ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು

Challakere News: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ಅಣ್ಣ-ತಂಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಚಾಲಕನಿಗೂ ಗಾಯಗಳಾಗಿವೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು

Prabhakara R Prabhakara R Jul 29, 2025 5:00 PM

ಚಿತ್ರದುರ್ಗ: ಚಳ್ಳಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಬೈಕ್‍ನಲ್ಲಿದ್ದ ಅಣ್ಣ-ತಂಗಿ ಮೃತಪಟ್ಟಿದ್ದಾರೆ. ಮೃತರನ್ನು ತಳಕು ಗ್ರಾಮದ ಅಭಿ (28), ತಂಗಿ ಮಂಜುಳಾ (25) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ರಾಯಚೂರು ಮೂಲದ ಕಾರು ಚಾಲಕ ನಾಗಿರೆಡ್ಡಿ ಗಾಯಗೊಂಡಿದ್ದು, ಆತನನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | Road Accident: ಕನ್ವಾರಿ ಯಾತ್ರಿಗಳಿದ್ದ ಬಸ್‌ಗೆ ಟ್ರಕ್‌ ಡಿಕ್ಕಿ ; ಸ್ಥಳದಲ್ಲಿಯೇ 18 ಭಕ್ತರು ಸಾವು, ಹಲವರಿಗೆ ಗಾಯ

ತಿಪಟೂರಿನಲ್ಲಿ ಯುವಕ ಅನುಮಾನಾಸ್ಪದ ಸಾವು

ತಿಪಟೂರು: ಯುವಕನೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ (Tiptur News)‌ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಗದಹಳ್ಳಿಯಲ್ಲಿ ಜರುಗಿದೆ. ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದ ಹರ್ಷ ಬಿ.ಪಿ (25) ಮೃತ ಯುವಕ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ನಾಗಸಂದ್ರದಲ್ಲಿ ತರಕಾರಿ ಮಾರಿಕೊಂಡು ಜೀವನ ಸಾಗಿಸುತ್ತಿದ್ದ ಮೃತ ಯುವಕ ಹರ್ಷ ಕುಟುಂಬಸ್ಥರು ಹಲವು ವರ್ಷಗಳಿಂದ ಬೆಂಗಳೂರಿನಲ್ಲೇ ವಾಸವಾಗಿದ್ದರು. ಈತ ಕಳೆದ ಆರು ವರ್ಷದ ಹಿಂದೆ ತಿಪಟೂರು ತಾಲೂಕಿನ ಗುರುಗದಹಳ್ಳಿಗೆ ದೇವರ ಕಾರ್ಯಕ್ಕೆಂದು ಹೋದಾಗ ಅದೇ ಗ್ರಾಮದ ಭೂಮಿಕಾ ಎಂಬ ಯುವತಿಯ ಪರಿಚಯವಾಗಿದ್ದು, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಜು.18 ರಂದು ತನ್ನ ಸಹೋದರನು ಊರಿಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದು, ಜು.20 ರಂದು ಗುರುಗದಹಳ್ಳಿಯ ಮನೆಯೊಂದರ ಹಿತ್ತಲಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ ಎಂದು ಮೃತ ಯುವಕನ ಸಹೋದರ ರಾಕೇಶ್‌, ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‌

ಮನೆಗೆ ಆಧಾರವಾಗಿದ್ದ ಹಿರಿಯ ಮಗನ ಸಾವಿನಿಂದಾಗಿ ಕುಟುಂಬವೇ ಕುಗ್ಗಿ ಹೋಗಿದೆ. ನನ್ನ ಅಣ್ಣನ ಸಾವು ಅನುಮಾನಾಸ್ಪದವಾಗಿದ್ದು, ಅಣ್ಣನ ಸಾವಾಗಿ ವಾರ ಕಳೆದರೂ ಪೊಲೀಸರು ಈವರೆಗೂ ಆ ಹುಡುಗಿ ಮನೆಯವರನ್ನು ಕರೆಸಿ ತನಿಖೆ ನಡೆಸುತ್ತಿಲ್ಲ ಎಂದು ಮೃತ ಯುವಕನ ಸಹೋದರ ರಾಕೇಶ್‌ ಆರೋಪಿಸಿದ್ದಾರೆ. ಈ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | Murder Case: ಪಾರ್ಟಿ ಮಾಡುತ್ತಿದ್ದ ಮಾಜಿ ಗ್ರಾ.ಪಂ ಅಧ್ಯಕ್ಷನ ಮೇಲೆ ಡೆಡ್ಲಿ ಅಟ್ಯಾಕ್‌; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಂಗಳೂರಿನಲ್ಲಿ ಬೀದಿನಾಯಿಗಳ ಬರ್ಬರ ದಾಳಿಗೆ ವೃದ್ಧ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru News) ಬೀದಿ ನಾಯಿಗಳ ದಾಳಿಗಳು (Street Dog attack) ಹೆಚ್ಚು ಹೆಚ್ಚು ಮಾರಕವಾಗುತ್ತಿದ್ದು, ಇವುಗಳ ದಾಳಿಗೆ ಹಿರಿಯ ನಾಗರಿಕರೊಬ್ಬರು (Senior citizen) ಬಲಿಯಾಗಿದ್ದಾರೆ. 71 ವರ್ಷದ ಸೀತಪ್ಪ ಎನ್ನುವ ವೃದ್ಧರ ಮೇಲೆ ಬೀದಿನಾಯಿಗಳು ಬರ್ಬರವಾಗಿ ದಾಳಿಯೆಸಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು (death) ಸಾವನ್ನಪ್ಪಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದಾಗ ಸೀತಪ್ಪ ಅವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಓಡಲಾಗದೆ ಬಿದ್ದ ವೃದ್ಧ ಸೀತಪ್ಪ ಅವರ ಕೈ ಕಾಲು ಮತ್ತು ಮುಖಕ್ಕೆ ಬೀದಿ ನಾಯಿಗಳು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ್ದವು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿ ಆಗದೆ ಸೀತಪ್ಪ ಕೊನೆಯುಸಿರೆಳೆದಿದ್ದಾರೆ.