Chikkaballapur News: ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕೆ ಆಸ್ಪದವಿರಕೂಡದು : ಎಸ್ಪಿ ಕುಶಾಲ್ ಚೌಕ್ಸೆ ಅಭಿಮತ
ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಶ್ರಮವಹಿಸಬೇಕು. ಸರಿತಪ್ಪು ಯಾವುದು ಎನ್ನುವುದನ್ನು ಅರ್ಥೈಸಿಕೊಂಡು ಒಳ್ಳೆಯ ದಾರಿಯಲ್ಲಿ ಸಾಗಿ ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು, ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು.ಸಮಾಜಬಾಹಿರ ಕೃತ್ಯಗಳಲ್ಲಿ ತೊಡಗಿಸಿ ಕೊಳ್ಳದೆ ಹೆತ್ತವರಿಗೆ ನೋವು ಕೊಡದೆ ಉತ್ತಮ ಭವಿಷ್ಯ ನಿಮ್ಮದಾಗಿಸಿಕೊಳ್ಳಿ

ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕೆ ಆಸ್ಪದವಿರಕೂಡದು ಆಲಸ್ಯ ಪರಮಶತೃ ಎಂದು ಎಸ್ಪಿ ಕುಶಾಲ್ ಚೌಕ್ಸೆ ಅಭಿಪ್ರಾಯಪಟ್ಟರು.

ಚಿಕ್ಕಬಳ್ಳಾಪುರ : ಸುಖಕರ ಜೀವನ ಪರಿಶ್ರಮದಿಂದ ಮಾತ್ರ ಸಿದ್ಧಿಸಲಿದೆ.ವಿದ್ಯಾರ್ಥಿ ಜೀವನದಲ್ಲಿ ಸುಖಕ್ಕೆ ಹಾತೊರೆಯದೆ ಗುರಿಯತ್ತ ಮನಸ್ಸಿದ್ದಲ್ಲಿ ಸಾಧಕರ ಸಾಲಿನಲ್ಲಿ ನಾವಿರುತ್ತೇವೆ. ಸಿನಿಮಾ, ಫೇಸ್ಬುಕ್, ಇನ್ ಸ್ಟಾ ರೀಲ್ಸ್ ಜಗತ್ತಿನ ಮೋಹಕ್ಕೆ ಒಳಗಾಗದೆ ನೀವು ನೀವಾಗಿರಿ. ಮುಖ್ಯವಾಗಿ ದುಷ್ಚಟಗಳಿಗೆ ದಾಸರಾಗದೆ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಿ ಎಂದು ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ದಿ ಗೋಲ್ಡನ್ ಗ್ಲೀಮ್ಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿರು. ಜೀವನದಲ್ಲಿ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸಲು ನಿರಂತರವಾಗಿ ಶ್ರಮವಹಿಸಬೇಕು. ಸರಿತಪ್ಪು ಯಾವುದು ಎನ್ನುವುದನ್ನು ಅರ್ಥೈಸಿಕೊಂಡು ಒಳ್ಳೆಯ ದಾರಿಯಲ್ಲಿ ಸಾಗಿ ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು, ಸಾಮಾಜಿಕ ಕಳಕಳಿ ಬೆಳೆಸಿಕೊಳ್ಳಬೇಕು.ಸಮಾಜಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದೆ ಹೆತ್ತವರಿಗೆ ನೋವು ಕೊಡದೆ ಉತ್ತಮ ಭವಿಷ್ಯ ನಿಮ್ಮದಾಗಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಇದನ್ನೂ ಓದಿ: Chikkanayakanahalli(Tumkur) News: ಹಳ್ಳಿಗಳು ಆಹಾರ ಉತ್ಪತ್ತಿಯ ನೆಲೆ ಬೀಡು, ಇದರ ಸಂರಕ್ಷಣೆ ಎಲ್ಲರ ಹೊಣೆ
ಕಾಲೇಜಿನ ಪ್ರಾಂಶುಪಾಲ ಸಿ.ಎಂ.ಮುನಿಕೃಷ್ಣ ಮಾತನಾಡಿ,ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಗೋಲ್ಡನ್ ಗ್ಲೀಮ್ಸ್ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಟೊಂಕಕಟ್ಟಿ ನಿಂತಿರುವ ಸಂಸ್ಥೆ ಯಾಗಿದೆ. ನಾವು ವಿದ್ಯಾಭಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ತುಂಬಲು ಒತ್ತು ನೀಡುತ್ತಿದ್ದೇವೆ. ನುರಿತ ಬೋಧಕವರ್ಗ, ಪರಿಣಾಮಕರಿ ಬೋಧನೆ ಮೂಲಕ ವಾಣಿಜ್ಯ ವಿಭಾಗದಲ್ಲಿ ಉತ್ತಮ ಫಲಿತಾಂಶ ತರಲು ಶ್ರಮಿಸಿದ್ದೇವೆ. ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡಿದ ಮಹನೀಯರನ್ನು ಆದರ್ಶವಾಗಿರಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಲು ಶ್ರಮಿಸಬೇಕೆಂದು ಹೇಳಿದರು.
ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ.ವಿ.ಕೃಷ್ಣ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ ಲೋಕನಾಥ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಉಪ ನಿರ್ದೇಶಕ ಟಿ.ಮುಕುಂದ, ಪದ್ಮಾಕರ್ ಪಾಟೀಲ್, ಮಂಜುನಾಥ್, ಮಂಜುಳಾ, ರಾಧ, ಅಶ್ವಿನಿ, ಶಿವಾನಂದ, ಶಿವಪ್ಪ, ಮೋಹನ್, ಸತೀಶ್ ಇದ್ದರು.