Actor Jayakrishnan: ಕ್ಯಾಬ್ ಚಾಲಕನನ್ನು ಭಯೋತ್ಪಾದಕ ಎಂದು ಕರೆದ ಮಲಯಾಳಂ ನಟ; ಮಂಗಳೂರಿನಲ್ಲಿ ಬಂಧನ
ಕ್ಯಾಬ್ ಚಾಲಕನ್ನು ಭಯೋತ್ಪಾದಕ ಎಂದು ಕರೆದ ಮಲಯಾಳಂ ನಟ ಜಯಕೃಷ್ಣನ್ ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್ ಸೇರಿದಂತೆ ಮೂವರು ಕ್ಯಾಬ್ ಚಾಲಕ ಶಫೀಕ್ ಅಹ್ಮದ್ನನ್ನು ಭಯೋತ್ಪಾದಕನೆಂದು ನಿಂದಿಸಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.

-

ಮಂಗಳೂರು, ಅ. 11: ಮಲಯಾಳಂ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ (Actor Jayakrishnan) ಅವರನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಟನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಸೆ. 9ರಂದು ಈ ಘಟನೆ ನಡೆದಿದೆ.
ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್ ಸೇರಿದಂತೆ ಮೂವರು ಕ್ಯಾಬ್ ಚಾಲಕ ಶಫೀಕ್ ಅಹ್ಮದ್ನನ್ನು ಭಯೋತ್ಪಾದಕನೆಂದು ನಿಂದಿಸಿದ್ದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು. ಬಿಜೈ ಬಳಿಯ ಹೋಂ ಸ್ಟೇನಿಂದ ರೈಲ್ವೆ ಸ್ಟೇಷನ್ಗೆ ಹೋಗುವ ಮಾರ್ಗದಲ್ಲಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ: Actor Jayaram: ʼಕಾಂತಾರʼದ ದೊರೆ ರಾಜಶೇಖರ ಪಾತ್ರದಲ್ಲಿ ಮಿಂಚಿದ ಜಯರಾಮ್ ಹಿನ್ನೆಲೆ ಏನು? ಈ ಹಿಂದೆಯೂ ಕನ್ನಡ ಚಿತ್ರದಲ್ಲಿ ನಟಿಸಿದ್ದ ಮಲಯಾಳಂ ಸ್ಟಾರ್
ಘಟನೆಯ ಹಿನ್ನೆಲೆ
ಜಯಕೃಷ್ಣನ್, ಸಂತೋಷ್ ಅಬ್ರಾಹಂ ಮತ್ತು ವಿಮಲ್ ಮಂಗಳೂರಿಗೆ ಆಗಮಿಸಿದ್ದರು. ಇಲ್ಲಿ ಓಡಾಡಲು ಉಬರ್ ಬುಕ್ ಮಾಡಿದ್ದರು. ಉಬರ್ ಕ್ಯಾಬ್ ಚಾಲಕ ಶಫೀಕ್ ಅಹ್ಮದ್ ಕರೆ ಮಾಡಿ ಎಲ್ಲಿಗೆ ಬರಬೇಕು ಎಂದು ಕೇಳಿದರು. ಅದಕ್ಕೆ ಜಯಕೃಷ್ಣನ್ ಮತ್ತು ಸ್ನೇಹಿತರು ಮೊದಲು ಹಿಂದಿಯಲ್ಲಿ ಮಾತನಾಡಿದ್ದರು. ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ, ಮಲಯಾಳಂನಲ್ಲಿ ಮಾತನಾಡುವಂತೆ ಜಯಕೃಷ್ಣನ್ ಸೂಚಿಸಿದ್ದರು ಎನ್ನಲಾಗಿದೆ.
ಈ ವೇಳೆ ಜಯಕೃಷ್ಣನ್ ತನ್ನನ್ನು ಮುಸ್ಲಿಂ ಟೆರರಿಸ್ಟ್ ಎಂದೆಲ್ಲ ನಿಂದಿದ್ದಾರೆ ಎಂದು ಶಫೀಕ್ ಅಹ್ಮದ್ ಆರೋಪಿಸಿದ್ದಾರೆ. ‘ʼಮುಸ್ಲಿಂ ತೀವ್ರವಾದಿ, ಟೆರರಿಸ್ಟ್ ಎಂದು ಅಪಹಾಸ್ಯ ಮಾಡಿದ್ದಾರೆʼʼ ಎಂದು ಹೇಳಿದ್ದಾರೆ. ಅನೇಕ ಕ್ಯಾಬ್ ಚಾಲಕರಿಗೂ ಜಯಕೃಷ್ಣನ್ ಇದೇ ರೀತಿ ಆಟ ಆಡಿಸಿದ್ದಾರೆ ಎನ್ನಲಾಗಿದೆ. ಐಪಿಸಿ ಸೆಕ್ಷನ್ 352, 353(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಜಯಕೃಷ್ಣನ್ನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
51 ವರ್ಷದ ಜಯಕೃಷ್ಣನ್ ಮಾಲಿವುಡ್ನ ಜನಪ್ರಿಯ ಪೋಷಕ ನಟ ಎನಿಸಿಕೊಂಡಿದ್ದಾರೆ. ಮಲಯಾಳಂ ಕಿರುತೆರೆಯಲ್ಲಿಯೂ ನಟಿಸಿದ್ದಾರೆ. 1994ರಲ್ಲಿ ತೆರೆಕಂಡ ʼಹಬೆಲಿಂಡೆ ವಯಲುಗಳ್ʼ ಚಿತ್ರದ ಮೂಲಕ ಸಿನಿರಂಗ ಪ್ರವೇಶಿಸಿದರು. ಅದಾದ ಬಳಿಕ 30 ವರ್ಷಗಳ ಕಾಲ ನಿರಂತರವಾಗಿ ಅಭಿನಯಿಸುತ್ತಲೇ ಬಂದಿದ್ದಾರೆ. ತಮಿಳು ಕಿರುತೆರೆಯಲ್ಲಿಯೂ ನಟಿಸಿದ್ದಾರೆ.