ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Bank Robbery Case: ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಕೇಸ್;‌ ಮಧುರೈ ಮೂಲದ ಮೂವರು ಖದೀಮರು ಅರೆಸ್ಟ್

Bank Robbery Case: ದರೋಡೆ ನಡೆಸಿದ ಬಳಿಕ ದರೋಡೆಕೋರರು ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು. ಇದೀಗ ಮಧುರೈ ಸಮೀಪ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಕೋಟೆಕಾರು ಬ್ಯಾಂಕ್ ದರೋಡೆ ಕೇಸ್;‌ ಮಧುರೈ ಮೂಲದ ಮೂವರು ಖದೀಮರು ಅರೆಸ್ಟ್

Profile Prabhakara R Jan 20, 2025 8:24 PM

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ದರೋಡೆ ಪ್ರಕರಣಕ್ಕೆ (Bank Robbery Case) ಸಂಬಂಧಿಸಿ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಮಧುರೈ ಸಮೀಪ ದರೋಡೆಕೋರರನ್ನು ಪೊಲೀಸರ ತಂಡ ಅರೆಸ್ಟ್‌ ಮಾಡಿದೆ.

ಮಧುರೈ ಮೂಲದ ಮುರುಗನ್ಡಿ, ಮಣಿವಣ್ಣನ್ ಹಾಗೂ ಪ್ರಕಾಶ್​ ಅಲಿಯಾಸ್ ಜೋಷ್ವಾ ಬಂಧಿತ ಆರೋಪಿಗಳು. ಬಂಧಿತರಿಂದ ಫಿಯೆಟ್ ಕಾರು ಸಹಿತ ಎರಡು ಚೀಲದಲ್ಲಿದ್ದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ದರೋಡೆ ನಡೆಸಿದ ಬಳಿಕ ದರೋಡೆ ಕೋರರು ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು. ಕೇರಳದ ಟೋಲ್​ನಲ್ಲಿ ಕಾರು ಪಾಸ್ ಆಗಿರುವುದು ಪತ್ತೆಯಾಗಿತ್ತು. ಇದೀಗ ಮಧುರೈ ಸಮೀಪ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಏನಿದು ಪ್ರಕರಣ?

ಉಲ್ಲಾಳದ ಕೋಟೆಕಾರು ಸಹಕಾರ ಬ್ಯಾಂಕ್‌ನಲ್ಲಿ ಜ.17ರಂದು 12 ಕೋಟಿ ಮೌಲ್ಯದ ನಗದು, ಚಿನ್ನಾಭರಣಗಳನ್ನು ದರೋಡೆ ಮಾಡಲಾಗಿತ್ತು. ಮಧ್ಯಾಹ್ನ ಕೋಟೆಕಾರು ಸಹಕಾರ ಬ್ಯಾಂಕ್‌ಗೆ ನುಗಿದ್ದ ದರೋಡೆಕೋರರು ಕೇವಲ 5 ನಿಮಿಷದಲ್ಲಿ ಹಣದ ಮೂಟೆ ಕಟ್ಟಿಕೊಂಡು ಹೋಗಿದ್ದರು. ಕೋಟೆಕಾರು ಬ್ಯಾಂಕ್‌ ದರೋಡೆ ಮಾಡಲು ಈ ಗ್ಯಾಂಗ್ ಮೊದಲೇ ಸ್ಕೆಚ್ ಹಾಕಿಕೊಂಡು ಬಂದಿತ್ತು. ದರೋಡೆಕೋರರು ಓರ್ವ ಬ್ಯಾಂಕ್ ಸಿಬ್ಬಂದಿಯ ಮೊಬೈಲ್ ಕಿತ್ತುಕೊಂಡು ಎಸ್ಕೇಪ್ ಆಗಿದ್ದ. ಬ್ಯಾಂಕ್ ಸಿಬ್ಬಂದಿಯ ಮೊಬೈಲ್ ಕಸಿದು ಕೊಂಡು ಹೋದ ದರೋಡೆಕೋರರು ಮಂಗಳೂರು ಪೊಲೀಸರು ನಮ್ಮನ್ನ ಟ್ರ್ಯಾಕ್ ಮಾಡುತ್ತಾರೆ ಅನ್ನೋದು ಚೆನ್ನಾಗಿ ಗೊತ್ತಿದೆ. ಆ ಮೊಬೈಲ್​ ಅನ್ನು ಪೊಲೀಸರು ಟ್ರ್ಯಾಕ್ ಮಾಡಿದಾಗ ಸ್ಫೋಟಕ ಮಾಹಿತಿ ಬಯಲಾಗಿತ್ತು.

ಬ್ಯಾಂಕ್ ಸಿಬ್ಬಂದಿ ಮೊಬೈಲ್‌ ಕಿತ್ತುಕೊಂಡ ದರೋಡೆಕೋರರು ಇಡೀ ನಗರ ಸುತ್ತಿ, ಕದ್ರಿ ರಸ್ತೆ ಬಳಿ ಮೊಬೈಲ್ ಎಸೆದು ಪರಾರಿಯಾಗಿದ್ದರು. ಪೊಲೀಸರ ತನಿಖೆಯ ಹಾದಿ ತಪ್ಪಿಸೋಕ್ಕೆ ಈ ಕಿಲಾಡಿ ಪ್ಲಾನ್ ಮಾಡಿದ್ದರು. ಬ್ಯಾಂಕ್​ ಬಗ್ಗೆ ಪಿನ್ ಟು ಪಿನ್ ಮಾಹಿತಿ ಕಲೆ ಹಾಕಿದ್ದ ಖದೀಮರಿಗೆ ಬ್ಯಾಂಕ್ ಸಿಬ್ಬಂದಿಯೇ ಶಾಮೀಲಾಗಿರುವ ಶಂಕೆಯೂ ವ್ಯಕ್ತವಾಗಿತ್ತು. ಖದೀಮರ ಒಂದು ತಂಡ ಮೊಬೈಲ್ ಎಸೆದು ಪರಾರಿಯಾದ ಮೇಲೆ ಬಂಟ್ವಾಳ ರಸ್ತೆಯ ಮೂಲಕ ಕೇರಳಕ್ಕೆ ಪ್ರವೇಶಿಸಿದ್ದರು. ಕೇರಳದ ಟೋಲ್​ನಲ್ಲಿ ಕಾರು ಹೋಗಿರುವುದು ಕೂಡ ಪತ್ತೆಯಾಗಿತ್ತು. ಇದೀಗ ಮಧುರೈ ಬಳಿ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.