ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ನ್ಯಾಯಾಧೀಶರ ಮುಂದೆ ಮಾಹಿತಿ ನೀಡಿದ ಚಿನ್ನಯ್ಯ

Mask Man Chinnayya: ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯ (45) ಅವರನ್ನು ಬೆಳಿಗ್ಗೆ ಪೊಲೀಸ್ ಬೆಂಗಾವಲಿನಲ್ಲಿ ನ್ಯಾಯಾಲಯಕ್ಕೆ ಕರೆತರಲಾಯಿತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 183ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ: ಜಡ್ಜ್ ಮುಂದೆ ಮಾಹಿತಿ ನೀಡಿದ ಚಿನ್ನಯ್ಯ

-

ಹರೀಶ್‌ ಕೇರ ಹರೀಶ್‌ ಕೇರ Sep 29, 2025 7:50 AM

ಮಂಗಳೂರು: ಧರ್ಮಸ್ಥಳ ಪ್ರಕರಣದ (Dharmasthala Case) ದೂರುದಾರ ಚಿನ್ನಯ್ಯ (mask man chinnayya) ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಮುಂದೆ ಶನಿವಾರ ಸಂಜೆ ಹಾಜರಾಗಿದ್ದು, ಸ್ವಯಂಪ್ರೇರಿತ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಹೂಡಿದವರ ವಿವರಗಳನ್ನು ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.

ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯ (45) ಅವರನ್ನು ಬೆಳಿಗ್ಗೆ ಪೊಲೀಸ್ ಬೆಂಗಾವಲಿನಲ್ಲಿ ನ್ಯಾಯಾಲಯಕ್ಕೆ ಕರೆತರಲಾಯಿತು. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 183ರ ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜುಲೈ 11 ರಂದು ನ್ಯಾಯಾಲಯದ ಮುಂದೆ ಹೇಳಿಕೆ ದಾಖಲಿಸುವ ಸಮಯದಲ್ಲಿ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ವಿಶೇಷ ತನಿಖಾ ತಂಡ (SIT) ಚಿನ್ನಯ್ಯ ಅವರನ್ನು ಬಂಧಿಸಿತ್ತು.

ಪೊಲೀಸರ ಪ್ರಕಾರ, ಚಿನ್ನಯ್ಯ ತನ್ನ ಸ್ವಯಂಪ್ರೇರಿತ ಹೇಳಿಕೆಯಲ್ಲಿ, ಧರ್ಮಸ್ಥಳದಲ್ಲಿ ಎರಡು ದಶಕಗಳ ಅವಧಿಯಲ್ಲಿ ನಡೆದ ಅನೇಕ ಅತ್ಯಾಚಾರಗಳು, ಕೊಲೆಗಳು ಮತ್ತು ಸಾಮೂಹಿಕ ಅಂತ್ಯಕ್ರಿಯೆ ಕುರಿತಾದ ದೂರು ಮತ್ತು ಅವರು ಈ ಹಿಂದೆ ನೀಡಿದ ಸಾಕ್ಷ್ಯ ಎರಡೂ ಸುಳ್ಳು ಮತ್ತು ಕೆಲವು ವ್ಯಕ್ತಿಗಳ ಆಜ್ಞೆಯ ಮೇರೆಗೆ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ.

ತಾಂತ್ರಿಕ ಸಮಸ್ಯೆಗಳಿಂದಾಗಿ ಪೊಲೀಸರು ಆ ವ್ಯಕ್ತಿಗಳ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಾಗಲಿಲ್ಲ. ಜುಲೈ 11 ರಂದು ಸಾಕ್ಷ್ಯವಾಗಿ ತಾನು ಹಾಜರುಪಡಿಸಿದ ತಲೆಬುರುಡೆಯನ್ನು ಸೌಜನ್ಯಾಳ ಚಿಕ್ಕಪ್ಪ ವಿಠ್ಠಲ ಗೌಡ ತನಗೆ ನೀಡಿದ್ದ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: DK Shivakumar: ಬುರುಡೆ ಗ್ಯಾಂಗ್‌ ದೆಹಲಿಗೆ ಹೋಗಿದ್ದೆಲ್ಲ ಗೊತ್ತು: ಡಿಕೆ ಶಿವಕುಮಾರ್‌ ಬಾಂಬ್‌