿಶ್ವ ಹಿಂದೂ ಪರಿಷತ್, ಭಜರಂಗ ದಳವು ಏರ್ಪಡಿಸಿರುವ ಶ್ರೀರಾಮ ಶೋಭಾ ಯಾತ್ರೆಗೆ ಎಲ್ಲ ರೈತಪರ, ದಲಿತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳು ಪಕ್ಷಾತೀತ ವಾಗಿ ಬೆಂಬಲ ನೀಡಿ ಭಾಗವಹಿಸಿರುವುದು ಸಂತಸದ ವಿಚಾರ. ಈ ಐಕ್ಯತೆ ಸದಾ ಇರಬೇಕೆಂದರು.

ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಶ್ರೀರಾಮನನ್ನು ನಾವು ಪಿತೃವಾಕ್ಯ ಪರಿಪಾಲಕನಾಗಿ, ಏಕ ಪತ್ನಿವ್ರತಸ್ಥನಾಗಿ, ಧರ್ಮ ಪರಿಪಾಲಕನಾಗಿ ನೋಡುತ್ತೇವೆ. ಶ್ರೀರಾಮನು ಜಗತ್ತಿನ ಕೋಟ್ಯಂತರ ಮಂದಿಗೆ ಆದರ್ಶ ಪುರುಷನಾಗಿದ್ದಾನೆ ಎಂದರು.

ಇಂತಹ ಆದರ್ಶ ಪುರುಷನ ಶೋಭಾ ಯಾತ್ರೆಗೆ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಬೆಂಬಲ ನೀಡಿ ಭಾಗವಹಿಸಿ ಯಶಸ್ವಿಗೊಳಿಸಿದ್ದು ನಮ್ಮ ಹಿಂದೂಗಳಲ್ಲಿನ ಒಗ್ಗಟ್ಟನ್ನು ತೋರುತ್ತದೆ, ಇದೆ ಒಗ್ಗಟ್ಟು ನಾವು ಸದಾಕಾಲ ಕಾಪಾಡಿಕೊಳ್ಳಬೇಕಿದೆ ಎಂದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ಅಖಂಡ ಭಾರತದಲ್ಲಿ ರುವ ನಾವೆಲ್ಲರೂ ಒಂದೆ ಎನ್ನುವ ಭಾವನೆ ಎಲ್ಲರಲ್ಲೂ ಮೂಡಬೇಕಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಹೇಳಿದಂತೆ ನಾವೆಲ್ಲರೂ ಸಂವಿಧಾನವನ್ನು ಪಾಲಿಸಬೇಕು, ಎಲ್ಲರೂ ಒಂದೆಂಬ ಭಾವನೆಯನ್ನು ಇನ್ನೂ ಹೆಚ್ಚು ಬೆಳೆಸಿಕೊಳ್ಳಬೇಕೆಂದರು.

ಶೋಭಾ ಯಾತ್ರೆಯು ಹನುಮಂತಪುರ ಗೇಟ್‌ನ ಶ್ರೀಆಂಜನೇಯಸ್ವಾಮಿ ದೇವಾಲಯದಿಂದ ದಿಬ್ಬೂರಹಳ್ಳಿ ವೃತ್ತದ ರೈಲ್ವೆ ಅಂಡರ್‌ಪಾಸ್, ಮಾರಮ್ಮ ದೇವಿ ವೃತ್ತ, ಕೋಟೆ ವೃತ್ತದ ಮೂಲಕ ಸಾಗಿ ಸಾರಿಗೆ ಬಸ್ ನಿಲ್ದಾಣದ ಸಲ್ಲಾಪುರಮ್ಮ ದೇವಾಲಯದವರೆಗೂ ಸಾಗಿತು.

ಶ್ರೀರಾಮನ ಭಕ್ತ ಆಂಜನೇಯಸ್ವಾಮಿ ವೇಷಧಾರಿ, ಡೊಳ್ಳು ಕುಣಿತ, ತಮಟೆ, ಚಂಡೆ ಇನ್ನಿತರೆ ಜನಪದ ಕಲಾ ತಂಡಗಳು ಶೋಭಾ ಯಾತ್ರೆಗೆ ಇನ್ನಷ್ಟು ಕಳೆ ನೀಡಿದ್ದವು.

ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರು, ಸಂಸ್ಕಾರ ಭಾರತಿ ಸದಸ್ಯರು ಶ್ರೀರಾಮನ ಹಾಡುಗಳನ್ನು ಹಾಡುತ್ತಾ ಶೋಭಾ ಯಾತ್ರೆಗೆ ಸಾಥ್ ನೀಡಿದರು.

ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಚಲುವರಾಜು, ಭಜರಂಗದಳದ ವೆಂಕೋಬರಾವ್, ಕನ್ನಪ್ಪನಹಳ್ಳಿ ಮಲ್ಲೇಶ್ ಸೇರಿದಂತೆ ಮುಖಂಡರು, ನಾನಾ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು, ಶ್ರೀರಾಮನ ಭಕ್ತರು ಭಾಗವಹಿಸಿದ್ದರು.