ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam terror attack: ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್; ಮಂಗಳೂರಿನಲ್ಲಿ ಕಿಡಿಗೇಡಿ ವಿರುದ್ಧ ಕೇಸ್‌

Pahalgam terror attack: 2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ ಎಂದು ಕಿಡಿಗೇಡಿ, ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿಕೊಂಡಿದ್ದಾನೆ.

ಪಹಲ್ಗಾಮ್ ಉಗ್ರರ ದಾಳಿ ಸಮರ್ಥನೆ ಮಾಡಿ ಪೋಸ್ಟ್;‌ ಕೇಸ್‌ ದಾಖಲು

Profile Prabhakara R Apr 25, 2025 1:53 PM

ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಉಗ್ರರ ದಾಳಿಯನ್ನು (Pahalgam terror attack) ಸಮರ್ಥಿಸಿಕೊಂಡು ಕಿಡಿಗೇಡಿಯೊಬ್ಬ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕಿರುವುದು ಮಂಗಳೂರಿನಲ್ಲಿ ನಡೆದಿದೆ. ನಿಚ್ಚು ಮಂಗಳೂರು ಫೇಸ್‍ಬುಕ್ ಪೇಜ್‍ನಲ್ಲಿ, ಉಗ್ರರ ಕೃತ್ಯಕ್ಕೆ ಬೇರೆಯೇ ವ್ಯಾಖ್ಯಾನ ಮಾಡಲಾಗಿದೆ. ಹೀಗಾಗಿ ಉಳ್ಳಾಲದ ಸತೀಶ್ ಕುಮಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಕಿಡಿಗೇಡಿ ವಿರುದ್ಧ ಪ್ರಕರಣ ದಾಖಲಾಗಿದೆ.

2023ರಲ್ಲಿ ಮಹಾರಾಷ್ಟದ ಪಾಲ್ಗರ್‌ನಲ್ಲಿ ಮೂವರು ಮುಸ್ಲಿಮರನ್ನು ಕೊಲ್ಲಲಾಗಿತ್ತು. ಆರೋಪಿ ಚೇತನ್ ಸಿಂಗ್‍ ಕುತ್ತಿಗೆಗೆ ಸಾರ್ವಜನಿಕವಾಗಿ ಹಗ್ಗ ಹಾಕಲಿಲ್ಲ. ಆ ಕಾರಣಕ್ಕೆ ಕಾಶ್ಮೀರದಲ್ಲಿ ಈ ಕೃತ್ಯ ನಡೆದಿದೆ. ಪಾಲ್ಗರ್ ಘಟನೆಯಿಂದಾಗಿ ಕಾಶ್ಮೀರದಲ್ಲಿ ಧರ್ಮ ಕೇಳಿ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡಿದ್ದಾನೆ.

ಪೋಸ್ಟ್ ಹಾಕಿದ ನಿಚ್ಚು ಮಂಗಳೂರು ಫೇಸ್‍ಬುಕ್ ಪೇಜ್ ವಿರುದ್ಧ ಉಳ್ಳಾಲದ ಸತೀಶ್ ಕುಮಾರ್ ಎಂಬುವವರು ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಬಿಎನ್‍ಎಸ್ ಸೆಕ್ಷನ್ 192 ಮತ್ತು 353 (1) (ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‍ಬುಕ್ ಪೇಜ್ ಡಿಪಿಯಲ್ಲಿರುವ ವ್ಯಕ್ತಿಗಾಗಿ ಪೊಲೀಸರ ಹುಡುಕಾಟ ಆರಂಭಿಸಿದ್ದಾರೆ. ಆರೋಪಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ | Pahalgam terror Attack: ಭಾರತೀಯ ಸೇನೆಯ ಭರ್ಜರಿ ಬೇಟೆ- ಲಷ್ಕರ್‌ ತೊಯ್ಬಾ ಟಾಪ್‌ ಕಮಾಂಡರ್‌ ಫಿನೀಶ್‌!

ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ಸಂಪೂರ್ಣ ಬೆಂಬಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ (‌Pahalgam terror Attack) ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅವರು ಇಂದು ಬೆಂಗಳೂರಿನ (Bengaluru) ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್ ಭೂಷಣ್ ಅವರಿಗೆ ಕನ್ನಡ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶ್ರದ್ಧಾಂಜಲಿಯನ್ನು ಅರ್ಪಿಸಿದ ಮುಖ್ಯಮಂತ್ರಿಗಳು, ಉತ್ತಮ ಶಿಕ್ಷಣ ಪಡೆದಿದ್ದ ತರುಣರಾಗಿದ್ದ ಭರತ್ ಭೂಷಣ್ ಅವರು ಉಗ್ರರ ದಾಳಿಗೆ ಬಲಿಯಾಗಿರುವುದು ದುರದೃಷ್ಟಕರ. ಉಗ್ರರ ದಾಳಿ ಅಮಾನವೀಯವಾದ ಕೃತ್ಯವಾಗಿದ್ದು, ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು.

ಅಮಾಯಕ ಜನರನ್ನು ಕೊಲ್ಲುವುದು ಹೇಯ ಕೃತ್ಯ

ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ಅಮಾಯಕ ಜನರನ್ನು ಹಾಡುಹಗಲೇ, ತಮ್ಮ ಕುಟುಂಬದವರ ಎದುರು ಕೊಲ್ಲುವುದು ಹೇಯ ಕೃತ್ಯ. ಕಾಶ್ಮೀರದಲ್ಲಿ ಈ ಹಿಂದೆಯೂ ಪುಲ್ವಾಮಾ ದಾಳಿ ಘಟನೆ ನಡೆದಿದ್ದು, ಪುನಃ ಅಂತಹ ಘಟನೆ ಮರುಕಳಿಸಿದೆ. ಇಂತಹ ಘಟನೆ ನಡೆಯಲು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವೂ ಇರಬಹುದು ಎಂದರು.

ಕನ್ನಡಿಗರಾದ ಭರತ್ ಭೂಷಣ್ , ಮಂಜುನಾಥ್ ರಾವ್ ಹಾಗೂ ಬೆಂಗಳೂರಿನಲ್ಲಿ ನೆಲಿಸಿದ್ದ ಮಧುಸೂದನ್ ಅವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಭರತ್ ಭೂಷಣ್ ಕುಟುಂಬದೊಂದಿಗೆ ಸಚಿವ ರಾಮಲಿಂಗಾರೆಡ್ಡಿಯವರು ಹಾಗೂ ಶಿವಮೊಗ್ಗದ ಮಂಜುನಾಥ್ ರಾವ್ ಅವರ ಕುಟುಂಬದವರನ್ನು ಸಚಿವ ಮಧು ಬಂಗಾರಪ್ಪ ಅವರು ಭೇಟಿಯಾಗಿದ್ದು, ಕುಟುಂಬಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ಕುಟುಂಬಕ್ಕೆ ಸರ್ಕಾರದ ಬೆಂಬಲವಿದೆ ಎಂದರು.

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಹಾಗೂ ಘಟನೆಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ಕರೆತರುವ ವ್ಯವಸ್ಥೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಅಧಿಕಾರಿಗಳ ತಂಡವನ್ನು ಕೂಡಲೇ ಕಳುಹಿಸಿಕೊಡಲಾಗಿತ್ತು. 175 ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುತ್ತಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದರು.

ಇದನ್ನೂ ಓದಿ: Pahalgam Terror Attack: ಪಹಲ್ಗಾಮ್‌ನಲ್ಲಿ ಉಗ್ರರಿಂದ ಮೃತಪಟ್ಟ ಭರತ್‌ ಭೂಷಣ್‌ ಅಂತಿಮ ದರ್ಶನ ಮಾಡಿದ ಸಿಎಂ

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವು ಕ್ರಮಗಳನ್ನು ಈಗಾಗಲೇ ಕೈಗೊಂಡಿದೆ. ಉಗ್ರರನ್ನು ಮಟ್ಟ ಹಾಕುವ ಇನ್ನೂ ಹೆಚ್ಚಿನ ಕ್ರಮಗಳಿಗೆ ರಾಜ್ಯಸರ್ಕಾರದ ಸಂಪೂರ್ಣ ಬೆಂಬಲವಿರಲಿದೆ ಎಂದರು.