ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Bank: ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ; ಷೇರು ಬೆಲೆ ಭಾರಿ ಕುಸಿತ!

Karnataka Bank: ವೈಯಕ್ತಿಕ ಕಾರಣಗಳನ್ನು ನೀಡಿ ಕರ್ಣಾಟಕ ಬ್ಯಾಂಕ್‌ನ ಎಂಡಿ-ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಅವರು ರಾಜೀನಾಮೆ ನೀಡಿದ್ದಾರೆ. ಎಂಡಿ-ಸಿಇಒ ಮತ್ತು ನಿರ್ದೇಶಕ ಸ್ಥಾನಕ್ಕೆ ಹೊಸಬರನ್ನು ನೇಮಿಸಲು ಬ್ಯಾಂಕ್‌ ಆಡಳಿತ ಮಂಡಳಿಯು ಶೋಧನಾ ಸಮಿತಿಯನ್ನು ರಚಿಸಿದೆ.

ಕರ್ಣಾಟಕ ಬ್ಯಾಂಕ್‌ ಎಂಡಿ-ಸಿಇಒ, ಕಾರ್ಯನಿರ್ವಾಹಕ ನಿರ್ದೇಶಕ ರಾಜೀನಾಮೆ!

Profile Prabhakara R Jun 30, 2025 6:43 PM

ಮಂಗಳೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಖಾಸಗಿ ವಲಯದ ಪ್ರಮುಖ ಬ್ಯಾಂಕ್ ಆದ ಕರ್ಣಾಟಕ ಬ್ಯಾಂಕ್‌ನ (Karnataka Bank) ಎಂಡಿ-ಸಿಇಒ ಶ್ರೀಕೃಷ್ಣನ್ ಹರಿಹರ ಶರ್ಮಾ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಅವರು ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ನೀಡಿ ಬ್ಯಾಂಕ್‌ನ ಉನ್ನತ ಅಧಿಕಾರಿಗಳು ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಸೋಮವಾರ ಕರ್ಣಾಟಕ ಬ್ಯಾಂಕ್‌ನ ಷೇರು ಬೆಲೆ ಶೇ.5.75ರಷ್ಟು ಕುಸಿದಿದೆ.

ಇನ್ನು ಎಂಡಿ-ಸಿಇಒ ಮತ್ತು ನಿರ್ದೇಶಕ ಸ್ಥಾನಕ್ಕೆ ಹೊಸಬರನ್ನು ನೇಮಿಸಲು ಬ್ಯಾಂಕ್‌ ಆಡಳಿತ ಮಂಡಳಿಯು ಶೋಧನಾ ಸಮಿತಿಯನ್ನು ರಚಿಸಿದೆ. ಎಂಡಿ-ಸಿಇಒ ಶರ್ಮಾ ಅವರ ರಾಜೀನಾಮೆ ಜುಲೈ 15 ರಿಂದ ಜಾರಿಗೆ ಬರಲಿದೆ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ರಾವ್ ಅವರ ರಾಜೀನಾಮೆ ಜುಲೈ 31 ರಿಂದ ಜಾರಿಗೆ ಬರಲಿದೆ ಎಂದು ಕರ್ನಾಟಕ ಬ್ಯಾಂಕ್ ತಿಳಿಸಿದೆ.

ಎಂಡಿ-ಸಿಇಒ ಶ್ರೀಕೃಷ್ಣನ್ ಅವರು ಮುಂಬೈಗೆ ಮರಳಲು ಬಯಸುತ್ತಿರುವುದರಿಂದ ರಾಜೀನಾಮೆಗೆ ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ. ಶೇಖರ್ ರಾವ್ ಅವರು ಮಂಗಳೂರಿಗೆ ಸ್ಥಳಾಂತರಗೊಳ್ಳಲು ಸಾಧ್ಯವಾಗದ ಕಾರಣ ಮತ್ತು ಇತರ ವೈಯಕ್ತಿಕ ಕಾರಣಗಳನ್ನು ನೀಡಿದ್ದಾರೆ. ಇವರ ರಾಜೀನಾಮೆಯನ್ನು ಕರ್ಣಾಟಕ ಬ್ಯಾಂಕ್‌ ಆಡಳಿತ ಮಂಡಳಿ ಸೋಮವಾರ ಅಂಗೀಕರಿಸಿದೆ. ಇದೇ ವೇಳೆ ಅನುಭವಿ ಹಿರಿಯ ಬ್ಯಾಂಕರ್​​ ಅನ್ನು ಮುಖ್ಯ ಕಾರ್ಯಾಚರಣಾ ಅಧಿಕಾರಿಯಾಗಿ (COO) ನೇಮಿಸಿದ್ದು, ಅವರು ಜುಲೈ 2ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಬ್ಯಾಂಕ್‌ ತಿಳಿಸಿದೆ.



ಈ ಸುದ್ದಿಯನ್ನೂ ಓದಿ | Rinku Singh: 9ನೇ ತರಗತಿ ಫೇಲ್‌ ಆದ ರಿಂಕುಗೆ ಶಿಕ್ಷಣಾಧಿಕಾರಿ ಹುದ್ದೆ; ಭಾರೀ ವಿರೋಧ

ಪ್ರಸಕ್ತ ಆರ್ಥಿಕ ವರ್ಷದ ಹಣಕಾಸು ವ್ಯವಹಾರಗಳ ಬಗ್ಗೆ ಚರ್ಚೆಗಳು ನಡೆದಿವೆ. ಅವುಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ. ಕರ್ಣಾಟಕ ಬ್ಯಾಂಕ್ ತನ್ನ ಕಾರ್ಯಚಟುವಟಿಕೆಗಳನ್ನು ಸ್ಥಿರವಾಗಿ ಮುಂದುವರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪಾಲುದಾರರಿಗೆ ಬ್ಯಾಂಕ್ ಭರವಸೆ ನೀಡಿದೆ.