ಚಿಕ್ಕಬಳ್ಳಾಪುರ : ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ನ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ೫೦ಕ್ಕೂ ಹೆಚ್ಚು ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ರಕ್ತದಾನ ಶಿಬಿರ ನಡೆಸುವ ಮೂಲಕ ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಸದಸ್ಯರು ವಾರ್ಷಿಕೋತ್ಸವ ವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ.ಟ್ರಸ್ಟ್ನ ಮೊದಲನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ೧೦೦ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಕೂಡ ಏರ್ಪಡಿಸಲಾಗಿತ್ತು, ಸಮಾಜಕ್ಕೆ ಏನಾದರೂ ಮಾಡಬೇಕು ಎಂಬ ಸಂಕಲ್ಪದೊಂದಿಗೆ ಉದ್ಭವವಾದ ಈ ಟ್ರಸ್ಟ್ಗೆ ಇಂದು ವರ್ಷದ ಸಂಭ್ರಮ.
ಇದನ್ನೂ ಓದಿ: Chikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ
ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಡಿ.ವೈ.ಎಸ್ಪಿ ಶಿವಕುಮಾರ್ ಅಮ್ಮ ಟ್ರಸ್ಟ್ ಯುವಕರ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿದರು. ಈ ವೇಳೆ ಟ್ರಸ್ಟ್ನ ಶೈಕ್ಷಣಿಕ ಸೇವೆ ಪಡೆಯು ತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸಿದರು. ವಿದ್ಯಾಭ್ಯಾಸದ ದಿನಗಳಲ್ಲಿ ಕೇವಲ ಓದಿನ ಕಡೆ ಗಮನ ಹರಿಸಿದರೆ ಭವಿಷ್ಯ ಉಜ್ವಲವಾಗಲಿದೆ. ಮರೆತು ಉದಾಸೀನತೆ ತೋರುವುದು, ಪ್ರೀತಿ ಪ್ರೇಮ ಎಂಬ ಜಂಗುಳಿಯಲ್ಲಿ ಬೀಳುವುದು ಮಾಡಿದರೆ ನಿಮ್ಮ ಭವಿಷ್ಯಕ್ಕೆ ಕುತ್ತು ಗ್ಯಾರಂಟಿ. ಆಸೆ ಅಮೀಷ ತೋರಿಸುವವರಿಂದ ದೂರವಿರಿ. ಒಳ್ಳೆ ದಾರಿ ತೋರಿಸುವ ಸ್ನೇಹಿತರ ಜೊತೆ ಬಾಂಧವ್ಯ ಬೆಳಸಿಕೊಳ್ಳಿ. ದುಷ್ಚಟಿಕೆಗಳಿಗೆ ಬಲಿಯಾಗದಿರಿ ಎಂದು ಕಿವಿ ಮಾತು ಹೇಳಿದರು.
ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ಬಿ ರೆಡ್ಡಿ ಮಾತನಾಡಿ ಸಂಸ್ಥೆ ಕಟ್ಟುವುದು ಸುಲಭ. ಆದರೆ ನಿರ್ವಹಣೆ ಕಷ್ಟದ ಕೆಲಸ. ಶೋಷಿತರಿಗೆ ನಿರ್ಗತಿಕರಿಗೆ,ಬಡ ವಿದ್ಯಾರ್ಥಿಗಳಿಗೆ ಕೈಲಾದಷ್ಟು ನೆರವು ನೀಡಲು ಮುಂದಾಗುವ ಸಂಘ ಸಂಸ್ಥೆಗಳಿಗೆ ಮಾನಸಿಕವಾಗಿ, ಆರ್ಥಿಕವಾಗಿ , ಧೈರ್ಯ ತುಂಬಬೇಕು. ಸ್ನೇಹಿತರಾದ ಶ್ರೀನಿವಾಸ್ ಸಾಮಾಜಿಕ ಕಳಕಳಿಯೊಂದಿಗೆ ಅಮ್ಮ ಎಜುಕೇ ಷನಲ್ ಟ್ರಸ್ಟ್ ಮುಖಾಂತರ ಸಮಾಜ ಸೇವೆ ಮಾಡಲು ಮುಂದಾಗಿದ್ದು ಅವರ ಜೊತೆ ನಾವೆಲ್ಲರೂ ನಿಲ್ಲಬೇಕು. ಸಮ ಸಮಾಜ ನಿರ್ಮಾಣಕ್ಕೆ ನಮ್ಮ ಮೇಲಿರುವ ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು.ಕೆಟ್ಟದ್ದನ್ನ ಖಂಡಿಸಿ ನಿಲ್ಲಿಸಬೇಕು. ಒಳ್ಳೆಯದನ್ನು ಅನುಸರಿಸಿ ಸಮಾಜದಲ್ಲಿ ಸಾಧನೆ ಮಾಡಿದ ಬಹುತೇಕ ವ್ಯಕ್ತಿಗಳನ್ನು ಸ್ಪೂರ್ತಿಯಾಗಿಟ್ಟಿಕೊಂಡು ಇತರರಿಗೆ ಮಾದರಿಯಾಗಬೇಕೆಂದ ಅವರು ಪೋಷಕರ, ನೆರಹೊರೆಯವರ, ಸ್ನೇಹಿತರ ಬದುಕು ಬಂಗಾರ ಮಾಡುವ ಮೂಲಕ ಆರ್ಥಿಕವಾಗಿ ಸದೃಢವಾಗಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗ ಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಇನ್ನು ಟ್ರಸ್ಟ್ ಅಧ್ಯಕ್ಷ ಗೋಳ್ಳು ಶ್ರೀನಿವಾಸ್ ಮಾತನಾಡಿ ಕೋವಿಡ್ ಸಮಯದಲ್ಲಿ ಬದುಕು ಏನೆಂಬುದು ಎಲ್ಲರಿಗೂ ಗೊತ್ತಾಗಿದೆ. ಜನರು ಪಟ್ಟಂತಹ ಕಷ್ಟಗಳನ್ನು ನೋಡಿ ಬಹಳಷ್ಟು ನೊಂದಿದ್ದೇನೆ.ಹೀಗಾಗಿ ಐದು ಜನ ಸ್ನೇಹಿತರ ತಂಡವನ್ನು ಕಟ್ಟಿಕೊಂಡು ಕಳೆದ ವರ್ಷಗಳಿಂದ ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲಪ್ಮೆಂಟ್ ಟ್ರಸ್ಟ್ ಪ್ರಾರಂಭಿಸಿ ಶೈಕ್ಷಣಿಕ,ಆರೋಗ್ಯ ಹಾಗೂ ಇತರೆ ಕ್ಷೇತ್ರಗಳಲ್ಲಿ ಆದಷ್ಟು ಸಹಾಯ ಮಾಡುತ್ತಾ ಬರಲಾಗಿದೆ. ವಾರ್ಷಿಕೋತ್ಸವ ಅಂಗವಾಗಿ ಇಂದು ಜೀವ ಉಳಿಸುವ ಕಾರ್ಯ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಬದುಕು ಶಾಶ್ವತವಲ್ಲ ಇದ್ದಷ್ಟು ದಿನ ಸಮಾಜಕ್ಕೆ ಏನಾದರೂ ಮಾಡಬೇಕೆಂಬ ಉದ್ದೇಶದಿಂದ ಮುಂದೆ ಸಾಗಿದ್ದೇವೆ.ನಿಮ್ಮೆಲ್ಲರ ಸಹಕಾರವಿರಲಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿಶೇಷ ಅಹ್ವಾನಿತರಾಗಿ ಆಗಮಿಸಿದ್ದ ಮಕ್ಕಳ ತಜ್ಞ ಡಾ ರವಿಕುಮಾರ್,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕೋಡಿರಂಗಪ್ಪ, ಟಿಎಪಿಸಿಎಂಎಸ್ ಅಧ್ಯಕ್ಷ ಆವಲ ಕೊಂಡರಾ ಯಪ್ಪ, ನಿರ್ದೇಶಕ ಈರಚಿನ್ನಪ್ಪ,ವಿಶ್ವ ವಿವೇಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅಂಜಿ, ಉಮೇಶ್ ಜಿ, ಕೆ ಸಿ ರಾಜಾಕಾಂತ್, ಸುಧಾ ವೆಂಕಟೇಶ್, ಬಿ ಎನ್ ಗಂಗಾಧರಪ್ಪ, ತಿಪ್ಪೇನಹಳ್ಳಿ ನಾರಾಯಣಸ್ವಾಮಿ, ಡಿ.ವಿ ನಾರಾಯಣಸ್ವಾಮಿ,ಅಮ್ಮ ಎಜುಕೇಷನಲ್ ಅಂಡ್ ರೂರಲ್ ಡೆವಲ ಪ್ಮೆಂಟ್ ಟ್ರಸ್ಟ್ನ ಕಾರ್ಯದರ್ಶಿ ಗಂಗರಾಜು,ಜAಟಿ ಕಾರ್ಯದರ್ಶಿ ವೆಂಕಟೇಶ್, ಖಜಾಂಚಿ ಆನಂದ್, ಸದಸ್ಯರಾದ ಶಿಲ್ಪ ವೆಂಕಟೇಶ್ ಇತರರು ಉಪಸ್ಥಿತರಿದ್ದರು.