ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಉಮಾಶ್ರೀ ಅಭಿನಯದ ‘ಶರ್ಮಿಷ್ಠೆ’ ನಾಟಕ ನೋಡಿ ಆನಂದಿಸಿದ ಸಿಎಂ ಸಿದ್ಧರಾಮಯ್ಯ

Umashree: ನಟಿ, ರಾಜಕಾರಣಿ ಉಮಾಶ್ರೀ ಅವರು ನಟಿಸಿರುವ ʼಶರ್ಮಿಷ್ಠೆʼ ಏಕ ವ್ಯಕ್ತಿ ಪ್ರದರ್ಶನವನ್ನು ಬೇಲೂರು ರಘುನಂದನ್ ರಚಿಸಿದ್ದು, ಈ ನಾಟಕಕ್ಕೆ ಚಿದಂಬರರಾವ್ ಜಂಬೆ ವಿನ್ಯಾಸ, ನಿರ್ದೇಶನವಿದೆ. ಇತ್ತೀಚೆಗೆ ಉಮಾಶ್ರೀ ಅವರು ಯಕ್ಷಗಾನದಲ್ಲಿ ಮಂಥರೆ ಪಾತ್ರವನ್ನೂ ನಿರ್ವಹಿಸಿದ್ದರು.

ಬೆಂಗಳೂರು : ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಲ್ಲಿ ನಿನ್ನೆ ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ (Umashree) ಅವರ ಏಕ ವ್ಯಕ್ತಿ ಅಭಿನಯದ ʼಶರ್ಮಿಷ್ಠೆʼ ನಾಟಕವನ್ನು ಸಿಎಂ ಸಿದ್ದರಾಮಯ್ಯ ವೀಕ್ಷಿಸಿ ಆನಂದಿಸಿದರು. ವಿಧಾನಸಭೆ ಕಲಾಪಗಳು ನಿನ್ನೆಗೆ ಮುಕ್ತಾಯವಾಗಿದ್ದು, ಅಕ್ರಮ ಗಣಿಗಾರಿಕೆ ಕುರಿತ ವರದಿ ಹಾಗೂ ಬೆಂಗಳೂರು ಕಾಲ್ತುಳಿತದ ಕುರಿತ ಹೇಳಿಕೆಯನ್ನು ಸಿಎಂ ನಿನ್ನೆ ಸದನದಲ್ಲಿದ್ದುಕೊಂಡು ಮಂಡಿಸಿದ್ದರು. ಆ ಬಳಿಕ ಅವರು ನಾಟಕಕ್ಕೆ ತೆರಳಿದ್ದಾರೆ.

ಈ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ.ಇಂದಿನ ಶರ್ಮಿಷ್ಠೆ ನಾಟಕದಲ್ಲಿ ಅವರ ಅಭಿಯನ ಮನೋಜ್ಞವಾಗಿತ್ತು. ಕಲಾಸರಸ್ವತಿಯ ಒಲವು ಅವರ ಮೇಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಜನಸೇವೆಯ ಜೊತೆಗೆ ಕಲಾಸೇವೆಯ ಅವರ ಕಾರ್ಯ ಯಾವ ಅಡೆತಡೆಗಳಿಲ್ಲದೆ ಸಾಗಲಿ ಎಂದು ಹಾರೈಸಿದ್ದಾರೆ.



ಬೇಲೂರು ರಘುನಂದನ್ ಅವರ ಈ ನಾಟಕಕ್ಕೆ ಚಿದಂಬರರಾವ್ ಜಂಬೆ ವಿನ್ಯಾಸ, ನಿರ್ದೇಶನವಿದೆ. ಅನೂಪ್ ಶೆಟ್ಟಿ ಸಂಗೀತ ವಿನ್ಯಾಸ, ಶಿವಲಿಂಗ ಪ್ರಸಾದ್ ಸಂಗೀತ ನಿರ್ವಹಣೆ, ಪ್ರಮೋದ್ ಶಿಗ್ಗಾಂವ್ ರಂಗಸಜ್ಜಿಕೆ, ವಸ್ತ್ರವಿನ್ಯಾಸವಿದೆ. ಕನ್ನಡ ರಂಗಭೂಮಿ, ಕಿರುತೆರೆ, ಬೆಳ್ಳಿತೆರೆ ಕ್ಷೇತ್ರದ ಅಭಿಜಾತ ಕಲಾವಿದೆ ಉಮಾಶ್ರೀ ಅವರು 4 ದಶಕಕ್ಕೂ ಹೆಚ್ಚು ಕಾಲದಿಂದ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಅನುಪಮವಾದ ಸೇವೆ ಸಲ್ಲಿಸುತ್ತಿರುವ ಭಾರತೀಯ ಅಭಿನಯ ಪರಂಪರೆಯಲ್ಲಿ ಒಂದು ಅಮೂಲ್ಯ ಮಾದರಿ. ಇತ್ತೀಚೆಗೆ ಉಮಾಶ್ರೀ ಅವರು ಯಕ್ಷಗಾನದಲ್ಲಿ ಮಂಥರೆ ಪಾತ್ರವನ್ನೂ ನಿರ್ವಹಿಸಿದ್ದರು.

ಹರೀಶ್‌ ಕೇರ

View all posts by this author