ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chitradurga Bus Accident: ಸ್ಲೀಪರ್‌ ಬಸ್‌ ಬೆಂಕಿಗಾಹುತಿ: 9 ಪ್ರಯಾಣಿಕರು ಸಜೀವ ದಹನ, ನಡೆದದ್ದೇನು?

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಹೊತ್ತಿ ಉರಿದ ಬಸ್‌ ಅವಶೇಷ

ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಬಸ್‌ ದುರಂತ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ ಹಾಗೂ ಹೊಸ ವರ್ಷದ ಆಗಮನದ ಸಂಭ್ರಮಕ್ಕೆ ತಣ್ಣೀರೆರಚಿದೆ. ನಿನ್ನೆ ರಾತ್ರಿ (ಡಿ.25) ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ.

ಖಾಸಗಿ ಸ್ಲೀಪರ್ ಕೋಚ್​​ ಬಸ್​ನಲ್ಲಿದ್ದ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್​ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್​ ಕೋಚ್​​ ಬಸ್​​​ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗಿದೆ. ಇನ್ನು ಈ ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ಬಸ್​​​ ಬೆಂಗಳೂರಿಂದ ಶಿವಮೊಗ್ಗಕ್ಕೆ ಹೋಗುತ್ತಿತ್ತು. ಇದೀಗ ಘಟನಾ ಸ್ಥಳಕ್ಕೆ ಎಸ್​ಪಿ ರಂಜಿತ್​​ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.

ಬಸ್ಸಿನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದರು. ಒಟ್ಟು 32 ಸೀಟ್​ಗಳ ಬಸ್​​ನಲ್ಲಿ 29 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್​​ನಲ್ಲಿ ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು. ಇನ್ನು ಈ ಬಸ್ಸಿನಲ್ಲಿ ಮಂಜುನಾಥ್​, ಸಂಧ್ಯಾ, ಶಶಾಂಕ್​, ದಿಲೀಪ್​, ಪ್ರೀತೀಶ್ವರನ್,​ ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್​, ಮಾನಸ, ಮಿಲನಾ, ಹೇಮರಾಜ್​ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್​, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್​, ಹೆಚ್​.ಕಿರಣ್ ಪಾಲ್​, ಎಂ.ಕೀರ್ತನ್ ಸೇರಿದಂತೆ 29 ಜನ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ.

ಬಸ್ ಚಾಲಕ, ನಿರ್ವಾಹಕ ಮತ್ತು ಕೆಲವರು ಬಸ್ ನಿಂದ ಹೊರ ಜಿಗಿದು ಬಚಾವ್​​ ಆಗಿದ್ದಾರೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಸ್ ನಲ್ಲಿ ತೆರಳುತ್ತಿದ್ದ ಬೆಂಗಳೂರು ಮೂಲದ ಗಗನ ಶ್ರೀ, ರಕ್ಷಿತಾ ಹಾಗೂ ಗೋಕರ್ಣ ಮೂಲದ ರಶ್ಮಿ ಪ್ರಯಾಣಿಸುತ್ತಿದ್ದರು. ಇದೀಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿ.ಮೀ. ದೂರದ ವರೆಗೆ ಟ್ರಾಫಿಕ್ ಜಾಮ್​​ ಆಗಿದ್ದು, ಶಿರಾವರೆಗೂ ಕಿಲೋ ಮೀಟರ್​ಗಟ್ಟಲೇ ವಾಹನಗಳು ನಿಂತಿದೆ.

ಇತ್ತೀಚೆಗೆ ಆಂಧ್ರ ಪ್ರದೇಶದ ಕರ್ನೂಲ್​ ಸಮೀಪ 41 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬೈಕ್​ ಗೆ ಡಿಕ್ಕಿ ಹೊಡೆದ ಬಳಿಕ ಬಸ್​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಕೆಲವರು ಹೊರಹಾರಿ ಪ್ರಾಣ ಉಳಿಸಿಕೊಂಡಿದ್ದರೆ ಹಲವರು ಬೆಂಕಿ ಕೆನ್ನಾಲೆಗೆ ಸಿಲುಕಿ ಜೀವ ಕಳೆದುಕೊಂಡಿದ್ದರು. ಘಟನೆಯಲ್ಲಿ ಬೆಂಗಳೂರಲ್ಲಿ ನೆಲೆಸಿದ್ದ ಕುಟುಂಬ ಸೇರಿ 20 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಇಂತಹದೇ ಮತ್ತೊಂದು ಘಟನೆ ನಡೆದಿದೆ.

ಹರೀಶ್‌ ಕೇರ

View all posts by this author