ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ahmedabad Plane Crash: ಅಹಮದಾಬಾದ್‌ ವಿಮಾನ ದುರಂತ; ಸಿಎಂ ಸಿದ್ದರಾಮಯ್ಯ ಸಂತಾಪ

Ahmedabad Plane Crash: ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿ ಈ ಅವಘಡ ಸಂಭವಿಸಿದೆ. ಏರ್‌ ಇಂಡಿಯಾ ವಿಮಾನ ಸುಮಾರು 800 ಅಡಿ ಎತ್ತರದಿಂದ ಪತನವಾಗಿದ್ದು, ಘಟನೆ ವೇಳೆ ಸುಮಾರು 242 ಪ್ರಯಾಣಿಕರು ವಿಮಾನದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

ಅಹಮದಾಬಾದ್‌ ವಿಮಾನ ದುರಂತ; ಸಿಎಂ ಸಿದ್ದರಾಮಯ್ಯ ಸಂತಾಪ

Profile Prabhakara R Jun 12, 2025 4:11 PM

ಬೆಂಗಳೂರು: ಅಹಮದಾಬಾದ್‌ ವಿಮಾನ ದುರಂತದಲ್ಲಿ ಸುಮಾರು 133 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ವಿಮಾನ ಅವಘಡದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ರಾಜ್ಯದ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ. ‌



ವಿಮಾನ ಪತನ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ: ನಿಖಿಲ್

ಅಹಮದಾಬಾದ್‌ ವಿಮಾನ ದುರಂತಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಗುಜರಾತ್ ರಾಜ್ಯದ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.

ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.



ಈ ಸುದ್ದಿಯನ್ನೂ ಓದಿ | Ahmedabad Plane Crash Live Updates: ಏರ್‌ ಇಂಡಿಯಾ ವಿಮಾನ ಪತನ; ಸಾವಿನ ಸಂಖ್ಯೆ 133ಕ್ಕೆ ಏರಿಕೆ