ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Chalo: ಸೌಜನ್ಯಾ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ; ನ್ಯಾಯಕ್ಕಾಗಿ ತಾಯಿ ಕುಸುಮಾವತಿ ಕಣ್ಣೀರು

B.Y. Vijayendra: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಧರ್ಮಸ್ಥಳದಲ್ಲಿ ಬಿಜೆಪಿಯಿಂದ ಸೋಮವಾರ ಧರ್ಮಸ್ಥಳ ಚಲೋ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದ ನಂತರ ರಾಜ್ಯ ಬಿಜೆಪಿ ಸೇರಿ ವಿವಿಧ ನಾಯಕರ ತಂಡ, ಧರ್ಮಸ್ಥಳದ ಸೌಜನ್ಯ ನಿವಾಸಕ್ಕೆ ಭೇಟಿ, ಮಾತುಕತೆ ನಡೆಸಿದ್ದಾರೆ.

ಧರ್ಮಸ್ಥಳ ಸಮಾವೇಶದ ಬಳಿಕ ಸೌಜನ್ಯಾ ನಿವಾಸಕ್ಕೆ ವಿಜಯೇಂದ್ರ ಭೇಟಿ

-

Prabhakara R Prabhakara R Sep 1, 2025 6:31 PM

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ತನಿಖೆ ನಡೆಯುತ್ತಿದೆ. ಈ ನಡುವೆ ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರ ಖಂಡಿಸಿ ಧರ್ಮಸ್ಥಳದಲ್ಲಿ ಬಿಜೆಪಿಯಿಂದ ಸೋಮವಾರ ಬೃಹತ್‌ ಸಮಾವೇಶ (Dharmasthala Chalo) ನಡೆದಿದೆ. ಸಮಾವೇಶದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್‌ ಚೌಟ ಸೇರಿ ವಿವಿಧ ನಾಯಕರು, ಧರ್ಮಸ್ಥಳದ ಸೌಜನ್ಯ ನಿವಾಸಕ್ಕೆ (Soujanya Case) ಭೇಟಿ, ಮಾತುಕತೆ ನಡೆಸಿದ್ದಾರೆ.

ಸೌಜನ್ಯ ತಾಯಿ ಕುಸುಮಾವತಿ ಜತೆ ವಿಜಯೇಂದ್ರ ಮಾತುಕತೆ ನಡೆಸಿ, ಸೌಜನ್ಯಪರ ಹೋರಾಟದಲ್ಲಿ ಜತೆಗಿರುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಬಿ.ವೈ. ವಿಜಯೇಂದ್ರ ಮುಂದೆ, ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ತಾಯಿ ಕುಸುಮಾವತಿ ಕಣ್ಣೀರು ಹಾಕಿದ್ದಾರೆ.

ಈ ಬಗ್ಗೆ ಬಿ.ವೈ. ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಶಿಕ್ಷೆಯಿಂದ ತಪ್ಪಿಸಿಕೊಂಡು ತಿರುಗುತ್ತಿರುವುದು ಬಹುದೊಡ್ಡ ವಿಪರ್ಯಾಸ.

ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು, ಪ್ರಕರಣ ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ತನ್ನ ಸಹಾನುಭೂತಿ ಹಾಗೂ ಬೆಂಬಲ ವ್ಯಕ್ತಪಡಿಸಲು ಸೌಜನ್ಯ ಅವರ ಮನೆಗೆ ತೆರಳಿ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾಗಿ ‘ನಿಮ್ಮೊಂದಿಗೆ ನಾವಿದ್ದೇವೆ’ ಎಂಬ ಅಭಯ ನೀಡಲಾಯಿತು ಎಂದು ತಿಳಿಸಿದ್ದಾರೆ.



ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ಬೆಂಬಲ

ಇನ್ನು ಇದಕ್ಕೂ ಮೊದಲು ಸೌಜನ್ಯಾ ಪ್ರಕರಣದಲ್ಲಿ ಬಿಜೆಪಿ ನಿಲುವಿನ ಬಗ್ಗೆ ಧರ್ಮಸ್ಥಳ ಚಲೋ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯಿಸಿದ್ದರು. ಸೌಜನ್ಯಾ ಹತ್ಯೆ ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಘೋಷಣೆ ಮಾಡಲಿ. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ಬೆಂಬಲ ಕೊಡುತ್ತೇವೆ ಎಂದು ಘೋಷಿಸಿದ್ದರು.

ಈ ಸುದ್ದಿಯನ್ನೂ ಓದಿ | Dharmasthala Chalo: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಸಮಾಜ ತಿರಸ್ಕರಿಸಬೇಕು: ಜೋಶಿ

ಧರ್ಮಸ್ಥಳ ವಿರುದ್ಧ ಪಿತೂರಿ; ಎನ್‌ಐಎ ತನಿಖೆಗೆ ಬಿ.ವೈ. ವಿಜಯೇಂದ್ರ ಒತ್ತಾಯ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ನಿಮ್ಮ ಎಸ್‌ಐಟಿ ತನಿಖೆ ನಡೆಯಲಿ. ಆದರೆ, ದೇಶ ದ್ರೋಹಿಗಳು ಧರ್ಮ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹೊರ ದೇಶಗಳಿಂದಲೂ ಕೋಟಿ ಕೋಟಿ ಪಡೆದು ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದರ ಹಿಂದಿರುವ ಕೈಗಳನ್ನು ಹತ್ತಿಕ್ಕುವ ಕೆಲಸವಾಗಬೇಕೆಂದರೆ ಕಾಂಗ್ರೆಸ್‌ ಸರ್ಕಾರದಿಂದ ಆಗಲ್ಲ, ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಆಗ್ರಹಿಸಿದರು.

ಧರ್ಮಸ್ಥಳದಲ್ಲಿ ಬಿಜೆಪಿ ವತಿಯಿಂದ ಸೋಮವಾರ ಆಯೋಜಿಸಿದ್ದ ಧರ್ಮಸ್ಥಳ ಚಲೋ ಬೃಹತ್‌ ಸಮಾವೇಶದಲ್ಲಿ (Dharmasthala Chalo) ಅವರು ಮಾತನಾಡಿದ್ದಾರೆ. ಬಿಜೆಪಿ ರಾಜಕೀಯ ಕಾರಣಕ್ಕೆ ಧರ್ಮಸ್ಥಳ ಚಲೋ ನಡೆಸುತ್ತಿದ್ದಾರೆ ಎಂದು ಕೆಲವರು ಟೀಕೆ ಮಾಡಿದರು. ಆದರೆ, ನಾನು ಸ್ಪಷ್ಟಪಡಿಸುವುದು ಏನೆಂದರೆ ಸಮಾವೇಶಕ್ಕೆ ಬಂದವರು, ಸ್ವಾಭಿಮಾನಿ ಹಿಂದೂ ಕಾರ್ಯಕರ್ತರು ಬಂದಿದ್ದಾರೆ ವಿನಾ, ಯಾರಿಗೂ ದುಡ್ಡು ಕೊಟ್ಟು ಕರೆಸುವ ಕೆಲಸ ಮಾಡಿಲ್ಲ.

ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ಅವಮಾನ ಮಾಡುವ ಸರ್ಕಾರವಿದೆ. ಹಿಂದೂಗಳ ಪವಿತ್ರ ಕ್ಷೇತ್ರಕ್ಕೆ ಅಪಚಾರ ಎಸಗುತ್ತಿರುವವರಿಗೆ ಪಾಠ ಕಲಿಸಬೇಕು. ಕ್ಷೇತ್ರದ ಬಗ್ಗೆ ದಿನನಿತ್ಯ ಅಪಪ್ರಚಾರ ನಡೆಯುತ್ತಿದೆ ಎಂದು ಕಿಡಿಕಾರಿದರು.