ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

RV Devaraj passes away: ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಇನ್ನಿಲ್ಲ

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ (RV Devaraj) ಹೃದಯಾಘಾತದಿಂದ (heart attack) ಸೋಮವಾರ ನಿಧನ ಹೊಂದಿದ್ದಾರೆ. ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಆರ್‌ ವಿ ದೇವರಾಜ್

ಬೆಂಗಳೂರು, ಡಿ. 01: ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ (RV Devaraj) ಹೃದಯಾಘಾತದಿಂದ (heart attack) ಸೋಮವಾರ ನಿಧನ ಹೊಂದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

ರಾಜಕೀಯ ಜೀವನ

1957ರ ಡಿಸೆಂಬರ್ 3ರಂದು ಆರ್​.ವಿ.ದೇವರಾಜ್ ಜನಿಸಿದ್ದರು. ಶಿಕ್ಷಣದ ಬಳಿಕ 1989-99ರಲ್ಲಿ ಚಾಮರಾಜಪೇಟೆ ಶಾಸಕರಾಗಿದ್ದರು. 2000ರಿಂದ ಅಕ್ಟೋಬರ್ 2007ರವರೆಗೆ ಕೆಎಸ್​​ಆರ್​​​ಟಿಸಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎಐಸಿಸಿ ಸದಸ್ಯರಾಗಿದ್ದರು. 2008ರಲ್ಲಿ ಕ್ಷೇತ್ರ ಮರುವಿಂಗಡನೆಯಾದಾಗ ಎಸ್​ಎಂ ಕೃಷ್ಣಗೆ ಬೆಂಗಳೂರಲ್ಲಿ ಸ್ಪರ್ಧಿಸಲು ಕ್ಷೇತ್ರ ಬಿಟ್ಟುಕೊಡುತ್ತಾರೆ. ಚಾಮರಾಜಪೇಟೆ ಕ್ಷೇತ್ರ ಆ ಸಮಯದಲ್ಲಿ ಕಾಂಗ್ರೆಸ್​ಗೆ ಪೂರಕವಾಗಿತ್ತು. ಎಸ್​.ಕೃಷ್ಣ ಸಿಎಂ ಆಗಿದ್ದಾಗ ಆರ್​.ವಿ ದೇವರಾಜ್ ಆಪ್ತರಾಗಿದ್ದರು. ಬಳಿಕ ಚಿಕ್ಕಪೇಟೆ ಕ್ಷೇತ್ರ ಚುನಾವಣೆ ಸ್ಪರ್ಧಿಸಿದ್ದರು.

ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.

ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್​​



ಮಾಜಿ ಶಾಸಕ ಆರ್​.ವಿ. ದೇವರಾಜ್ ಅವರ ಅಗಲಿಕೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್​ ಮಾಡಿದ್ದು, ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.

ಹರೀಶ್‌ ಕೇರ

View all posts by this author