Prize money: ಒಲಿಂಪಿಕ್ಸ್ ಪದಕ ವಿಜೇತರಿಗೆ 5 ಕೋಟಿ ರೂಪಾಯಿ ಬಹುಮಾನ: ಸಿಎಂ ಸಿದ್ದರಾಮಯ್ಯ
CM Siddaramaiah: ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ. ಡಿವೈಎಸ್ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ.2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ.3ಕ್ಕೆ ಹೆಚ್ವಿಸಿದ್ದೇವೆ. ಜತೆಗೆ ಒಲಂಪಿಕ್ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
-
ಮಂಗಳೂರು ಅ.27: ನಮ್ಮ ಭಾರತ ಜನಸಂಖ್ಯೆಯಲ್ಲಿ ನಂಬರ್ ಒನ್, ಒಲಿಂಪಿಕ್ ಪದಕದಲ್ಲೂ (Prize money For Olympic Winners) ನಂಬರ್ ಒನ್ ದೇಶ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದರು. ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ "ಚೀಫ್ ಮಿನಿಸ್ಟರ್ - ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ" ಯನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜತೆಗೆ ಇತರೆ ಹುದ್ದೆಗಳನ್ನೂ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.
ಡಿವೈಎಸ್ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ.2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ.3ಕ್ಕೆ ಹೆಚ್ವಿಸಿದ್ದೇವೆ. ಜತೆಗೆ ಒಲಂಪಿಕ್ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನವನ್ನೂ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲಾ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಪದಕ ತನ್ನಿ ಎಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.
ವಿಶ್ವದ ಅತ್ಯಂತ ಜನಪ್ರಿಯ ಆಟಗಳಲ್ಲಿ ಬ್ಯಾಂಡ್ಮಿಂಟನ್ ಕೂಡ ಒಂದು. ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ. ಸಿಂಧು ಭಾರತೀಯ ಬ್ಯಾಡ್ಮಿಂಟನ್ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ಈ ಸುದ್ದಿಯನ್ನೂ ಓದಿ | Karnataka Weather: ಯೆಲ್ಲೊ ಅಲರ್ಟ್; ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಹಿಂಗಾರು ಮಳೆ!
ಈ ಪಂದ್ಯಾವಳಿ ನಡೆಯುತ್ತಿರುವ ಈ ಉರ್ವ ಒಳಾಂಗಣ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ಮಾಡಿದ್ದು ನಾನೇ, ಉದ್ಘಾಟನೆ ಕೂಡ ನಾನೇ ಮಾಡಿದೆ. ನಮ್ಮ ಸರ್ಕಾರದ್ದೇ ಹಣ. ಹಿಂದಿನ ಬಿಜೆಪಿ ಸರ್ಕಾರ ಈ ಕ್ರೀಡಾಂಗಣ ಪೂರ್ಣಗೊಳ್ಳಲು ಸಹಕಾರ ನೀಡಲಿಲ್ಲ. ಆದರೆ ಮತ್ತೆ ನಾನೇ ಮುಖ್ಯಮಂತ್ರಿ ಆಗಿ ಬಂದು ಒಟ್ಟು 38 ಕೋಟಿ ರೂಪಾಯಿಗಳನ್ನು ನೀಡಿ ಕ್ರೀಡಾಂಗಣ ಪೂರ್ಣಗೊಳಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.