ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ -ನೋಂದಣಿ ಕಛೇರಿ ಉದ್ಘಾಟನೆ
ಚತುರ್ದಾನ ಪರಂಪರೆಗೆ ಹೆಸರುವಾಸಿಯಾಗಿರುವ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 2025ನೇ ಸಾಲಿನ ಉಚಿತ ಸಾಮೂಹಿಕ ವಿವಾಹ ಮೇ 03ರಂದು ಗೋಧೂಳಿ ಲಗ್ನ ಸುಮೂಹರ್ತದಲ್ಲಿ ನಡೆಯಲಿದ್ದು, ಈ ಹಿನ್ನಲೆಯಲ್ಲಿ ನೋಂದಣಿ ಕಚೇರಿಯನ್ನು ಧರ್ಮಸ್ಥಳದಲ್ಲಿ ಫೆ.16ರಂದು ಉದ್ಘಾಟಿಸಲಾಯಿತು...

ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಕಛೇರಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2025ರ ಮೇ 03ರಂದು ಶನಿವಾರ ಸಂಜೆ ಗಂಟೆ 6.45ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಭಾನುವಾರ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ಎ.ವಿ. ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದೇವಳ ಪಾರುಪತ್ಯಗಾರರಾದ ಲಕ್ಷ್ಮಿನಾರಾಯಾಣ ರಾವ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್, ನಿವೃತ್ತ ಮುಖ್ಯೋಪಾಧ್ಯಾಯ ಧರ್ಣಪ್ಪ ಮಾಸ್ಟರ್, ಸಂತೋಷ್ ಗೌಡ, ಶಿವರಾಮ್, ಪವಿತ್ರ, ಭವಾನಿ, ಮಂಜುಳಾ ಉಪಸ್ಥಿತರಿದ್ದರು.
ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಭರಿಸಲಾಗುತ್ತಿದೆ. ಈ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿಚ್ಛಿಸುವವರು ಏಪ್ರಿಲ್ ೨೫ ರೊಳಗೆ ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 08256-26644, 9663464648, 814