Child death: ಪೋಷಕರೇ ಎಚ್ಚರ...ಎಚ್ಚರ! ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ದುರ್ಮರಣ
ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ.


ಮಂಗಳೂರು: ದಕ್ಷಿಣ ಕನ್ನಡದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಹತ್ತು ತಿಂಗಳ ಮಗುವೊಂದು ಬೀದಿಯ ತುಂಡನ್ನು ನುಂಗಿ ದಾರುಣವಾಗಿ ಅಸುನೀಸಿದೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ(Child death) ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಅಡ್ಯಾರ್ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತ ಪಟ್ಟಿದೆ.
ಏನಿದು ಘಟನೆ?
ಜೂನ್ 14ರ ಮಧ್ಯಾಹ್ನ 1:30 ರ ವೇಳೆ ಈ ಘಟನೆ ನಡೆದಿದೆ. ಮಗುವನ್ನು ಅಪರಾಹ್ನ 3:30 ರ ವೇಳೆಗೆ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆ ಫಲಿಸದೆ ಜೂನ್ 15ರ ಬೆಳಗ್ಗೆ 10:25 ರ ವೇಳೆ ಕೊನೆಯುಸಿರೆಳೆದಿದೆ.
'ತನ್ನ ಪತಿಯ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಸಾವಿಗೀಡಾಗಿದೆ. ಮನೆಯೊಳಗೆ ಬೀಡಿ ಸೇದಿ ಎಸೆಯದಂತೆ ಹಲವು ಬಾರಿ ಗಂಡನಿಗೆ ತಿಳಿಸದ್ದರೂ, ನಿರ್ಲಕ್ಷ್ಯ ಮಾಡಿದ ಪರಿಣಾಮ ಮಗುವಿನ ಪ್ರಾಣ ಹೋಗಿದೆ' ಎಂದು ತಾಯಿ ದೂರಿನಲ್ಲಿ ಆರೋಪಿಸಿರುವುದಾಗಿ ವರದಿಯಾಗಿದೆ.
ಈ ಸುದ್ದಿಯನ್ನೂ ಓದಿ: Viral Video: ಹೊತ್ತಿ ಉರಿಯುತ್ತಿದ್ದ ವಿಮಾನದಿಂದ ನಡೆದುಕೊಂಡು ಹೊರ ಬಂದ ವ್ಯಕ್ತಿ; ಹೊಸ ವಿಡಿಯೋ ವೈರಲ್
ಮಗುವಿನ ಪಾಲಿಗೆ ಯಮನಾದ ಕೂಲ್ ಡ್ರಿಂಕ್ಸ್ ಬಾಟಲಿ ಮುಚ್ಚಳ
ಪೋಷಕರ ಅಜಾಗೂರೂಕತೆಯಿಂದ ಮಕ್ಕಳು ಪ್ರಾಣ ಕಳೆದುಕೊಂಡ ಅಥವಾ ಗಂಭೀರ ಗಾಯಗಳಿಗೆ ಒಳಗಾದ ಅನೇಕ ಘಟನೆಗಳು ಸಂಭವಿಸಿವೆ. ಇತ್ತೀಚೆಗೆ ತೆಲಂಗಾಣದಲ್ಲಿ ನಡೆದ ಘಟನೆಯೊಂದರಲ್ಲಿ ಪೋಷಕರು ಗಮನಿಸದೆ ಬಿಟ್ಟಿದ್ದರಿಂದ 9 ತಿಂಗಳ ಗಂಡು ಮಗುವೊಂದು ಕೂಲ್ ಡ್ರಿಂಕ್ ಬಾಟಲಿಯ ಕ್ಯಾಪ್ ನುಂಗಿ ಪ್ರಾಣ ಕಳೆದುಕೊಂಡಿತ್ತು. ಈ ಸುದ್ದಿ ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Viral Video) ಆಗಿದೆ. ತೆಲಂಗಾಣದ ಉತ್ಕೂರ್ ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಮಗುವು ತನ್ನ ಕುಟುಂಬದವರೊಂದಿಗೆ ಭಾಗವಹಿಸಿತ್ತು. ಅಲ್ಲಿ ಮಗು ಆಕಸ್ಮಿಕವಾಗಿ ಕೂಲ್ ಡ್ರಿಂಕ್ ಬಾಟಲಿಯ ಕ್ಯಾಪ್ ನುಂಗಿ ದುರಂತವಾಗಿ ಸಾವನಪ್ಪಿದೆ ಎಂದು ಮೂಲಗಳು ತಿಳಿಸಿವೆ. ಮಗುವನ್ನು ರುದ್ರ ಅಯಾನ್ ಎಂದು ಗುರುತಿಸಲಾಗಿದ್ದು, ಪೋಷಕರ ಬೇಜವಾಬ್ದಾರಿ ವರ್ತನೆಯಿಂದಾಗಿ ಮಗು ಪ್ರಾಣ ಕಳೆದುಕೊಂಡಿದೆ ಎನ್ನಲಾಗಿದೆ.
ಮಗು ಕೂಲ್ ಡ್ರಿಂಕ್ ಬಾಟಲಿಯ ಕ್ಯಾಪ್ ನುಂಗಿದ ವಿಷಯ ಪೋಷಕರ ಗಮನಕ್ಕೆ ಬಂದ ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ನೀಡಿದರೂ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ.